‘ಬಿಜೆಪಿ ಆಡಳಿತವಿದ್ದಾಗ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ, ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ಅವರ ಹೆಸರು ಬರೆದಿದ್ದರು. ಚಂದ್ರಶೇಖರನ್ ಡೆತ್ನೋಟ್ನಲ್ಲಿ ಸಚಿವರ ಮೌಖಿಕ ಆದೇಶ ಎಂದು ಬರೆದಿದ್ದಾರೆ. ಆದರೆ, ಯಾರ ಹೆಸರೂ ಬರೆದಿಲ್ಲ. ಹೀಗಾಗಿ ಪ್ರಕರಣದಲ್ಲಿ ನಿರ್ದಿಷ್ಟವಾಗಿ ಸಚಿವರ ಮೇಲೆ ಹೊಣೆ ಹೊರಿಸಲು ಬರುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಡಾ.ಪರಮೇಶ್ವರ, ‘ಒಂದು ವೇಳೆ ಸಚಿವ ಬಿ. ನಾಗೇಂದ್ರ ಒತ್ತಡ ಹಾಕಿರುವುದು ಕಂಡು ಬಂದರೆ ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ’ ಎಂದು ಹೇಳಿದರು.