<p><strong>ತೀರ್ಥಹಳ್ಳಿ: </strong>ರೋಗ ನಿಯಂತ್ರಣದ ಕೃಷಿ ಔಷಧವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಸರ್ಕಾರದ ಗಮನಕ್ಕೆ ಬಂದಿದೆ. ನಿಯಂತ್ರಣ ಮಾಡದಿದ್ದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾರಾಟಗಾರರಿಗೆ ಎಚ್ಚರಿಕೆ ನೀಡಿದರು.</p>.<p>ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿ ಇಳಿಮನೆ ಸೇರಿ ವಿವಿಧೆಡೆ ಎಲೆಚುಕ್ಕಿ ರೋಗ ಬಾಧಿತ ತೋಟಗಳಿಗೆ ಸೋಮವಾರ ಭೇಟಿ ನೀಡಿ ರೈತರು, ಅಧಿಕಾರಿಗಳೊಂದಿಗೆ ಚರ್ಚಿಸಿದರು.</p>.<p>‘ರೈತರೊಂದಿಗೆ ಸರ್ಕಾರ ಇದೆ. ತೋಟಗಾರಿಕಾ ಸಚಿವರಿಗೆ ಮನವಿ ಮಾಡಿದ್ದೇನೆ. ರೋಗ ನಿಯಂತ್ರಣ ಔಷಧಗೆ ಸರ್ಕಾರದ ಸಹಾಯಧನ ನೀಡಲು ಚರ್ಚೆ ನಡೆಯುತ್ತಿದೆ’ ಎಂದು ಹೇಳಿದರು.</p>.<p>ಎಲೆಚುಕ್ಕಿ ರೋಗ ವ್ಯಾಪಕವಾಗಿ ಹರಡಲು ಕಾರಣವಾದ ಅಂಶಗಳ ಕುರಿತು ಹೆಚ್ಚಿನ ಸಂಶೋಧನೆ ಅಗತ್ಯ ಇದೆ. ರೈತರು ಧೃತಿಗೆಡದೆ ರೋಗ ನಿಯಂತ್ರಣದ ಕಡೆ ನಿಗಾವಹಿಸಬೇಕು. ಈ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಕೃಷಿ ವಿಶ್ವವಿದ್ಯಾಲಯ, ಅಡಿಕೆ ಸಂಶೋಧನಾ ಕೇಂದ್ರ, ತೋಟಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ: </strong>ರೋಗ ನಿಯಂತ್ರಣದ ಕೃಷಿ ಔಷಧವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಸರ್ಕಾರದ ಗಮನಕ್ಕೆ ಬಂದಿದೆ. ನಿಯಂತ್ರಣ ಮಾಡದಿದ್ದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾರಾಟಗಾರರಿಗೆ ಎಚ್ಚರಿಕೆ ನೀಡಿದರು.</p>.<p>ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿ ಇಳಿಮನೆ ಸೇರಿ ವಿವಿಧೆಡೆ ಎಲೆಚುಕ್ಕಿ ರೋಗ ಬಾಧಿತ ತೋಟಗಳಿಗೆ ಸೋಮವಾರ ಭೇಟಿ ನೀಡಿ ರೈತರು, ಅಧಿಕಾರಿಗಳೊಂದಿಗೆ ಚರ್ಚಿಸಿದರು.</p>.<p>‘ರೈತರೊಂದಿಗೆ ಸರ್ಕಾರ ಇದೆ. ತೋಟಗಾರಿಕಾ ಸಚಿವರಿಗೆ ಮನವಿ ಮಾಡಿದ್ದೇನೆ. ರೋಗ ನಿಯಂತ್ರಣ ಔಷಧಗೆ ಸರ್ಕಾರದ ಸಹಾಯಧನ ನೀಡಲು ಚರ್ಚೆ ನಡೆಯುತ್ತಿದೆ’ ಎಂದು ಹೇಳಿದರು.</p>.<p>ಎಲೆಚುಕ್ಕಿ ರೋಗ ವ್ಯಾಪಕವಾಗಿ ಹರಡಲು ಕಾರಣವಾದ ಅಂಶಗಳ ಕುರಿತು ಹೆಚ್ಚಿನ ಸಂಶೋಧನೆ ಅಗತ್ಯ ಇದೆ. ರೈತರು ಧೃತಿಗೆಡದೆ ರೋಗ ನಿಯಂತ್ರಣದ ಕಡೆ ನಿಗಾವಹಿಸಬೇಕು. ಈ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಕೃಷಿ ವಿಶ್ವವಿದ್ಯಾಲಯ, ಅಡಿಕೆ ಸಂಶೋಧನಾ ಕೇಂದ್ರ, ತೋಟಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>