ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೋಟೊ ವಿಚಾರದಲ್ಲಿ ಸಹೋದರರ ಜಗಳ: ಹಲ್ಲೆ

Last Updated 7 ಜನವರಿ 2021, 3:58 IST
ಅಕ್ಷರ ಗಾತ್ರ

ಶಿವಮೊಗ್ಗ:ತಾಲ್ಲೂಕಿನ ಆಯನೂರು ಸಮೀಪದ ಆನೆಸರ ಚನ್ನಳ್ಳಿ ಗ್ರಾಮದಲ್ಲಿ ಬುಧವಾರ ಯುವತಿಯೊಬ್ಬಳ ಫೋಟೊ ವಿಚಾರವಾಗಿ ಸಹೋದರರ ನಡುವೆ ಗಲಾಟೆ ನಡೆದು ಪರಸ್ಪರ ಹಲ್ಲೆ ನಡೆದಿದೆ.

ರಾಮನಾಯ್ಕ ಎಂಬುವವರ ಮಗನ ಮೊಬೈಲ್‌ನಲ್ಲಿ ಈರಾನಾಯ್ಕ ಅವರ ಪುತ್ರಿಯ ಫೋಟೊ ಇದೆ ಎನ್ನುವ ವಿಚಾರಕ್ಕೆ ಈರಾನಾಯ್ಕ ಅವರು ಸಹೋದರ ರಾಮನಾಯ್ಕ ಜೊತೆ ಜಗಳವಾಡಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿ ಪರಸ್ಪರ ಹಲ್ಲೆ ನಡೆದಿದೆ.

ಈರಾನಾಯ್ಕ ಹಾಗೂ ಅವರ ಪುತ್ರ ರಾಮನಾಯ್ಕ, ನಾಗನಾಯ್ಕ, ಕಿಶನ್, ಅನಿತಾ ಬಾಯಿ ಮೇಲೆ ಹಲ್ಲೆ ನಡೆದಿದೆ. ಹಲ್ಲೆಯಿಂದಾಗಿ ಒಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT