<p><strong>ಬಾಳೂರು (ರಿಪ್ಪನ್ಪೇಟೆ):</strong> ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮಟೆಕೊಪ್ಪದ (ಚಂದಾಳದಿಂಬ) ಈಶ್ವರ್ ಸಿಂಗ್ ಎಂಬುವವರು ಸಂಗ್ರಹಿಸಿಟ್ಟಿದ್ದ ಹುಲ್ಲಿನ ಬಣವೆಗೆ ಶನಿವಾರ ಸಂಜೆ ಸಿಡಿಲು ಬಡಿದು ಸಂಪೂರ್ಣ ಸುಟ್ಟಿದೆ.</p>.<p>₹ 30 ಸಾವಿರಕ್ಕೂ ಅಧಿಕ ಮೌಲ್ಯದ ಮೇವು ಭಸ್ಮವಾಗಿದೆ ಎಂದುಈಶ್ವರ್ ಸಿಂಗ್ ತಿಳಿಸಿದ್ದಾರೆ.</p>.<p>ಭಾನುವಾರ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವೀರೇಶ್ ಆಲವಳ್ಳಿ ಭೇಟಿ ನೀಡಿ, ‘ಕಂದಾಯ ಇಲಾಖೆ, ಕೃಷಿ ಇಲಾಖೆ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಪರಿಹಾರ ವಿತರಿಸಲು ಕ್ರಮವಹಿಸಬೇಕು’ ಎಂದು ತಿಳಿಸಿದರು.</p>.<p>ಬಾಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ, ಸದಸ್ಯರಾದ ಶಶಿಕಲಾ, ಪಾರ್ವತಮ್ಮ, ರಿಪ್ಪನ್ಪೇಟೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ. ಮಂಜುನಾಥ್, ಸುರೇಶ್ ಸಿಂಗ್, ರಾಜೇಂದ್ರ ಘಂಟೆ ಅವರೂ ಈ ಸಂದರ್ಭದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಳೂರು (ರಿಪ್ಪನ್ಪೇಟೆ):</strong> ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮಟೆಕೊಪ್ಪದ (ಚಂದಾಳದಿಂಬ) ಈಶ್ವರ್ ಸಿಂಗ್ ಎಂಬುವವರು ಸಂಗ್ರಹಿಸಿಟ್ಟಿದ್ದ ಹುಲ್ಲಿನ ಬಣವೆಗೆ ಶನಿವಾರ ಸಂಜೆ ಸಿಡಿಲು ಬಡಿದು ಸಂಪೂರ್ಣ ಸುಟ್ಟಿದೆ.</p>.<p>₹ 30 ಸಾವಿರಕ್ಕೂ ಅಧಿಕ ಮೌಲ್ಯದ ಮೇವು ಭಸ್ಮವಾಗಿದೆ ಎಂದುಈಶ್ವರ್ ಸಿಂಗ್ ತಿಳಿಸಿದ್ದಾರೆ.</p>.<p>ಭಾನುವಾರ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವೀರೇಶ್ ಆಲವಳ್ಳಿ ಭೇಟಿ ನೀಡಿ, ‘ಕಂದಾಯ ಇಲಾಖೆ, ಕೃಷಿ ಇಲಾಖೆ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಪರಿಹಾರ ವಿತರಿಸಲು ಕ್ರಮವಹಿಸಬೇಕು’ ಎಂದು ತಿಳಿಸಿದರು.</p>.<p>ಬಾಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ, ಸದಸ್ಯರಾದ ಶಶಿಕಲಾ, ಪಾರ್ವತಮ್ಮ, ರಿಪ್ಪನ್ಪೇಟೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ. ಮಂಜುನಾಥ್, ಸುರೇಶ್ ಸಿಂಗ್, ರಾಜೇಂದ್ರ ಘಂಟೆ ಅವರೂ ಈ ಸಂದರ್ಭದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>