<p><strong>ಶಿವಮೊಗ್ಗ</strong>: ನಕಲಿ ಬಂಗಾರ ಅಡಮಾನ ಸಾಲದ ಬಹುಕೋಟಿ ರೂಪಾಯಿಯ ಹಗರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸಿ.ರಾಜಣ್ಣ ರೆಡ್ಡಿ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಡಿಸಿಸಿ ಬ್ಯಾಂಕ್ನಲ್ಲಿ ₹ 62.75 ಕೋಟಿ ಮೌಲ್ಯದ ನಕಲಿ ಬಂಗಾರ ಅಡವಿಟ್ಟಿದ್ದ ಅವ್ಯವಹಾರ ಪ್ರಕರಣದಲ್ಲಿ ಆಡಳಿತಾತ್ಮಕ ಕರ್ತವ್ಯ ಲೋಪ ಎಸಗಿರುವುದು ಸಾಬೀತಾಗಿರುವುದರಿಂದ ಇವರಿಬ್ಬರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಬೆಂಗಳೂರು ಪ್ರಾಂತದ ಸಹಕಾರ</p>.<p>ಸಂಘಗಳ ಜಂಟಿ ನಿಬಂಧಕರಾದ ಡಿ.ಪಾಂಡುರಂಗ ಗರಗ್ ಅವರು ಆದೇಶ ನೀಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪ ನಿರ್ದೇಶಕರು ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿದ್ದಾರೆ.</p>.<p class="Subhead"><strong>ಪ್ರಕರಣದ ವಿವರ: </strong>ನಕಲಿ ಬಂಗಾರ ಅಡಮಾನ ಪ್ರಕರಣ 2014ರಲ್ಲಿ ಬೆಳಕಿಗೆ ಬಂದಿತ್ತು. 2004ರಿಂದ 2014ರ ನಡುವಿನ ಅವಧಿಯಲ್ಲಿ 490 ಸಾಲದ ಖಾತೆಗಳ ಮೂಲಕ ನಕಲಿ ಬಂಗಾರವನ್ನು ಅಡವಿಟ್ಟುಕೊಂಡು ಮತ್ತು 171 ಖಾತೆಗಳಲ್ಲಿ ಡಿಸಿಸಿ ಬ್ಯಾಂಕ್ ನಗರ ಶಾಖೆಯಲ್ಲಿ ₹ 62.75 ಕೋಟಿ ಸಾಲ ನೀಡುವ ಮೂಲಕ ಅವ್ಯವಹಾರ ನಡೆಸಲಾಗಿತ್ತು.</p>.<p>ಈ ಘಟನೆ ಬೆಳಕಿಗೆ ಬಂದ ನಂತರ ಸಿಐಡಿ ತನಿಖೆ ನಡೆಸಿ ಹಗರಣದ ಪ್ರಮುಖ ಆರೋಪಿಗಳಾದ ನಗರ ಶಾಖೆಯ ವ್ಯವಸ್ಥಾಪಕಿಯಾಗಿದ್ದ ಶೋಭಾ, ಅಧ್ಯಕ್ಷರಾಗಿದ್ದ ಮಂಜುನಾಥ ಗೌಡ ಮತ್ತಿತರರ ವಿರುದ್ಧ ಮೊಕದ್ದಮೆ ದಾಖಲಿಸಿ, ಬಂಧಿಸಲಾಗಿತ್ತು.</p>.<p>ಅದೇ ಕಾರಣಕ್ಕೆ ಬ್ಯಾಂಕ್ ಆಡಳಿತ ಮಂಡಳಿಯನ್ನೂ ಅಮಾನತುಗೊಳಿಸಲಾಗಿತ್ತು. ಆದರೆ, ಇದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದರ ನಡುವೆ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಮಂಜುನಾಥ ಗೌಡರ ಬಗ್ಗೆ ಮಾತ್ರ ವಿಚಾರಣಾ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಸಿರಲಿಲ್ಲ. ಹೀಗಿದ್ದರೂ ಸರ್ಕಾರವು ಈ ಹಗರಣದಲ್ಲಿ ಮಂಜುನಾಥ ಗೌಡರ ಪಾತ್ರವಿದೆ ಎಂದು ಪರಿಭಾವಿಸಿ ಅವರ ಸದಸ್ಯತ್ವ ಅನರ್ಹಗೊಳಿಸಿತ್ತು. ಆದರೆ, ಇದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.</p>.<p>ನಂತರ ನಡೆದ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಮಂಜುನಾಥ ಗೌಡ ಮತ್ತೆ ಜಯಗಳಿಸಿ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದರು. ಹೀಗಿದ್ದರೂ ಸರ್ಕಾರ ಮತ್ತೆ ಅವರ ಸದಸ್ಯತ್ವವನ್ನು ಅನರ್ಹಗೊಳಿಸಿದ್ದರಿಂದ ಅವರು ಅನಿವಾರ್ಯವಾಗಿ ಸಹಕಾರ ವಲಯದಿಂದ ದೂರ ಉಳಿದಿದ್ದಾರೆ.</p>.<p>ಇದೀಗ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿರುವುದರಿಂದ ಮಂಜುನಾಥ ಗೌಡರಿಗೆ ಮತ್ತೆ ಸಂಕಷ್ಟ ಎದುರಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ನಕಲಿ ಬಂಗಾರ ಅಡಮಾನ ಸಾಲದ ಬಹುಕೋಟಿ ರೂಪಾಯಿಯ ಹಗರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸಿ.ರಾಜಣ್ಣ ರೆಡ್ಡಿ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಡಿಸಿಸಿ ಬ್ಯಾಂಕ್ನಲ್ಲಿ ₹ 62.75 ಕೋಟಿ ಮೌಲ್ಯದ ನಕಲಿ ಬಂಗಾರ ಅಡವಿಟ್ಟಿದ್ದ ಅವ್ಯವಹಾರ ಪ್ರಕರಣದಲ್ಲಿ ಆಡಳಿತಾತ್ಮಕ ಕರ್ತವ್ಯ ಲೋಪ ಎಸಗಿರುವುದು ಸಾಬೀತಾಗಿರುವುದರಿಂದ ಇವರಿಬ್ಬರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಬೆಂಗಳೂರು ಪ್ರಾಂತದ ಸಹಕಾರ</p>.<p>ಸಂಘಗಳ ಜಂಟಿ ನಿಬಂಧಕರಾದ ಡಿ.ಪಾಂಡುರಂಗ ಗರಗ್ ಅವರು ಆದೇಶ ನೀಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪ ನಿರ್ದೇಶಕರು ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿದ್ದಾರೆ.</p>.<p class="Subhead"><strong>ಪ್ರಕರಣದ ವಿವರ: </strong>ನಕಲಿ ಬಂಗಾರ ಅಡಮಾನ ಪ್ರಕರಣ 2014ರಲ್ಲಿ ಬೆಳಕಿಗೆ ಬಂದಿತ್ತು. 2004ರಿಂದ 2014ರ ನಡುವಿನ ಅವಧಿಯಲ್ಲಿ 490 ಸಾಲದ ಖಾತೆಗಳ ಮೂಲಕ ನಕಲಿ ಬಂಗಾರವನ್ನು ಅಡವಿಟ್ಟುಕೊಂಡು ಮತ್ತು 171 ಖಾತೆಗಳಲ್ಲಿ ಡಿಸಿಸಿ ಬ್ಯಾಂಕ್ ನಗರ ಶಾಖೆಯಲ್ಲಿ ₹ 62.75 ಕೋಟಿ ಸಾಲ ನೀಡುವ ಮೂಲಕ ಅವ್ಯವಹಾರ ನಡೆಸಲಾಗಿತ್ತು.</p>.<p>ಈ ಘಟನೆ ಬೆಳಕಿಗೆ ಬಂದ ನಂತರ ಸಿಐಡಿ ತನಿಖೆ ನಡೆಸಿ ಹಗರಣದ ಪ್ರಮುಖ ಆರೋಪಿಗಳಾದ ನಗರ ಶಾಖೆಯ ವ್ಯವಸ್ಥಾಪಕಿಯಾಗಿದ್ದ ಶೋಭಾ, ಅಧ್ಯಕ್ಷರಾಗಿದ್ದ ಮಂಜುನಾಥ ಗೌಡ ಮತ್ತಿತರರ ವಿರುದ್ಧ ಮೊಕದ್ದಮೆ ದಾಖಲಿಸಿ, ಬಂಧಿಸಲಾಗಿತ್ತು.</p>.<p>ಅದೇ ಕಾರಣಕ್ಕೆ ಬ್ಯಾಂಕ್ ಆಡಳಿತ ಮಂಡಳಿಯನ್ನೂ ಅಮಾನತುಗೊಳಿಸಲಾಗಿತ್ತು. ಆದರೆ, ಇದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದರ ನಡುವೆ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಮಂಜುನಾಥ ಗೌಡರ ಬಗ್ಗೆ ಮಾತ್ರ ವಿಚಾರಣಾ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಸಿರಲಿಲ್ಲ. ಹೀಗಿದ್ದರೂ ಸರ್ಕಾರವು ಈ ಹಗರಣದಲ್ಲಿ ಮಂಜುನಾಥ ಗೌಡರ ಪಾತ್ರವಿದೆ ಎಂದು ಪರಿಭಾವಿಸಿ ಅವರ ಸದಸ್ಯತ್ವ ಅನರ್ಹಗೊಳಿಸಿತ್ತು. ಆದರೆ, ಇದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.</p>.<p>ನಂತರ ನಡೆದ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಮಂಜುನಾಥ ಗೌಡ ಮತ್ತೆ ಜಯಗಳಿಸಿ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದರು. ಹೀಗಿದ್ದರೂ ಸರ್ಕಾರ ಮತ್ತೆ ಅವರ ಸದಸ್ಯತ್ವವನ್ನು ಅನರ್ಹಗೊಳಿಸಿದ್ದರಿಂದ ಅವರು ಅನಿವಾರ್ಯವಾಗಿ ಸಹಕಾರ ವಲಯದಿಂದ ದೂರ ಉಳಿದಿದ್ದಾರೆ.</p>.<p>ಇದೀಗ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿರುವುದರಿಂದ ಮಂಜುನಾಥ ಗೌಡರಿಗೆ ಮತ್ತೆ ಸಂಕಷ್ಟ ಎದುರಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>