ಜಿಲ್ಲಾಧಿಕಾರಿ, ತಹಶೀಲ್ದಾರರ ಈ ಆದೇಶವನ್ನು ಆನಂದಿ ಲಿಂಗರಾಜ್ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ದಾಖಲಿಸುವ ಮೂಲಕ ಪ್ರಶ್ನಿಸಿದ್ದರು. ಜಿಲ್ಲಾಧಿಕಾರಿ ಅವಶ್ಯ ಪಕ್ಷದಾರರ ಗೈರು ಹಾಜರಾತಿಯಲ್ಲಿ ವಿಚಾರಣೆ ನಡೆಸಿ ಆದೇಶಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಅವರ ಆದೇಶಕ್ಕೆ ನ್ಯಾಯಾಲಯ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ನೀಡಿದೆ.