<p><strong>ಶಿವಮೊಗ್ಗ: </strong>‘ರಾಜ್ಯದಲ್ಲಿ ವಿವಿಧ ಪಕ್ಷಗಳ ಹಲವು ಮುಖಂಡರು ಬಿಜೆಪಿ ಸೇರುವ ಹಾದಿಯಲ್ಲಿದ್ದಾರೆ. ಅವರು ಸೇರ್ಪಡೆಯಾದ ನಂತರ ನಮಗೆ ಮತ್ತಷ್ಟು ಬಲ ಬರಲಿದೆ’ ಎಂದು ಶಾಸಕ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಸುಭದ್ರವಾಗುತ್ತಿದೆ. ಹೀಗಾಗಿ, ಬಿಜೆಪಿಯ ತತ್ವ, ಸಿದ್ಧಾಂತ ಹಾಗೂ ಮೋದಿ ಅವರ ನಾಯಕತ್ವ ಮೆಚ್ಚಿ ಅನೇಕ ಮುಖಂಡರು ನಮ್ಮ ಪಕ್ಷಕ್ಕೆ ಸೇರುತ್ತಿದ್ದಾರೆ ಎಂದು ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p><a href="https://www.prajavani.net/district/dharwad/ban-congress-party-urges-bjp-karnataka-president-nalin-kumar-kateel-976320.html" itemprop="url">ಕಾಂಗ್ರೆಸ್ ಪಕ್ಷ ನಿಷೇಧಿಸಿ: ನಳಿನ್ ಕುಮಾರ್ ಕಟೀಲ್ </a></p>.<p>‘ಮುಖಂಡರು ಯಾವುದೇ ಷರತ್ತಿಲ್ಲದೇ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದು, ಎಲ್ಲರನ್ನೂ ಸ್ವಾಗತಿಸುತ್ತೇನೆ. ಪಕ್ಷಕ್ಕೆ ಸೇರುವವರಿಗೆ ಅನುಭವ, ಅರ್ಹತೆ ಆಧಾರದಲ್ಲಿ ಸೂಕ್ತ ಸ್ಥಾನಮಾನ ನೀಡಲು ಪಕ್ಷದಲ್ಲಿ ಚಿಂತನೆ ನಡೆದಿದೆ. ಎಲ್ಲರೊಂದಿಗೆ ಚರ್ಚಿಸಿ, ಅದನ್ನು ಮಾಡಲಾಗುತ್ತದೆ’ ಎಂದರು.</p>.<p>ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಪಣದಲ್ಲಿ ಬಿಜೆಪಿ ಪಕ್ಷ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>‘ರಾಜ್ಯದಲ್ಲಿ ವಿವಿಧ ಪಕ್ಷಗಳ ಹಲವು ಮುಖಂಡರು ಬಿಜೆಪಿ ಸೇರುವ ಹಾದಿಯಲ್ಲಿದ್ದಾರೆ. ಅವರು ಸೇರ್ಪಡೆಯಾದ ನಂತರ ನಮಗೆ ಮತ್ತಷ್ಟು ಬಲ ಬರಲಿದೆ’ ಎಂದು ಶಾಸಕ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಸುಭದ್ರವಾಗುತ್ತಿದೆ. ಹೀಗಾಗಿ, ಬಿಜೆಪಿಯ ತತ್ವ, ಸಿದ್ಧಾಂತ ಹಾಗೂ ಮೋದಿ ಅವರ ನಾಯಕತ್ವ ಮೆಚ್ಚಿ ಅನೇಕ ಮುಖಂಡರು ನಮ್ಮ ಪಕ್ಷಕ್ಕೆ ಸೇರುತ್ತಿದ್ದಾರೆ ಎಂದು ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p><a href="https://www.prajavani.net/district/dharwad/ban-congress-party-urges-bjp-karnataka-president-nalin-kumar-kateel-976320.html" itemprop="url">ಕಾಂಗ್ರೆಸ್ ಪಕ್ಷ ನಿಷೇಧಿಸಿ: ನಳಿನ್ ಕುಮಾರ್ ಕಟೀಲ್ </a></p>.<p>‘ಮುಖಂಡರು ಯಾವುದೇ ಷರತ್ತಿಲ್ಲದೇ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದು, ಎಲ್ಲರನ್ನೂ ಸ್ವಾಗತಿಸುತ್ತೇನೆ. ಪಕ್ಷಕ್ಕೆ ಸೇರುವವರಿಗೆ ಅನುಭವ, ಅರ್ಹತೆ ಆಧಾರದಲ್ಲಿ ಸೂಕ್ತ ಸ್ಥಾನಮಾನ ನೀಡಲು ಪಕ್ಷದಲ್ಲಿ ಚಿಂತನೆ ನಡೆದಿದೆ. ಎಲ್ಲರೊಂದಿಗೆ ಚರ್ಚಿಸಿ, ಅದನ್ನು ಮಾಡಲಾಗುತ್ತದೆ’ ಎಂದರು.</p>.<p>ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಪಣದಲ್ಲಿ ಬಿಜೆಪಿ ಪಕ್ಷ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>