<p><strong>ಸಾಗರ: </strong>ಕರ್ನಾಟಕ ಸರ್ಕಾರವು ಬ್ರಾಹ್ಮಣ ಅಭಿವೃದ್ಧಿ ನಿಗಮದ ಮೂಲಕ ಹಲವು ಸವಲತ್ತುಗಳನ್ನು ಬ್ರಾಹ್ಮಣ ಸಮುದಾಯಕ್ಕೆ ಕಲ್ಪಿಸಿದ್ದು ಇದರ ಸದುಪಯೋಗ ಪಡೆಯಬೇಕಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮದ ಜಿಲ್ಲಾ ನಿರ್ದೇಶಕ ಪಿ.ಎಂ.ಮಾಲತೇಶ್ ಹೇಳಿದರು.</p><p>ಇಲ್ಲಿನ ಅಜಿತ್ ಸಭಾಭವನದಲ್ಲಿ ಶನಿವಾರ ನಡೆದ ಹವ್ಯಕ ಆತ್ಮಬಂಧು ಸ್ವಸಹಾಯ ಒಕ್ಕೂಟದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಹಿತಿ ಕೊರತೆಯಿಂದ ಅರ್ಹ ಫಲಾನುಭವಿಗಳು ಬ್ರಾಹ್ಮಣ ಅಭಿವೃದ್ಧಿ ನಿಗಮದ ಸೌಲಭ್ಯಗಳಿಂದ ವಂಚಿತರಾಗುತ್ತಿರುವುದು ಬೇಸರದ ಸಂಗತಿ ಎಂದರು.</p><p>ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು, ನೌಕರರ ಮಕ್ಕಳ ಶಿಕ್ಷಣಕ್ಕೆ ನಿಗಮದಿಂದ ಪ್ರೋತ್ಸಾಹಧನ ನೀಡಲಾಗುತ್ತಿದೆ. ವಿಪ್ರ ಸಮುದಾಯದ ಯುವ ಉದ್ಯಮಿಗಳಿಗೆ ನೇರ ಸಾಲ ಯೋಜನೆಯಡಿ ಉದ್ದಿಮೆ ಆರಂಭಿಸಲು ₹2 ಲಕ್ಷ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.</p><p>ವಿವಿಧ ಕ್ಷೇತ್ರಗಳ ಸಾಧಕರಾದ ರೇಷ್ಮಾ ರಘುಪತಿ, ವೀಣಾ ಪ್ರಸನ್ನ, ಕೆ.ಎಸ್.ಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು. ನಗರಸಭೆ ಮಾಜಿ ಅಧ್ಯಕ್ಷೆ ಮೈತ್ರಿ ಪಾಟೀಲ್, ಲೆಕ್ಕ ಪರಿಶೋಧಕ ಬಿ.ವಿ.ರವೀಂದ್ರನಾಥ್, ಸಾಮಾಜಿಕ ಕಾರ್ಯಕರ್ತ ಮ.ಸ.ನಂಜುಂಡಸ್ವಾಮಿ, ರೋಹಿಣಿ ಶರ್ಮ, ಬಿ.ವಿ.ಮಹಾಬಲಗಿರಿ, ಎಂ.ಎಲ್.ಹಿರಿಯಣ್ಣ, ನಾಗೇಶ್ ರಾವ್, ಬಿ.ಕೆ.ನಾರಾಯಣ ರಾವ್ ಇದ್ದರು.</p><p>ಹವ್ಯಕ ಆತ್ಮಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಗಿರಿಜಾ ರಾಮಚಂದ್ರ ಅಧ್ಯಕ್ಷತೆ ವಹಿಸಿದ್ದರು. ಗೀತಾ ಕೃಷ್ಣಮೂರ್ತಿ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಶುಭಾ ನಾಗರಾಜ್ ಸ್ವಾಗತಿಸಿದರು. ಬಿ.ಎಲ್.