<p><strong>ಶಿವಮೊಗ್ಗ</strong>: ತಾಲ್ಲೂಕಿನ ಗಾಜನೂರು ಅಗ್ರಹಾರ ಬಳಿ ತೀರ್ಥಹಳ್ಳಿ-ಶಿವಮೊಗ್ಗ ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ದುರ್ಗಾಂಬ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p>ಬಸ್ ಮಂಗಳೂರಿನಿಂದ ರಾತ್ರಿ ಹೊರಟಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಗೆ ತಲುಪಬೇಕಿತ್ತು. ಬುಧವಾರ ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ. </p><p>ಅಪಘಾತದಲ್ಲಿ ಬಸ್ಸಿನ ನಿರ್ವಾಹಕ, ಹೊಸನಗರದ ಅಣ್ಣಪ್ಪ (38) ಹಾಗೂ ಪ್ರಯಾಣಿಕ, ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಹರ್ಷಿತ್ (25) ಸ್ಥಳದಲ್ಲಿಯೇ ಮೃತಪಟ್ಡಿದ್ದಾರೆ. ಅಣ್ಣಪ್ಪ ಈಚೆಗಷ್ಟೇ ಕೆಲಸಕ್ಕೆ ಸೇರಿದ್ದರು ಎಂದು ತಿಳಿದುಬಂದಿದೆ.</p><p>ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಣಿಪಾಲದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ 13 ಜನ ಗಾಯಗೊಂಡಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಸೇರಿ ವಿವಿಧೆಡೆ ದಾಖಲು ಮಾಡಲಾಗಿದೆ.</p><p><strong>ಗಾಯಾಳುಗಳು:</strong> ಉಮೇಶ್(50), ಪ್ರಸಾದ್(40), ವಿಷ್ಣು(21), ಮಂಜುನಾಥ್ (45), ಸುಜಾತಾ(40), ಅನಂದ್ ನಾಯ್ಕ್(50), ನೀಲಾಂಬಿಕಾ(45), ಪ್ರಸಾದ್ (43), ಬಿಂದು(20), ಶಶಾಂಕ್ (20), ಲಕ್ಷ್ಮೀ(35), ಶ್ರೀರಾಮುಲು(42) ಹಾಗೂ ಕಾರ್ತಿಕ್ (32). </p><p>ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬಸ್ಸು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ಸಿನ ಎಡ ಭಾಗ ಸಂಪೂರ್ಣ ಹಾನಿಯಾಗಿದೆ. </p><p>ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಪಘಾತದಿಂದಾಗಿ ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯಲ್ಲಿ ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ತಾಲ್ಲೂಕಿನ ಗಾಜನೂರು ಅಗ್ರಹಾರ ಬಳಿ ತೀರ್ಥಹಳ್ಳಿ-ಶಿವಮೊಗ್ಗ ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ದುರ್ಗಾಂಬ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p>ಬಸ್ ಮಂಗಳೂರಿನಿಂದ ರಾತ್ರಿ ಹೊರಟಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಗೆ ತಲುಪಬೇಕಿತ್ತು. ಬುಧವಾರ ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ. </p><p>ಅಪಘಾತದಲ್ಲಿ ಬಸ್ಸಿನ ನಿರ್ವಾಹಕ, ಹೊಸನಗರದ ಅಣ್ಣಪ್ಪ (38) ಹಾಗೂ ಪ್ರಯಾಣಿಕ, ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಹರ್ಷಿತ್ (25) ಸ್ಥಳದಲ್ಲಿಯೇ ಮೃತಪಟ್ಡಿದ್ದಾರೆ. ಅಣ್ಣಪ್ಪ ಈಚೆಗಷ್ಟೇ ಕೆಲಸಕ್ಕೆ ಸೇರಿದ್ದರು ಎಂದು ತಿಳಿದುಬಂದಿದೆ.</p><p>ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಣಿಪಾಲದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ 13 ಜನ ಗಾಯಗೊಂಡಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಸೇರಿ ವಿವಿಧೆಡೆ ದಾಖಲು ಮಾಡಲಾಗಿದೆ.</p><p><strong>ಗಾಯಾಳುಗಳು:</strong> ಉಮೇಶ್(50), ಪ್ರಸಾದ್(40), ವಿಷ್ಣು(21), ಮಂಜುನಾಥ್ (45), ಸುಜಾತಾ(40), ಅನಂದ್ ನಾಯ್ಕ್(50), ನೀಲಾಂಬಿಕಾ(45), ಪ್ರಸಾದ್ (43), ಬಿಂದು(20), ಶಶಾಂಕ್ (20), ಲಕ್ಷ್ಮೀ(35), ಶ್ರೀರಾಮುಲು(42) ಹಾಗೂ ಕಾರ್ತಿಕ್ (32). </p><p>ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬಸ್ಸು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ಸಿನ ಎಡ ಭಾಗ ಸಂಪೂರ್ಣ ಹಾನಿಯಾಗಿದೆ. </p><p>ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಪಘಾತದಿಂದಾಗಿ ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯಲ್ಲಿ ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>