ನಗರದ ಎಲ್ಐಸಿ ಕಚೇರಿ ಮುಂಭಾಗ ಭಾನುವಾರ ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದಿದ್ದು, ಕಾರಿನಲ್ಲಿದ್ದ ಚಾಲಕ ಪಾರಾಗಿದ್ದಾರೆ.
ಸೊರಬ ತಾಲ್ಲೂಕಿನ ಉಳವಿಯ ವಿಜಯ್ ತಮ್ಮ ಕಾರಿನಲ್ಲಿ ಸಾಗರದಲ್ಲಿ ನಡೆಯುತ್ತಿರುವ ಮಾರಿಜಾತ್ರೆಗೆ ಹೊರಟ್ಟಿದ್ದರು.
ಬಿ.ಎಚ್.ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಬೆಂಕಿ ಕಾಣಸಿಕೊಂಡಿದೆ. ತಕ್ಷಣವೇ ಎಚ್ಚೆತ್ತುಕೊಂಡ ಚಾಲಕ ವಿಜಯ್ ಕಾರಿನಿಂದ ಕೆಳಗೆ ಇಳಿದಿದ್ದಾರೆ.
ಕಾರಿನ ಎಂಜಿನ್, ಬ್ಯಾಟರಿ ಹಾಗೂ ಕಾರಿನ ಮುಂಭಾಗ ಸುಟ್ಟು ಕರಕಲಾಗಿದೆ. ಸ್ಥಳೀಯರು ನೀರು ಹಾಯಿಸಿ ಬೆಂಕಿ ನಿಯಂತ್ರಣಕ್ಕೆ ಶ್ರಮಪಟ್ಟರು. ಅವಘಡದಿಂದ ಕೆಲ ಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.