<p><strong>ಸಾಗರ:</strong> ‘ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಸಿಗಂದೂರು ಚೌಡೇಶ್ವರಿ ದೇವಸ್ಥಾನವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ಸೇರಿಸಲು ಹೊರಟಿದ್ದ ಮಾಜಿ ಸಚಿವ ಹರತಾಳು ಹಾಲಪ್ಪ ಅವರಿಗೆ ಧರ್ಮಸ್ಥಳ ಕ್ಷೇತ್ರದ ಪರವಾಗಿ ಪ್ರತಿಭಟನೆ ನಡೆಸಲು ನೈತಿಕತೆ ಎಲ್ಲಿದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದ್ದಾರೆ.</p>.<p>ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗದವರಿಗೆ ಸೇರಿದ ಸಿಗಂದೂರು ದೇವಸ್ಥಾನವನ್ನು ಮುಳುಗಿಸುವ ಪ್ರಯತ್ನ ಮಾಡಿದ್ದ ಹಾಲಪ್ಪ ಅವರು ಈಗ ಧರ್ಮಸ್ಥಳ ಉಳಿಸಿ ಎಂದು ದೇವರು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವುದು ಹಾಸ್ಯಾಸ್ಪದ ಸಂಗತಿಯಾಗಿದೆ ಎಂದು ಟೀಕಿಸಿದ್ದಾರೆ.</p>.<p>ಧರ್ಮಸ್ಥಳ ಕ್ಷೇತ್ರದ ಮೇಲೆ ಅಪವಾದ ಬಂದಾಗ ರಾಜ್ಯ ಸರ್ಕಾರ ಸತ್ಯಾಸತ್ಯತೆಯನ್ನು ಬಯಲಿಗೆಳೆಯಲು ಎಸ್ಐಟಿ ನೇಮಿಸಿದಾಗ ರಾಜ್ಯದ ಬಿಜೆಪಿ ಮುಖಂಡರು ಅದನ್ನು ಸ್ವಾಗತಿಸಿದ್ದರು. ರಾಜ್ಯ ಸರ್ಕಾರದ ಈ ದಿಟ್ಟ ನಿರ್ಧಾರದಿಂದ ಧರ್ಮಸ್ಥಳದ ಮೇಲಿನ ಆರೋಪ ಸುಳ್ಳು ಎಂಬುದು ಲೋಕಕ್ಕೆ ಗೊತ್ತಾಗಿದೆ. ಈಗ ರಾಜಕೀಯ ಲಾಭಕ್ಕಾಗಿ ಬಿಜೆಪಿಯವರು ಧರ್ಮಸ್ಥಳದ ಹೆಸರಿನಲ್ಲಿ ಯಾತ್ರೆ ಮಾಡುತ್ತಿದ್ದಾರೆ ಎಂದು ದೂರಿದರು.</p>.<p>ಹಿಂದುತ್ವ ಅಥವಾ ಧರ್ಮಸ್ಥಳವನ್ನು ರಾಜ್ಯದ ಜನರು ಬಿಜೆಪಿಗೆ ಬರೆದುಕೊಟ್ಟಿಲ್ಲ. ಧರ್ಮಸ್ಥಳದ ವಿರುದ್ಧ ನಡೆದ ಷಡ್ಯಂತ್ರವನ್ನು ರಾಜ್ಯ ಸರ್ಕಾರ ಬಯಲಿಗೆ ಎಳೆದಿದೆ. ಇದರ ಶ್ರೇಯಸ್ಸು ಕಾಂಗ್ರೆಸ್ಗೆ ದೊರಕುತ್ತದೆ ಎಂಬ ಭಯದಿಂದ ಬಿಜೆಪಿಯವರು ಯಾತ್ರೆ ಮಾಡುತ್ತಿದ್ದಾರೆ ಎಂದು ಹೇಳಿದರು.</p>.<p>ಮಲೆನಾಡು ಭಾಗದಲ್ಲಿ ಈ ವರ್ಷ ವಾಡಿಕೆಗಿಂತ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು ಭತ್ತ, ಜೋಳ, ಅಡಿಕೆ ಬೆಳೆಗಾರರಿಗೆ ಅಧಿಕ ನಷ್ಟ ಉಂಟಾಗಿದೆ. ಈಗಾಗಲೇ ವಿಧಾನಸಭೆಯ ಅಧಿವೇಶನದಲ್ಲಿ ಪರಿಹಾರಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿದ್ದೇನೆ. ಈ ಪ್ರಯತ್ನವನ್ನು ಮುಂದುವರೆಸಲಾಗುವುದು ಎಂದುಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ‘ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಸಿಗಂದೂರು ಚೌಡೇಶ್ವರಿ ದೇವಸ್ಥಾನವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ಸೇರಿಸಲು ಹೊರಟಿದ್ದ ಮಾಜಿ ಸಚಿವ ಹರತಾಳು ಹಾಲಪ್ಪ ಅವರಿಗೆ ಧರ್ಮಸ್ಥಳ ಕ್ಷೇತ್ರದ ಪರವಾಗಿ ಪ್ರತಿಭಟನೆ ನಡೆಸಲು ನೈತಿಕತೆ ಎಲ್ಲಿದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದ್ದಾರೆ.</p>.<p>ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗದವರಿಗೆ ಸೇರಿದ ಸಿಗಂದೂರು ದೇವಸ್ಥಾನವನ್ನು ಮುಳುಗಿಸುವ ಪ್ರಯತ್ನ ಮಾಡಿದ್ದ ಹಾಲಪ್ಪ ಅವರು ಈಗ ಧರ್ಮಸ್ಥಳ ಉಳಿಸಿ ಎಂದು ದೇವರು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವುದು ಹಾಸ್ಯಾಸ್ಪದ ಸಂಗತಿಯಾಗಿದೆ ಎಂದು ಟೀಕಿಸಿದ್ದಾರೆ.</p>.<p>ಧರ್ಮಸ್ಥಳ ಕ್ಷೇತ್ರದ ಮೇಲೆ ಅಪವಾದ ಬಂದಾಗ ರಾಜ್ಯ ಸರ್ಕಾರ ಸತ್ಯಾಸತ್ಯತೆಯನ್ನು ಬಯಲಿಗೆಳೆಯಲು ಎಸ್ಐಟಿ ನೇಮಿಸಿದಾಗ ರಾಜ್ಯದ ಬಿಜೆಪಿ ಮುಖಂಡರು ಅದನ್ನು ಸ್ವಾಗತಿಸಿದ್ದರು. ರಾಜ್ಯ ಸರ್ಕಾರದ ಈ ದಿಟ್ಟ ನಿರ್ಧಾರದಿಂದ ಧರ್ಮಸ್ಥಳದ ಮೇಲಿನ ಆರೋಪ ಸುಳ್ಳು ಎಂಬುದು ಲೋಕಕ್ಕೆ ಗೊತ್ತಾಗಿದೆ. ಈಗ ರಾಜಕೀಯ ಲಾಭಕ್ಕಾಗಿ ಬಿಜೆಪಿಯವರು ಧರ್ಮಸ್ಥಳದ ಹೆಸರಿನಲ್ಲಿ ಯಾತ್ರೆ ಮಾಡುತ್ತಿದ್ದಾರೆ ಎಂದು ದೂರಿದರು.</p>.<p>ಹಿಂದುತ್ವ ಅಥವಾ ಧರ್ಮಸ್ಥಳವನ್ನು ರಾಜ್ಯದ ಜನರು ಬಿಜೆಪಿಗೆ ಬರೆದುಕೊಟ್ಟಿಲ್ಲ. ಧರ್ಮಸ್ಥಳದ ವಿರುದ್ಧ ನಡೆದ ಷಡ್ಯಂತ್ರವನ್ನು ರಾಜ್ಯ ಸರ್ಕಾರ ಬಯಲಿಗೆ ಎಳೆದಿದೆ. ಇದರ ಶ್ರೇಯಸ್ಸು ಕಾಂಗ್ರೆಸ್ಗೆ ದೊರಕುತ್ತದೆ ಎಂಬ ಭಯದಿಂದ ಬಿಜೆಪಿಯವರು ಯಾತ್ರೆ ಮಾಡುತ್ತಿದ್ದಾರೆ ಎಂದು ಹೇಳಿದರು.</p>.<p>ಮಲೆನಾಡು ಭಾಗದಲ್ಲಿ ಈ ವರ್ಷ ವಾಡಿಕೆಗಿಂತ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು ಭತ್ತ, ಜೋಳ, ಅಡಿಕೆ ಬೆಳೆಗಾರರಿಗೆ ಅಧಿಕ ನಷ್ಟ ಉಂಟಾಗಿದೆ. ಈಗಾಗಲೇ ವಿಧಾನಸಭೆಯ ಅಧಿವೇಶನದಲ್ಲಿ ಪರಿಹಾರಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿದ್ದೇನೆ. ಈ ಪ್ರಯತ್ನವನ್ನು ಮುಂದುವರೆಸಲಾಗುವುದು ಎಂದುಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>