ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆ ಸಂದರ್ಭದಲ್ಲಿ ಅದೊಂದು ರಾಜಕೀಯ ಅಸಹ್ಯ ಅನ್ನಿಸಿತ್ತು. ಡೈರಿಯಲ್ಲಿ ಪ್ರತಿಯೊಂದು ಘಟನೆಯನ್ನು ಉಲ್ಲೇಖಿಸಿದ್ದಾರೆ. ತಮ್ಮ ವಿರುದ್ಧ ನಡೆದ ರಾಜಕೀಯ ಷಡ್ಯಂತ್ರದ ನೋವು ಮರೆಯಲು ಹೊನ್ನಾಳಿ ಬಳಿ ಒಂದು ಎಕರೆ ಜಾಗ ತೆಗೆದುಕೊಂಡು ಗದ್ದೆ ಮಾಡಿದ್ದರು. ನೇಗಿಲು ಹಿಡಿದು ತಾವೇ ಹೊಲದಲ್ಲಿ ಕೆಲಸ ಮಾಡಿ ಕೃಷಿ ಮಾಡಿದ್ದಾರೆ’ ಎಂದರು.