<p><strong>ಭದ್ರಾವತಿ</strong>: ‘ಬಿಜೆಪಿ ಒಂದು ತಾತ್ವಿಕ ವಿಚಾರಕ್ಕೆ ಬದ್ಧವಾಗಿ ಕೆಲಸ ಮಾಡುತ್ತಿದೆ. ರಾಜಕೀಯ ಕಾರಣಕ್ಕಾಗಿ ಅವುಗಳನ್ನು ಬದಿಗಿಡುವ ಕೆಲಸ ಎಂದಿಗೂ ಮಾಡಿಲ್ಲ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದರು.</p>.<p>ಶನಿವಾರಕ್ಷೇತ್ರ ಬಿಜೆಪಿ ಕಾರ್ಯಕರ್ತರ ಪ್ರಶಿಕ್ಷಣ ವರ್ಗ ಉದ್ಘಾಟಿಸಿ ಮಾತನಾಡಿದರು.</p>.<p>‘ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ ಪಂಚನಿಷ್ಠೆಗಳ ತತ್ವದಡಿ ಕೆಲಸ ಮಾಡುತ್ತಿರುವ ಬಿಜೆಪಿ ಪ್ರತಿ ಕಾರ್ಯಕರ್ತರಿಗೆ ಪ್ರಶಿಕ್ಷಣ ಮೂಲಕ ಸಂಸ್ಕಾರ ನೀಡುವ ಕೆಲಸ ಮಾಡುತ್ತಿದೆ.ರಾಷ್ಟ್ರ ಮೊದಲು ಎಂಬ ಧ್ಯೇಯ ಹೊತ್ತು ಕೆಲಸ ಮಾಡುತ್ತಿದೆ’ ಎಂದು ಹೇಳಿದರು.</p>.<p>‘ಪ್ರಶಿಕ್ಷಣ ಎಂಬುದು ಪಕ್ಷ ಸಂಘಟನೆ ಭಾಗ. ಅದರ ಮೂಲಕ ಕಾರ್ಯಕರ್ತರ ಮನೋವಿಕಾಸ ಮಾಡುವ ಕೆಲಸ ನಡೆಯುತ್ತಿದೆ. ಈ ರೀತಿಯ ಸಂಘಟನಾ ಕೆಲಸ ಬೇರೆ ಪಕ್ಷದಲ್ಲಿಲ್ಲ’ ಎಂದರು.</p>.<p>‘ಜಿಲ್ಲೆಯಲ್ಲಿ ಎಲ್ಲೆಡೆ ಬಿಜೆಪಿ ಶಾಸಕರಿದ್ದಾರೆ. ಮುಂದಿನ ಬಾರಿಯೂ ನಮ್ಮ ಪಕ್ಷದ ಶಾಸಕರು ಇರುವ ರೀತಿಯಲ್ಲಿ ಪಕ್ಷ ಸಂಘಟನೆ ಮಾಡೋಣ. ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಕಾರ್ಯಕರ್ತರು ಗೆಲ್ಲುವ ರೀತಿಯಲ್ಲಿ ಸಂಕಲ್ಪ ಮಾಡೋಣ’ ಎಂದು ಸಲಹೆ ನೀಡಿದರು.</p>.<p>ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಧರ್ಮಪ್ರಸಾದ್, ಬಿ.ಕೆ. ಶ್ರೀನಾಥ್, ಶಿವರಾಜ್, ಪ್ರಶಿಕ್ಷಣ ಸಹ ಪ್ರಮುಖ್ ವೆಂಕ್ಯಾನಾಯ್ಕ, ಕ್ಷೇತ್ರ ಅಧ್ಯಕ್ಷ ಎಂ. ಪ್ರಭಾಕರ್ ಇದ್ದರು.</p>.<p>ಗಾಯತ್ರಿ ಪ್ರಾರ್ಥಿಸಿದರು. ಮಂಜಪ್ಪ ನಿರೂಪಿಸಿದರು. ಚನ್ನೇಶ ಸ್ವಾಗತಿಸಿದರು. ಹನುಮಂತನಾಯ್ಕ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ</strong>: ‘ಬಿಜೆಪಿ ಒಂದು ತಾತ್ವಿಕ ವಿಚಾರಕ್ಕೆ ಬದ್ಧವಾಗಿ ಕೆಲಸ ಮಾಡುತ್ತಿದೆ. ರಾಜಕೀಯ ಕಾರಣಕ್ಕಾಗಿ ಅವುಗಳನ್ನು ಬದಿಗಿಡುವ ಕೆಲಸ ಎಂದಿಗೂ ಮಾಡಿಲ್ಲ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದರು.</p>.<p>ಶನಿವಾರಕ್ಷೇತ್ರ ಬಿಜೆಪಿ ಕಾರ್ಯಕರ್ತರ ಪ್ರಶಿಕ್ಷಣ ವರ್ಗ ಉದ್ಘಾಟಿಸಿ ಮಾತನಾಡಿದರು.</p>.<p>‘ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ ಪಂಚನಿಷ್ಠೆಗಳ ತತ್ವದಡಿ ಕೆಲಸ ಮಾಡುತ್ತಿರುವ ಬಿಜೆಪಿ ಪ್ರತಿ ಕಾರ್ಯಕರ್ತರಿಗೆ ಪ್ರಶಿಕ್ಷಣ ಮೂಲಕ ಸಂಸ್ಕಾರ ನೀಡುವ ಕೆಲಸ ಮಾಡುತ್ತಿದೆ.ರಾಷ್ಟ್ರ ಮೊದಲು ಎಂಬ ಧ್ಯೇಯ ಹೊತ್ತು ಕೆಲಸ ಮಾಡುತ್ತಿದೆ’ ಎಂದು ಹೇಳಿದರು.</p>.<p>‘ಪ್ರಶಿಕ್ಷಣ ಎಂಬುದು ಪಕ್ಷ ಸಂಘಟನೆ ಭಾಗ. ಅದರ ಮೂಲಕ ಕಾರ್ಯಕರ್ತರ ಮನೋವಿಕಾಸ ಮಾಡುವ ಕೆಲಸ ನಡೆಯುತ್ತಿದೆ. ಈ ರೀತಿಯ ಸಂಘಟನಾ ಕೆಲಸ ಬೇರೆ ಪಕ್ಷದಲ್ಲಿಲ್ಲ’ ಎಂದರು.</p>.<p>‘ಜಿಲ್ಲೆಯಲ್ಲಿ ಎಲ್ಲೆಡೆ ಬಿಜೆಪಿ ಶಾಸಕರಿದ್ದಾರೆ. ಮುಂದಿನ ಬಾರಿಯೂ ನಮ್ಮ ಪಕ್ಷದ ಶಾಸಕರು ಇರುವ ರೀತಿಯಲ್ಲಿ ಪಕ್ಷ ಸಂಘಟನೆ ಮಾಡೋಣ. ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಕಾರ್ಯಕರ್ತರು ಗೆಲ್ಲುವ ರೀತಿಯಲ್ಲಿ ಸಂಕಲ್ಪ ಮಾಡೋಣ’ ಎಂದು ಸಲಹೆ ನೀಡಿದರು.</p>.<p>ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಧರ್ಮಪ್ರಸಾದ್, ಬಿ.ಕೆ. ಶ್ರೀನಾಥ್, ಶಿವರಾಜ್, ಪ್ರಶಿಕ್ಷಣ ಸಹ ಪ್ರಮುಖ್ ವೆಂಕ್ಯಾನಾಯ್ಕ, ಕ್ಷೇತ್ರ ಅಧ್ಯಕ್ಷ ಎಂ. ಪ್ರಭಾಕರ್ ಇದ್ದರು.</p>.<p>ಗಾಯತ್ರಿ ಪ್ರಾರ್ಥಿಸಿದರು. ಮಂಜಪ್ಪ ನಿರೂಪಿಸಿದರು. ಚನ್ನೇಶ ಸ್ವಾಗತಿಸಿದರು. ಹನುಮಂತನಾಯ್ಕ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>