<p><strong>ಬೆಜ್ಜವಳ್ಳಿ (ತೀರ್ಥಹಳ್ಳಿ):</strong>ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಮಕರ ಸಂಕ್ರಮಣ ಜಾತ್ರೆ ಸಂಭ್ರಮದಿಂದನೆರವೇರಿತು. ಜಾತ್ರೆಯಲ್ಲಿ ನೂರಾರು ಜನರು ಸೇರಿ ದೇವರದರ್ಶನ ಪಡೆದರು.</p>.<p>ಸಂಕ್ರಾಂತಿ ಅಂಗವಾಗಿ ದೇವಾಲಯದಲ್ಲಿ ಭಕ್ತರು ಗರುಡ ದರ್ಶನ ಪಡೆದರು. ಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ನಡೆಯಿತು.</p>.<p>ಮಕರ ಸಂಕ್ರಮಣ ಅಂಗವಾಗಿ ತಾಲ್ಲೂಕಿನ ಕುಂದಾದ್ರಿ ಬೆಟ್ಟ, ಪಟ್ಟಣದ ಲಕ್ಷ್ಮೀ ವೆಂಕಟರಮಣ ದೇವಾಲಯ, ಆರಗದ ಅರುಣಗಿರಿ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು<br />ನಡೆದವು.</p>.<p>ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ನಿರೀಕ್ಷೆಗೂ ಮೀರಿ ಭಕ್ತರು ಸೇರಿದ್ದು, ಕೋವಿಡ್ ನಿಯಮ ಪಾಲನೆಯಾಗಲಿಲ್ಲ.</p>.<p>ಮಕರ ಸಂಕ್ರಾಂತಿ ಅಂಗವಾಗಿ ತಾಲ್ಲೂಕಿನ ವಿವಿಧೆಡೆ ಜಾತ್ರಾ ಮಹೋತ್ಸವ, ರಥೋತ್ಸವಗಳು ಸಂಭ್ರಮದಿಂದ ನಡೆದವು.</p>.<p class="Subhead">ಪಾಲನೆಯಾಗದ ನಿಯಮ: ಕೋವಿಡ್ ಸೋಂಕು ತಡೆಯಲು ಸರ್ಕಾರ ಪ್ರಕಟಿಸಿರುವ ನಿರ್ಬಂಧ ಬಹುತೇಕ ಧಾರ್ಮಿಕ ಕೇಂದ್ರಗಳಲ್ಲಿ ಪಾಲನೆಯಾಗಲಿಲ್ಲ.ಪೊಲೀಸ್, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿ, ಸಿಬ್ಬಂದಿ ನಿಯಮ ಉಲ್ಲಂಘಿಸಿ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಕ್ತರಿಗೆ ಭೋಜನ ವ್ಯವಸ್ಥೆಯನ್ನೂ ಏರ್ಪಡಿಸಲಾಗಿತ್ತು.</p>.<p>ಅಧಿಕಾರಿಗಳೇ ನಿಯಮ ಪಾಲಿಸಲಿಲ್ಲ. ಕೊರೊನಾ ಆತಂಕದ ನಡುವೆಯೂ ಗೃಹ ಸಚಿವರ ಕ್ಷೇತ್ರದಲ್ಲೇ ಜಾತ್ರೆಗಳು ಸಂಭ್ರಮದಿಂದ ನಡೆಯುತ್ತಿವೆ ಎಂದು ಸ್ಥಳೀಯರುಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಜ್ಜವಳ್ಳಿ (ತೀರ್ಥಹಳ್ಳಿ):</strong>ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಮಕರ ಸಂಕ್ರಮಣ ಜಾತ್ರೆ ಸಂಭ್ರಮದಿಂದನೆರವೇರಿತು. ಜಾತ್ರೆಯಲ್ಲಿ ನೂರಾರು ಜನರು ಸೇರಿ ದೇವರದರ್ಶನ ಪಡೆದರು.</p>.<p>ಸಂಕ್ರಾಂತಿ ಅಂಗವಾಗಿ ದೇವಾಲಯದಲ್ಲಿ ಭಕ್ತರು ಗರುಡ ದರ್ಶನ ಪಡೆದರು. ಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ನಡೆಯಿತು.</p>.<p>ಮಕರ ಸಂಕ್ರಮಣ ಅಂಗವಾಗಿ ತಾಲ್ಲೂಕಿನ ಕುಂದಾದ್ರಿ ಬೆಟ್ಟ, ಪಟ್ಟಣದ ಲಕ್ಷ್ಮೀ ವೆಂಕಟರಮಣ ದೇವಾಲಯ, ಆರಗದ ಅರುಣಗಿರಿ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು<br />ನಡೆದವು.</p>.<p>ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ನಿರೀಕ್ಷೆಗೂ ಮೀರಿ ಭಕ್ತರು ಸೇರಿದ್ದು, ಕೋವಿಡ್ ನಿಯಮ ಪಾಲನೆಯಾಗಲಿಲ್ಲ.</p>.<p>ಮಕರ ಸಂಕ್ರಾಂತಿ ಅಂಗವಾಗಿ ತಾಲ್ಲೂಕಿನ ವಿವಿಧೆಡೆ ಜಾತ್ರಾ ಮಹೋತ್ಸವ, ರಥೋತ್ಸವಗಳು ಸಂಭ್ರಮದಿಂದ ನಡೆದವು.</p>.<p class="Subhead">ಪಾಲನೆಯಾಗದ ನಿಯಮ: ಕೋವಿಡ್ ಸೋಂಕು ತಡೆಯಲು ಸರ್ಕಾರ ಪ್ರಕಟಿಸಿರುವ ನಿರ್ಬಂಧ ಬಹುತೇಕ ಧಾರ್ಮಿಕ ಕೇಂದ್ರಗಳಲ್ಲಿ ಪಾಲನೆಯಾಗಲಿಲ್ಲ.ಪೊಲೀಸ್, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿ, ಸಿಬ್ಬಂದಿ ನಿಯಮ ಉಲ್ಲಂಘಿಸಿ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಕ್ತರಿಗೆ ಭೋಜನ ವ್ಯವಸ್ಥೆಯನ್ನೂ ಏರ್ಪಡಿಸಲಾಗಿತ್ತು.</p>.<p>ಅಧಿಕಾರಿಗಳೇ ನಿಯಮ ಪಾಲಿಸಲಿಲ್ಲ. ಕೊರೊನಾ ಆತಂಕದ ನಡುವೆಯೂ ಗೃಹ ಸಚಿವರ ಕ್ಷೇತ್ರದಲ್ಲೇ ಜಾತ್ರೆಗಳು ಸಂಭ್ರಮದಿಂದ ನಡೆಯುತ್ತಿವೆ ಎಂದು ಸ್ಥಳೀಯರುಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>