<p><strong>ಶಿವಮೊಗ್ಗ</strong>: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಹೊಸ ಗೇಟ್ ಅಳವಡಿಸುವ ಕಾರ್ಯ ಮಂಗಳವಾರ ಪೂರ್ಣಗೊಂಡಿತು. ಕರ್ನಾಟಕ ನೀರಾವರಿ ನಿಗಮದ (ಕೆಎನ್ಎನ್) ಕಾರ್ಯನಿರ್ವಾಹಕ ಎಂಜಿನಿಯರ್ ಎನ್.ರವಿಕುಮಾರ್ ನೇತೃತ್ವದಲ್ಲಿ ಕಳೆದ ಮೇ ತಿಂಗಳಿನಿಂದ ಆರಂಭವಾಗಿತ್ತು. ಸತತ ನಾಲ್ಕು ತಿಂಗಳು ಕಾಲ ಕಾಮಗಾರಿ ನಡೆದಿತ್ತು.</p>.<p>ಕಾಮಗಾರಿ ಮುಕ್ತಾಯಗೊಂಡ ಕಾರಣ ಈ ಹಿಂದೆ ಅಳವಡಿಸಿದ್ದ ತಾತ್ಕಾಲಿಕ ಗೇಟ್ ತೆಗೆದುಹಾಕಿ ನಾಲೆಗೆ ನೀರು ಹರಿಸಲಾಯಿತು. ಕಾಮಗಾರಿ ಹಿನ್ನೆಲೆಯಲ್ಲಿ ನಾಲೆಯಲ್ಲಿ ಇಲ್ಲಿಯವರೆಗೆ ಅರ್ಧ ಭಾಗ ನೀರು ಹರಿಸಲಾಗಿತ್ತು. </p>.<p>ಸದಾ ನೀರಿನಲ್ಲಿ ಮುಳುಗಿರುವ ಈ ಗೇಟ್ಗೆ ಸುಲಭವಾಗಿ ತುಕ್ಕು ಹಿಡಿಯದಂತೆ ತಡೆಯಲು ಹಾಗೂ ಒತ್ತಡ ತಡೆದುಕೊಳ್ಳಲು ಅಗತ್ಯವಿರುವಂತೆ ರೂಪಿಸಬೇಕಿತ್ತು. ಹೀಗಾಗಿ ಗೇಟ್ ತಯಾರಿಸಲು ಅತ್ಯಾಧುನಿಕ ಗುಣಮಟ್ಟದ ಉಕ್ಕನ್ನು ಭಾರತೀಯ ಉಕ್ಕು ಪ್ರಾಧಿಕಾರ (ಎಸ್ಎಐಎಲ್) ಒದಗಿಸಿದೆ. ತಾಂತ್ರಿಕ ವಿನ್ಯಾಸವನ್ನು 'ಅಪಾರ್' ಕಂಪೆನಿ ತಂತ್ರಜ್ಞರು ಮಾಡಿದ್ದಾರೆ.</p>.<p>ಎಡದಂಡೆ ನಾಲೆಯ ಗೇಟ್ ಲಾಕ್ ಆಗಿ ಸ್ಟ್ರಕ್ ಆಗಿ ಬಹಳ ವರ್ಷಗಳೇ ಆಗಿದ್ದು, ಅದು ಮೇಲೆ ಬರುತ್ತಿತ್ತು. ಆದರೆ ಕೆಳಗೆ ಹೋದಾಗ ಸರಿಯಾಗಿ ಕುಳಿತುಕೊಳ್ಳುತ್ತಿರಲಿಲ್ಲ. ಇದರಿಂದ ನಿರಂತರವಾಗಿ ನೀರು ಸೋರಿಕೆ ಆಗುತ್ತಿತ್ತು. ಹೀಗಾಗಿ ಕೆಎನ್ಎನ್ ಹೊಸ ಗೇಟ್ ಅಳವಡಿಕೆಗೆ ನಿರ್ಧರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಹೊಸ ಗೇಟ್ ಅಳವಡಿಸುವ ಕಾರ್ಯ ಮಂಗಳವಾರ ಪೂರ್ಣಗೊಂಡಿತು. ಕರ್ನಾಟಕ ನೀರಾವರಿ ನಿಗಮದ (ಕೆಎನ್ಎನ್) ಕಾರ್ಯನಿರ್ವಾಹಕ ಎಂಜಿನಿಯರ್ ಎನ್.ರವಿಕುಮಾರ್ ನೇತೃತ್ವದಲ್ಲಿ ಕಳೆದ ಮೇ ತಿಂಗಳಿನಿಂದ ಆರಂಭವಾಗಿತ್ತು. ಸತತ ನಾಲ್ಕು ತಿಂಗಳು ಕಾಲ ಕಾಮಗಾರಿ ನಡೆದಿತ್ತು.</p>.<p>ಕಾಮಗಾರಿ ಮುಕ್ತಾಯಗೊಂಡ ಕಾರಣ ಈ ಹಿಂದೆ ಅಳವಡಿಸಿದ್ದ ತಾತ್ಕಾಲಿಕ ಗೇಟ್ ತೆಗೆದುಹಾಕಿ ನಾಲೆಗೆ ನೀರು ಹರಿಸಲಾಯಿತು. ಕಾಮಗಾರಿ ಹಿನ್ನೆಲೆಯಲ್ಲಿ ನಾಲೆಯಲ್ಲಿ ಇಲ್ಲಿಯವರೆಗೆ ಅರ್ಧ ಭಾಗ ನೀರು ಹರಿಸಲಾಗಿತ್ತು. </p>.<p>ಸದಾ ನೀರಿನಲ್ಲಿ ಮುಳುಗಿರುವ ಈ ಗೇಟ್ಗೆ ಸುಲಭವಾಗಿ ತುಕ್ಕು ಹಿಡಿಯದಂತೆ ತಡೆಯಲು ಹಾಗೂ ಒತ್ತಡ ತಡೆದುಕೊಳ್ಳಲು ಅಗತ್ಯವಿರುವಂತೆ ರೂಪಿಸಬೇಕಿತ್ತು. ಹೀಗಾಗಿ ಗೇಟ್ ತಯಾರಿಸಲು ಅತ್ಯಾಧುನಿಕ ಗುಣಮಟ್ಟದ ಉಕ್ಕನ್ನು ಭಾರತೀಯ ಉಕ್ಕು ಪ್ರಾಧಿಕಾರ (ಎಸ್ಎಐಎಲ್) ಒದಗಿಸಿದೆ. ತಾಂತ್ರಿಕ ವಿನ್ಯಾಸವನ್ನು 'ಅಪಾರ್' ಕಂಪೆನಿ ತಂತ್ರಜ್ಞರು ಮಾಡಿದ್ದಾರೆ.</p>.<p>ಎಡದಂಡೆ ನಾಲೆಯ ಗೇಟ್ ಲಾಕ್ ಆಗಿ ಸ್ಟ್ರಕ್ ಆಗಿ ಬಹಳ ವರ್ಷಗಳೇ ಆಗಿದ್ದು, ಅದು ಮೇಲೆ ಬರುತ್ತಿತ್ತು. ಆದರೆ ಕೆಳಗೆ ಹೋದಾಗ ಸರಿಯಾಗಿ ಕುಳಿತುಕೊಳ್ಳುತ್ತಿರಲಿಲ್ಲ. ಇದರಿಂದ ನಿರಂತರವಾಗಿ ನೀರು ಸೋರಿಕೆ ಆಗುತ್ತಿತ್ತು. ಹೀಗಾಗಿ ಕೆಎನ್ಎನ್ ಹೊಸ ಗೇಟ್ ಅಳವಡಿಕೆಗೆ ನಿರ್ಧರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>