ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ ಫಲಶೃತಿ: ಚುನಾವಣೆ ಬಹಿಷ್ಕರಿಸಿದ್ದ ಗ್ರಾಮಕ್ಕೆ ಬಸ್ ಸೌಲಭ್ಯ

Published 22 ಜೂನ್ 2023, 16:08 IST
Last Updated 22 ಜೂನ್ 2023, 16:08 IST
ಅಕ್ಷರ ಗಾತ್ರ

ಹೊಳೆಹೊನ್ನೂರು: ಬಸ್‌ಸೌಲಭ್ಯಕ್ಕೆ ಆಗ್ರಹಿಸಿ ವಿಧಾನಸಭಾ ಚುನಾವಣೆ ಬಹಿಷ್ಕರಿಸಿದ್ದ ಕನಸಿನಕಟ್ಟೆ ಗ್ರಾಮಕ್ಕೆ ಇದೀಗ ಬಸ್‌ ಸೌಲಭ್ಯ ಒದಗಿಸಲಾಗಿದೆ.

ಕನಸಿನಕಟ್ಟೆ ಹಾಗೂ ಸುರೇಂದ್ರ ಗೌಡ ಕ್ಯಾಂಪ್ ಗ್ರಾಮಗಳು ಮುಖ್ಯರಸ್ತೆಗೆ ಸಂಪರ್ಕವಿಲ್ಲದ ಪರಿಣಾಮ ಸಾರಿಗೆ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳು, ವೃದ್ಧರು, ಆನಾರೋಗ್ಯ ಪೀಡಿತರು, ಕೂಲಿಕಾರ್ಮಿಕರು ಸೇರಿ ಗ್ರಾಮಸ್ಥರಿಗೆ ತುಂಬ ಅನನುಕೂಲವಾಗಿತ್ತು. ಆದಕಾರಣ ಚುನಾವಣೆಗೆ ಮುನ್ನ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಿದ್ದರು. ಈ ಬಗ್ಗೆ ‘ಪ್ರಜಾವಾಣಿ’ ವಿಶೇಷ ವರದಿ ಪ್ರಕಟಿಸಿತ್ತು.

ಬಸ್ಸು ಆನವೇರಿಯಿಂದ ಕನಸಿನಕಟ್ಟೆ ಮಾರ್ಗವಾಗಿ ಶಿವಮೊಗ್ಗ ತಲುಪಲಿದ್ದು, ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ ಪ್ರಯಾಣ ಸೌಲಭ್ಯವಿರುವುದರಿಂದ ಸರ್ಕಾರಿ ಬಸ್ ಕಲ್ಪಿಸಿರುವುದು ಅನುಕೂಲವಾಗಿದೆ ಎಂದು ಗ್ರಾಮದ ಯುವಕ ದಿನೇಶ್, ಗ್ರಾಮ ಪಂಚಾಯಿತಿ ಸದಸ್ಯ ಶ್ರೀನಿವಾಸ್, ಸಿ.ವೈ. ರಾಜು, ಗ್ರಾಮದ ಮುಖಂಡರಾದ ಸೀತಾರಾಂ, ವೀರಭದ್ರ, ಮಂಜುನಾಥ, ನಾಗರಾಜ್, ಹಾಲೇಶ್, ಕರಿಬಸವಯ್ಯ ಇನ್ನಿತರರು ಸಂತಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT