<p>ಸೊರಬ: ಮಲೆನಾಡು ಹಾಗೂ ಬಯಲುಸೀಮೆ ಜನರ ಪಾಲಿನ ಶಕ್ತಿ ದೇವತೆ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನಕ್ಕೆ ಬುದ್ಧ ಪೂರ್ಣಿಮೆ ನಿಮಿತ್ತ ಶುಕ್ರವಾರ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದು ದೇವಿಯ ದರ್ಶನ ಪಡೆದರು.</p>.<p>ತಾಲ್ಲೂಕು ಸೇರಿ ಬ್ಯಾಡಗಿ, ರಾಣೇಬೆನ್ನೂರು, ಹರಿಹರ, ಶಿಕಾರಿಪುರ, ಹಾನಗಲ್, ವಿಜಯಪುರ, ಚಿತ್ರದುರ್ಗ, ಶಿವಮೊಗ್ಗ, ಬೆಳಗಾವಿ, ಹಾವೇರಿ ಸೇರಿ ಉತ್ತರ ಕರ್ನಾಟಕ ಭಾಗಗಳಿಂದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.</p>.<p>ರೇಣುಕಾ ದೇವಿಯ ದರ್ಶನ ಪಡೆದು ದೇವಿ ಹೆಸರಿನಲ್ಲಿ ವಿವಿಧ ಧಾರ್ಮಿಕ ಆಚರಣೆಗಳನ್ನು ನಡೆಸಿದರು. ಹುಣ್ಣಿಮೆ ಅಂಗವಾಗಿ ದೇವಸ್ಥಾನದ ಆವರಣದಲ್ಲಿರುವ ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಬೈರಪ್ಪ ದೇವರುಗಳಿಗೆ ಮತ್ತು ತೊಟ್ಟಿಲು ಬಾವಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.</p>.<p>ಕೆಲ ಭಕ್ತರು ಖಾದ್ಯಗಳನ್ನು ತಯಾರಿಸಿಕೊಂಡು ಬಂದು ದೇವಿಯ ಹೆಸರಿನಲ್ಲಿ ನೈವೇದ್ಯ ಅರ್ಪಿಸಿ ನಂತರ ಬಂಧು– ಬಳಗದವರ ಜೊತೆ ಸಹ ಭೋಜನ ಮಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-42-119148195</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೊರಬ: ಮಲೆನಾಡು ಹಾಗೂ ಬಯಲುಸೀಮೆ ಜನರ ಪಾಲಿನ ಶಕ್ತಿ ದೇವತೆ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನಕ್ಕೆ ಬುದ್ಧ ಪೂರ್ಣಿಮೆ ನಿಮಿತ್ತ ಶುಕ್ರವಾರ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದು ದೇವಿಯ ದರ್ಶನ ಪಡೆದರು.</p>.<p>ತಾಲ್ಲೂಕು ಸೇರಿ ಬ್ಯಾಡಗಿ, ರಾಣೇಬೆನ್ನೂರು, ಹರಿಹರ, ಶಿಕಾರಿಪುರ, ಹಾನಗಲ್, ವಿಜಯಪುರ, ಚಿತ್ರದುರ್ಗ, ಶಿವಮೊಗ್ಗ, ಬೆಳಗಾವಿ, ಹಾವೇರಿ ಸೇರಿ ಉತ್ತರ ಕರ್ನಾಟಕ ಭಾಗಗಳಿಂದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.</p>.<p>ರೇಣುಕಾ ದೇವಿಯ ದರ್ಶನ ಪಡೆದು ದೇವಿ ಹೆಸರಿನಲ್ಲಿ ವಿವಿಧ ಧಾರ್ಮಿಕ ಆಚರಣೆಗಳನ್ನು ನಡೆಸಿದರು. ಹುಣ್ಣಿಮೆ ಅಂಗವಾಗಿ ದೇವಸ್ಥಾನದ ಆವರಣದಲ್ಲಿರುವ ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಬೈರಪ್ಪ ದೇವರುಗಳಿಗೆ ಮತ್ತು ತೊಟ್ಟಿಲು ಬಾವಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.</p>.<p>ಕೆಲ ಭಕ್ತರು ಖಾದ್ಯಗಳನ್ನು ತಯಾರಿಸಿಕೊಂಡು ಬಂದು ದೇವಿಯ ಹೆಸರಿನಲ್ಲಿ ನೈವೇದ್ಯ ಅರ್ಪಿಸಿ ನಂತರ ಬಂಧು– ಬಳಗದವರ ಜೊತೆ ಸಹ ಭೋಜನ ಮಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-42-119148195</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>