ದಯಾನಂದ ವಂದಿಸಿದರು. ನಿರ್ಮಲಾ ಕೃಷ್ಣಮೂರ್ತಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಕರ್ನಾಟಕ ಸರ್ಕಾರವು ಬ್ರಾಹ್ಮಣ ಅಭಿವೃದ್ಧಿ ನಿಗಮದ ಮೂಲಕ ಹಲವು ಸವಲತ್ತುಗಳನ್ನು ಬ್ರಾಹ್ಮಣ ಸಮುದಾಯಕ್ಕೆ ಕಲ್ಪಿಸಿದ್ದು ಇದರ ಸದುಪಯೋಗ ಪಡೆಯಬೇಕಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮದ ಜಿಲ್ಲಾ ನಿರ್ದೇಶಕ ಪಿ.ಎಂ.ಮಾಲತೇಶ್ ಹೇಳಿದರು.</p><p>ಇಲ್ಲಿನ ಅಜಿತ್ ಸಭಾಭವನದಲ್ಲಿ ಶನಿವಾರ ನಡೆದ ಹವ್ಯಕ ಆತ್ಮಬಂಧು ಸ್ವಸಹಾಯ ಒಕ್ಕೂಟದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಹಿತಿ ಕೊರತೆಯಿಂದ ಅರ್ಹ ಫಲಾನುಭವಿಗಳು ಬ್ರಾಹ್ಮಣ ಅಭಿವೃದ್ಧಿ ನಿಗಮದ ಸೌಲಭ್ಯಗಳಿಂದ ವಂಚಿತರಾಗುತ್ತಿರುವುದು ಬೇಸರದ ಸಂಗತಿ ಎಂದರು.</p><p>ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು, ನೌಕರರ ಮಕ್ಕಳ ಶಿಕ್ಷಣಕ್ಕೆ ನಿಗಮದಿಂದ ಪ್ರೋತ್ಸಾಹಧನ ನೀಡಲಾಗುತ್ತಿದೆ. ವಿಪ್ರ ಸಮುದಾಯದ ಯುವ ಉದ್ಯಮಿಗಳಿಗೆ ನೇರ ಸಾಲ ಯೋಜನೆಯಡಿ ಉದ್ದಿಮೆ ಆರಂಭಿಸಲು ₹2 ಲಕ್ಷ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.</p><p>ವಿವಿಧ ಕ್ಷೇತ್ರಗಳ ಸಾಧಕರಾದ ರೇಷ್ಮಾ ರಘುಪತಿ, ವೀಣಾ ಪ್ರಸನ್ನ, ಕೆ.ಎಸ್.ಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು. ನಗರಸಭೆ ಮಾಜಿ ಅಧ್ಯಕ್ಷೆ ಮೈತ್ರಿ ಪಾಟೀಲ್, ಲೆಕ್ಕ ಪರಿಶೋಧಕ ಬಿ.ವಿ.ರವೀಂದ್ರನಾಥ್, ಸಾಮಾಜಿಕ ಕಾರ್ಯಕರ್ತ ಮ.ಸ.ನಂಜುಂಡಸ್ವಾಮಿ, ರೋಹಿಣಿ ಶರ್ಮ, ಬಿ.ವಿ.ಮಹಾಬಲಗಿರಿ, ಎಂ.ಎಲ್.ಹಿರಿಯಣ್ಣ, ನಾಗೇಶ್ ರಾವ್, ಬಿ.ಕೆ.ನಾರಾಯಣ ರಾವ್ ಇದ್ದರು.</p><p>ಹವ್ಯಕ ಆತ್ಮಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಗಿರಿಜಾ ರಾಮಚಂದ್ರ ಅಧ್ಯಕ್ಷತೆ ವಹಿಸಿದ್ದರು. ಗೀತಾ ಕೃಷ್ಣಮೂರ್ತಿ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಶುಭಾ ನಾಗರಾಜ್ ಸ್ವಾಗತಿಸಿದರು. ಬಿ.ಎಲ್.ದಯಾನಂದ ವಂದಿಸಿದರು. ನಿರ್ಮಲಾ ಕೃಷ್ಣಮೂರ್ತಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>