<p><strong>ಹೊಸನಗರ</strong>: ರಾಣೆಬೆನ್ನೂರು–ಬೈಂದೂರು ಹೆದ್ದಾರಿಯ ಗಾಜನೂರು ಕ್ರಾಸ್ ಬಳಿ ಸೋಮವಾರ ಕೆಎಸ್ಆರ್ಟಿ ಬಸ್ ಮತ್ತು ಸಿಎಂಎಸ್ ವಾಹನ ಡಿಕ್ಕಿಯಾಗಿ ಬಸ್ ಉರುಳಿಬಿದ್ದು, ಹಲವರು ಗಾಯಗೊಂಡಿದ್ದಾರೆ.</p>.<p>ಬೆಂಗಳೂರಿನಿಂದ ಭಟ್ಕಳ ಕಡೆ ಸಾಗುತ್ತಿದ್ದ ಬಸ್, ನಿಟ್ಟೂರು ಬ್ಯಾಂಕಿಗೆ ಹಣ ಹಾಕಿ ಬರುತ್ತಿದ್ದ ಕೆನರಾ ಬ್ಯಾಂಕ್ ಸಿಎಂಎಸ್ ವಾಹನದ ನಡುವೆ ಬಪ್ಪನಮನೆ ಸಮಗೋಡು ನಡುವಿನ ಗಾಜನೂರು ಕ್ರಾಸ್ ಬಳಿ ಡಿಕ್ಕಿ ಸಂಭವಿಸಿದೆ.</p>.<p>ಡಿಕ್ಕಿ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹೆದ್ದಾರಿ ಪಕ್ಕಕ್ಕೆ ಉರುಳಿದೆ. ಬಸ್ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಎಎಸ್ಐ ಮಂಜುನಾಥ್ ಅವರು ಬಸ್ ಬಿದ್ದಿರುವುದನ್ನು ಕಂಡು ಠಾಣೆಗೆ ಮಾಹಿತಿ ನೀಡದರು. ಸ್ಥಳೀಯರ ಸಹಕಾರದಿಂದ ಬಸ್ನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರಗೆ ಕರೆತರಲಾಯಿತು.</p>.<p>ನಗರ ಪಿಎಸ್ಐ ರಮೇಶ್ ಸ್ಥಳಕ್ಕೆ ಭೇಟಿ ನೀಡಿದ್ದರು. ಪೊಲೀಸ್ ಸಿಬ್ಬಂದಿ ವೆಂಕಟೇಶ್, ಶಾಂತಪ್ಪ, ಸುಜಯ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ</strong>: ರಾಣೆಬೆನ್ನೂರು–ಬೈಂದೂರು ಹೆದ್ದಾರಿಯ ಗಾಜನೂರು ಕ್ರಾಸ್ ಬಳಿ ಸೋಮವಾರ ಕೆಎಸ್ಆರ್ಟಿ ಬಸ್ ಮತ್ತು ಸಿಎಂಎಸ್ ವಾಹನ ಡಿಕ್ಕಿಯಾಗಿ ಬಸ್ ಉರುಳಿಬಿದ್ದು, ಹಲವರು ಗಾಯಗೊಂಡಿದ್ದಾರೆ.</p>.<p>ಬೆಂಗಳೂರಿನಿಂದ ಭಟ್ಕಳ ಕಡೆ ಸಾಗುತ್ತಿದ್ದ ಬಸ್, ನಿಟ್ಟೂರು ಬ್ಯಾಂಕಿಗೆ ಹಣ ಹಾಕಿ ಬರುತ್ತಿದ್ದ ಕೆನರಾ ಬ್ಯಾಂಕ್ ಸಿಎಂಎಸ್ ವಾಹನದ ನಡುವೆ ಬಪ್ಪನಮನೆ ಸಮಗೋಡು ನಡುವಿನ ಗಾಜನೂರು ಕ್ರಾಸ್ ಬಳಿ ಡಿಕ್ಕಿ ಸಂಭವಿಸಿದೆ.</p>.<p>ಡಿಕ್ಕಿ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹೆದ್ದಾರಿ ಪಕ್ಕಕ್ಕೆ ಉರುಳಿದೆ. ಬಸ್ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಎಎಸ್ಐ ಮಂಜುನಾಥ್ ಅವರು ಬಸ್ ಬಿದ್ದಿರುವುದನ್ನು ಕಂಡು ಠಾಣೆಗೆ ಮಾಹಿತಿ ನೀಡದರು. ಸ್ಥಳೀಯರ ಸಹಕಾರದಿಂದ ಬಸ್ನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರಗೆ ಕರೆತರಲಾಯಿತು.</p>.<p>ನಗರ ಪಿಎಸ್ಐ ರಮೇಶ್ ಸ್ಥಳಕ್ಕೆ ಭೇಟಿ ನೀಡಿದ್ದರು. ಪೊಲೀಸ್ ಸಿಬ್ಬಂದಿ ವೆಂಕಟೇಶ್, ಶಾಂತಪ್ಪ, ಸುಜಯ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>