ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಿವಮೊಗ್ಗ–ಶಿಕಾರಿಪುರ–ರಾಣೆಬೆನ್ನೂರು ಮಾರ್ಗ ಬದಲಾಯಿಸಿ, ಶಿವಮೊಗ್ಗ–ಶಿಕಾರಿಪುರ–ಯಲವಿಗಿ ಮಾರ್ಗದಲ್ಲಿ ಮಾರ್ಗ ನಿರ್ಮಾಣ ಮಾಡಬೇಕು. ಈ ಮಾರ್ಗದಿಂದ ಮಲೆನಾಡು, ಕರಾವಳಿ ಹಾಗೂ ಉತ್ತರ ಕರ್ನಾಟಕಕ್ಕೆ ಸಂಪರ್ಕ ಸಿಕ್ಕಂತಾಗುತ್ತದೆ. ಶಿಕಾರಿಪುರ, ಉಡುಗಣಿ, ಬಳ್ಳಿಗಾವಿ, ತಾಳಗುಂದ, ತೊಗರ್ಸಿ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ, ಆನವಟ್ಟಿ, ಕೋಟಿಪುರ, ಹಾನಗಲ್, ಬಂಕಾಪುರ–ಸವಣೂರು, ಎಲಿವಿಗಿ ಜಂಕ್ಷನ್ ಮೂಲಕ ಹುಬ್ಬಳಿ, ಕಾರವಾರ, ಗೋವಾ, ಬೆಂಗಳೂರು, ಗದಗ ಸೇರಿ ಹಲವು ನಗರಗಳಿಗೆ ರೈಲ್ವೆ ಸಂಪರ್ಕ ದೊರೆಯುತ್ತದೆ’ ಎಂದರು.