<p><strong>ಶಿವಮೊಗ್ಗ</strong>: ಮಲೆನಾಡು ರೌಂಡ್ ಟೇಬಲ್ ವತಿಯಿಂದ ಕಾರ್ಪೋರೇಟ್ ಸಾಮಾಜಿಕ ನಿಧಿ ಹಾಗೂ ದಾನಿಗಳಿಂದ ಸಂಗ್ರಹಿಸಿದ ₹23 ಲಕ್ಷ ಹಣದಲ್ಲಿ ಶಿವಮೊಗ್ಗದ ಸೂಳೆಬೈಲಿನ ಸರ್ಕಾರಿ ಪ್ರೌಢಶಾಲೆಯ ಮೊದಲ ಅಂತಸ್ತಿನಲ್ಲಿ ನಿರ್ಮಿಸಿದ ಮೂರು ಕೊಠಡಿಗಳನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಿದರು.</p>.<p>ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿ, ಎಲ್ಲವನ್ನು ಸರ್ಕಾರದಿಂದ ಮಾಡಲು ಸಾಧ್ಯವಿಲ್ಲ. ಇಂತಹ ಸಮಾಜಮುಖಿ ಕೆಲಸಗಳನ್ನು ದೇಶದಾದ್ಯಂತ ಸದ್ದಿಲ್ಲದೇ ರೋಟರಿ, ರೌಂಡ್ ಟೇಬಲ್ ಸಂಸ್ಥೆಗಳು ಮಾಡುತ್ತಿವೆ. ಅದು ಶ್ಲಾಘನೀಯ ಎಂದರು.</p>.<p>ಇದೇ ಸಂದರ್ಭದಲ್ಲಿ ಪಿಯರ್ ಲೈಟ್ ಲೈನರ್ಸ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಜಿಲ್ಲೆಯ 7 ಸರ್ಕಾರಿ ಶಾಲೆಗಳಿಗೆ ₹5 ಲಕ್ಷ ವೆಚ್ಚದ ಕುಡಿಯುವ ನೀರಿನ ಶುದ್ಧೀಕರಣ ಯಂತ್ರಗಳನ್ನು ಸಂಸದರು ಶಾಲೆಗಳಿಗೆ ಹಸ್ತಾಂತರಿಸಿದರು.</p>.<p>ಮಲೆನಾಡು ರೌಂಡ್ ಟೇಬಲ್ ಸಂಸ್ಥೆಯು ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಿಗೆ ಹಲವು ಕೊಡುಗೆಗಳ ನೀಡುತ್ತಿದೆ ಎಂದು ಶಿವಮೊಗ್ಗ ಗ್ರಾಮೀಣ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ ಹೇಳಿದರು.</p>.<p>ವಿಧಾನಪರಿಷತ್ ಸದಸ್ಯರಾದ ಡಿ.ಎಸ್.ಅರುಣ್ ಹಾಗೂ ಡಾ.ಧನಂಜಯ ಸರ್ಜಿ ಮಾತನಾಡಿದರು.</p>.<p>ಭದ್ರಾ ಕಾಡಾ ಮುಖ್ಯ ಎಂಜಿನಿಯರ್ ಪ್ರಶಾಂತ್, ರೌಂಡ್ ಟೇಬಲ್ ಮುಖ್ಯಸ್ಥರಾದ ಕುಮಾರ್ ಪಾಲ್ ಜೈನ್, ರೋಹನ್, ಸುಶೃತ್ ಬೆಳಗೂರ, ಈಶ್ವರ ಸರ್ಜಿ, ಆದಿತ್ಯ ಆಚಾರ್ಯ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಮಲೆನಾಡು ರೌಂಡ್ ಟೇಬಲ್ ವತಿಯಿಂದ ಕಾರ್ಪೋರೇಟ್ ಸಾಮಾಜಿಕ ನಿಧಿ ಹಾಗೂ ದಾನಿಗಳಿಂದ ಸಂಗ್ರಹಿಸಿದ ₹23 ಲಕ್ಷ ಹಣದಲ್ಲಿ ಶಿವಮೊಗ್ಗದ ಸೂಳೆಬೈಲಿನ ಸರ್ಕಾರಿ ಪ್ರೌಢಶಾಲೆಯ ಮೊದಲ ಅಂತಸ್ತಿನಲ್ಲಿ ನಿರ್ಮಿಸಿದ ಮೂರು ಕೊಠಡಿಗಳನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಿದರು.</p>.<p>ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿ, ಎಲ್ಲವನ್ನು ಸರ್ಕಾರದಿಂದ ಮಾಡಲು ಸಾಧ್ಯವಿಲ್ಲ. ಇಂತಹ ಸಮಾಜಮುಖಿ ಕೆಲಸಗಳನ್ನು ದೇಶದಾದ್ಯಂತ ಸದ್ದಿಲ್ಲದೇ ರೋಟರಿ, ರೌಂಡ್ ಟೇಬಲ್ ಸಂಸ್ಥೆಗಳು ಮಾಡುತ್ತಿವೆ. ಅದು ಶ್ಲಾಘನೀಯ ಎಂದರು.</p>.<p>ಇದೇ ಸಂದರ್ಭದಲ್ಲಿ ಪಿಯರ್ ಲೈಟ್ ಲೈನರ್ಸ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಜಿಲ್ಲೆಯ 7 ಸರ್ಕಾರಿ ಶಾಲೆಗಳಿಗೆ ₹5 ಲಕ್ಷ ವೆಚ್ಚದ ಕುಡಿಯುವ ನೀರಿನ ಶುದ್ಧೀಕರಣ ಯಂತ್ರಗಳನ್ನು ಸಂಸದರು ಶಾಲೆಗಳಿಗೆ ಹಸ್ತಾಂತರಿಸಿದರು.</p>.<p>ಮಲೆನಾಡು ರೌಂಡ್ ಟೇಬಲ್ ಸಂಸ್ಥೆಯು ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಿಗೆ ಹಲವು ಕೊಡುಗೆಗಳ ನೀಡುತ್ತಿದೆ ಎಂದು ಶಿವಮೊಗ್ಗ ಗ್ರಾಮೀಣ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ ಹೇಳಿದರು.</p>.<p>ವಿಧಾನಪರಿಷತ್ ಸದಸ್ಯರಾದ ಡಿ.ಎಸ್.ಅರುಣ್ ಹಾಗೂ ಡಾ.ಧನಂಜಯ ಸರ್ಜಿ ಮಾತನಾಡಿದರು.</p>.<p>ಭದ್ರಾ ಕಾಡಾ ಮುಖ್ಯ ಎಂಜಿನಿಯರ್ ಪ್ರಶಾಂತ್, ರೌಂಡ್ ಟೇಬಲ್ ಮುಖ್ಯಸ್ಥರಾದ ಕುಮಾರ್ ಪಾಲ್ ಜೈನ್, ರೋಹನ್, ಸುಶೃತ್ ಬೆಳಗೂರ, ಈಶ್ವರ ಸರ್ಜಿ, ಆದಿತ್ಯ ಆಚಾರ್ಯ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>