ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಕ್ಕೆ ಕಾರು ಡಿಕ್ಕಿ; ವ್ಯಕ್ತಿ ಸಾವು

Last Updated 24 ಜೂನ್ 2022, 4:31 IST
ಅಕ್ಷರ ಗಾತ್ರ

ಶಿಕಾರಿಪುರ: ತಾಲ್ಲೂಕಿನ ಹಾರೋಗೊಪ್ಪ ಗ್ರಾಮದ ಬಿ ಕ್ಯಾಂಪ್ ಸಮೀಪದ ಶಿವಮೊಗ್ಗ ರಸ್ತೆಯಲ್ಲಿ ಬುಧವಾರ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಕೆಪಿಟಿಸಿಎಲ್‌ ಜೂನಿಯರ್‌ ಎಂಜಿನಿಯರ್ ಅಶೋಕ್ (60) ಮೃತ ವ್ಯಕ್ತಿ. ಅಶೋಕ್ ಅವರು ಮಂಗಳವಾರ ಜನಿಸಿದ್ದ ಮೊಮ್ಮಗಳನ್ನು ನೋಡಿಕೊಂಡು ಬರಲು ಕುಟುಂಬ ಸದಸ್ಯರೊಂದಿಗೆ ಶಿವಮೊಗ್ಗಕ್ಕೆ ತೆರಳಿದ್ದರು. ವಾಪಸ್‌ ಬರುವಾಗ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದ ಅಶೋಕ್ ಪತ್ನಿ ಕಮಲಮ್ಮ, ವಾಹನ ಚಾಲನೆ ಮಾಡುತ್ತಿದ್ದ ಪುತ್ರ ಈಸೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ವಿಜಯಕುಮಾರ್ ಹಾಗೂ ಗಂಗಾಧರ್ ಅವರಿಗೆ ಗಾಯಗಳಾಗಿದ್ದು, ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಕಾರಿನಲ್ಲಿದ್ದ ವಿಜಯಕುಮಾರ್ ಅವರ ಒಂದೂವರೆ ವರ್ಷದ ಪುತ್ರನಿಗೆ ಗಾಯಗಳಾಗಿಲ್ಲ.

ಮೃತ ವ್ಯಕ್ತಿ ಅಶೋಕ್ ಅವರು ಈ ತಿಂಗಳ ಅಂತ್ಯಕ್ಕೆ ನಿವೃತ್ತಿ ಹೊಂದಲಿದ್ದರು.

ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT