ಈ ಬಗ್ಗೆ ದೂರುದಾರ ವೀರೇಶ್ ಮಾತನಾಡಿ, ‘ಇದು ನೂತನ ರಸ್ತೆಯಾಗಿದ್ದು, ಹಾಲಿನ ವಾಹನಗಳು ಓಡಾಡಲು ಬೇರೆ ರಸ್ತೆಗಳಿದ್ದರೂ ದುರುದ್ದೇಶ ಪೂರ್ವಕವಾಗಿ ಮೇಲ್ವರ್ಗದವರು ಬಂದು ಗಲಾಟೆ ಮಾಡಿದ್ದಾರೆ. ಜೂನ್ ತಿಂಗಳಲ್ಲಿ ನಾವು ಸಾಗುವಳಿ ಮಾಡುತ್ತಿದ್ದ ಜಮೀನನ್ನು ಸರ್ಕಾರಿ ಅಧಿಕಾರಿಗಳ ಮೂಲಕ ತೆರವುಗೊಳಿಸಿಲು ಯತ್ನಿಸಿದ್ದರು. ಅದು ಸಾಧ್ಯವಾಗಲಿಲ್ಲ. ಹಾಗಾಗಿ, ನಾವು ಒಯ್ದ ಹಾಲನ್ನು ಡೇರಿಯಲ್ಲಿ ಹಾಕಿಸಿಕೊಳ್ಳುವುದಿಲ್ಲ. ನಮ್ಮನ್ನು ಯಾವುದೇ ಕೆಲಸಕ್ಕೆ ಕರೆಯದೆ ಬಹಿಷ್ಕಾರ ಸಹ ಹಾಕಿದ್ದಾರೆ. ಇದರಿಂದ ಪರಿಶಿಷ್ಟ ಸಮುದಾಯದವರು ಊರಿನಲ್ಲಿ ಬದುಕುವುದೇ ಕಷ್ಟವಾಗಿದ್ದು, ಪೊಲೀಸರು ರಕ್ಷಣೆ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.