ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದುವೆಗೆ ತೆರಳುತ್ತಿದ್ದಾಗ ಕಾರು ಅಪಘಾತ: ವರನ ಸಹೋದರ ಸಾವು

Last Updated 21 ಏಪ್ರಿಲ್ 2022, 5:03 IST
ಅಕ್ಷರ ಗಾತ್ರ

ಶಿಕಾರಿಪುರ: ಪಟ್ಟಣದ ಶಿವಮೊಗ್ಗ ರಸ್ತೆಯ ಕೋರ್ಟ್ ಎದುರುಬುಧವಾರ ಮುಂಜಾನೆ ಮದುವೆಗೆ ತೆರಳುತ್ತಿದ್ದ ಕಾರು
ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ವರನ ಸಹೋದರ ಸ್ಥಳದಲ್ಲಿಯೇಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಬೆಳಗಾಲಪೇಟೆ ನಿವಾಸಿ ಸಂದೀಪ್ (34) ಮೃತಟಪಟ್ಟವರು. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಏ.21ರಂದು ನಡೆಯಲಿದ್ದ ಅವರ ಸಹೋದರನ ಮದುವೆಗೆ ತೆರಳುತ್ತಿದ್ದರು.

ಕಾರಿನಲ್ಲಿ ಸಂದೀಪ್ ಸೇರಿ ನಾಲ್ವರು ಪ್ರಯಾಣಿಸುತ್ತಿದ್ದರು. ಸಂದೀಪ್‌ ಪತ್ನಿ ಜಾನಕಿ, ಸಹೋದರ ಮದುಮಗ ಪ್ರದೀಪ್, ಸಂಬಂಧಿ ಮಂಗಳ ಗಾಯಗೊಂಡಿದ್ದಾರೆ. ಜಾನಕಿ ಹಾಗೂ ಮಂಗಳ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT