ಕುಲಸಚಿವರಾದ ಜಿ. ಅನುರಾಧ ಮಾತನಾಡಿ, ‘ಆಧುನಿಕ ಜೀವನ ಶೈಲಿ, ಆಹಾರ ಪದ್ಧತಿ ಮತ್ತು ದುಶ್ಚಟಗಳು ಮಾರಣಾಂತಿಕ ಕ್ಯಾನ್ಸರ್ಗೆ ಮುಖ್ಯ ಕಾರಣ. ಆದ್ದರಿಂದ ಆರೋಗ್ಯಕರ ಜೀವನ ಶೈಲಿ ಅಳವಡಿಸಿಕೊಳ್ಳುವುದು, ಸೂಕ್ತ ಸಮಯಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರ ಮೂಲಕ ಕ್ಯಾನ್ಸರ್ ರೋಗವನ್ನು ತಡೆಗಟ್ಟಬಹುದು ಎಂದು ಅಭಿಪ್ರಾಯಪಟ್ಟರು. ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ, ಆರೋಗ್ಯಾಧಿಕಾರಿ ಡಾ.ಶ್ರೀರಕ್ಷಾ, ಮಹಿಳಾ ವೈದ್ಯಾಧಿಕಾರಿ ಡಾ.ಉಷಾರಾಣಿ, ಆಪ್ತ ಸಮಾಲೋಚಕಿ ರಜಿನಿ, ಹಸೀನ, ವಿಶ್ವವಿದ್ಯಾಲಯದ ಆರೋಗ್ಯ ಸಿಬ್ಬಂದಿ ಇದ್ದರು.