ಅದೇ ಕಾರಣಕ್ಕೆ ಬ್ಯಾಂಕ್ ಆಡಳಿತ ಮಂಡಳಿಯನ್ನೂ ಅಮಾನತುಗೊಳಿಸಲಾಗಿತ್ತು. ಆದರೆ, ಇದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದರ ನಡುವೆ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಮಂಜುನಾಥ ಗೌಡರ ಬಗ್ಗೆ ಮಾತ್ರ ವಿಚಾರಣಾ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಸಿರಲಿಲ್ಲ. ಹೀಗಿದ್ದರೂ ಸರ್ಕಾರವು ಈ ಹಗರಣದಲ್ಲಿ ಮಂಜುನಾಥ ಗೌಡರ ಪಾತ್ರವಿದೆ ಎಂದು ಪರಿಭಾವಿಸಿ ಅವರ ಸದಸ್ಯತ್ವ ಅನರ್ಹಗೊಳಿಸಿತ್ತು. ಆದರೆ, ಇದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.