‘ಮುಖ್ಯಮಂತ್ರಿ ಸ್ಥಾನಕ್ಕೆ ₹ 2,500 ಕೋಟಿ ನೀಡುವಂತೆ ಕೇಂದ್ರದ ನಾಯಕರೇ ಕೇಳಿದ್ದರು ಎಂದು ಯತ್ನಾಳ್ ಹೇಳಿದ್ದಾರೆ. ಅವರಿಗೆ ಈ ರೀತಿ ಒತ್ತಡ ಹಾಕಿದವರು ಯಾರು ಎಂಬುದನ್ನು ಬಹಿರಂಗಪಡಿಸಲಿ. ಅವರ ಈ ರೀತಿಯ ಹೇಳಿಕೆಗಳು ಪಕ್ಷಕ್ಕೆ ಮುಜುಗರ ತಂದಿವೆ. ಹೇಳಿಕೆಯನ್ನು ರಾಜ್ಯ, ರಾಷ್ಟ್ರೀಯ ನಾಯಕರು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಪಕ್ಷದ ಹೈಕಮಾಂಡ್ ಯತ್ನಾಳ್ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ’ ಎಂದರು.