<p>ಶಿವಮೊಗ್ಗ: ‘ಬಲಹೀನರಿಗೆ ಆರ್ಥಿಕ ಶಕ್ತಿ ನೀಡುವ ಸಂಸ್ಕೃತಿ ಭಾರತದ್ದು. ಅನಾದಿಕಾಲದಿಂದಲೂ ನಮ್ಮಲ್ಲಿ ಆರ್ಥಿಕ ಸಹಕಾರವನ್ನು ನೀಡುವಂತಹ ಪದ್ಧತಿ ಇದೆ. ಅದರ ಮುಂದುವರಿದ ಭಾಗವೇ ಸಹಕಾರ ಸಂಘಗಳು’ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಕುವೆಂಪು ರಂಗಮಂದಿರದಲ್ಲಿ ಶುಕ್ರವಾರ ಭಗೀರಥ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಲೋಗೋ ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>ಪ್ರತಿಭಾ ಪುರಸ್ಕಾರ ನೆರವೇರಿಸಿದ ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ‘ಸಮುದಾಯ ಮುಂದೆ ಬರಬೇಕಾದರೆ ಅಥವಾ ಉನ್ನತಿಯನ್ನು ಕಾಣಬೇಕಾದರೆ ಆ ಸಮಾಜದಲ್ಲಿ ವಿದ್ಯಾವಂತರು ಹೆಚ್ಚಾಗಬೇಕು. ಇಂದು ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿದ್ದು, ಒಳ್ಳೆಯ ಬೆಳವಣಿಗೆ. ಮುಂದಿನ ದಿನಗಳಲ್ಲಿ ಸಮಾಜದ ಮಕ್ಕಳು ಇನ್ನೂ ಹೆಚ್ಚಿನ ಸಾಧನೆ ಮಾಡಲಿ’ ಎಂದು ಆಶಿಸಿದರು.</p>.<p>‘ಸಹಕಾರ ಸಂಘಗಳು ರಾಷ್ಟ್ರದ ಆರ್ಥಿಕ ವ್ಯವಸ್ಥೆ ಬಲಗೊಳಿಸುತ್ತವೆ. 119 ವರ್ಷಗಳ ಹಿಂದೆಯೇ ಸಹಕಾರ ತತ್ವದ ನೆಲೆಯಲ್ಲಿ ಗದಗ ಜಿಲ್ಲೆಯಲ್ಲಿ ಸಂಘ ಆರಂಭಗೊಂಡಿತು. ಅಂದಿನ ಹಿರಿಯರು ಬಡವರ ಮೇಲಿನ ಸಾಲದ ಹೊರೆ ತಗ್ಗಿಸಲು ಮತ್ತು ಸಾಹುಕಾರರ ಕಪಿಮುಷ್ಠಿಯಿಂದ ತಪ್ಪಿಸಿಕೊಳ್ಳುವಂತೆ ಮಾಡಲು ಈ ಸಂಘ ಸ್ಥಾಪಿಸಲಾಯಿತು. ಆದರೆ ಇಂದು ದೇಶದಲ್ಲಿಯೇ ಸಹಕಾರ ತತ್ವ ಆರ್ಥಿಕ ಬದ್ಧತೆ ಒದಗಿಸಿದೆ‘ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹೇಳಿದರು.</p>.<p>700ಕ್ಕೂ ಅಧಿಕ ಸದಸ್ಯರನ್ನು ₹ 15 ಲಕ್ಷ ಬಂಡವಾಳ ಹೊಂದುವ ಮೂಲಕ ಸಹಕಾರ ಸಂಘ ಸ್ಥಾಪಿಸುವುದು ಸುಲಭದ ಮಾತಲ್ಲ. ಸಮಾಜದಲ್ಲಿನ ಬಡವರನ್ನು ಆರ್ಥಿಕವಾಗಿ ಸಬಲರಾಗಿಸುವ ಉದ್ದೇಶದಿಂದ ಸಂಘ ಮುಂದಿನ ದಿನಗಳಲ್ಲಿ ಯಶಸ್ಸಿನ ಹಾದಿ ತುಳಿಯಲಿ ಎಂದು ಆಶಿಸಿದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀಭಗೀರಥ ಸಹಕಾರ ಸಂಘದ ಅಧ್ಯಕ್ಷ ಎನ್.ಮಂಜುನಾಥ್, ‘ಸಂಘಟನೆ ಮಾಡುವುದು ಎಷ್ಟೊಂದು ಕಷ್ಟ ಎಂದು ಅರ್ಥವಾಗುತ್ತಿದೆ. ಸಮಾಜದ ಜನರ ಬಹುದಿನದ ಕನಸಾದ ಈ ಸಂಘ ಇಂದು ನನಸಾಗಿದೆ’ ಎಂದರು.<br /><br />ಜಿಲ್ಲೆಯಲ್ಲಿ 48 ಹಳ್ಳಿಗಳಿಂದ ಷೇರುದಾರರನ್ನು ಸಹಕಾರ ಸಂಘ ಹೊಂದಿದೆ. ಅನೇಕ ಕುಟುಂಬಗಳು ಆರ್ಥಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಈ ಕುಟುಂಬಗಳಿಗೆ ಆರ್ಥಿಕ ಬಲ ತುಂಬುವ ಸಲುವಾಗಿ ಈ ಸಂಘ ಸ್ಥಾಪಿಸಲಾಗಿದೆ ಎಂದು ಹೇಳಿದರು.</p>.<p>50 ವರ್ಷಗಳ ಕಾಲ ವೈವಾಹಿಕ ಜೀವನ ನಡೆಸಿದ ದಂಪತಿಗೆ ಹಾಗೂ ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್, ನಿವೃತ್ತ ನ್ಯಾಯಾಧೀಶ ಬಿಲ್ಲಪ್ಪ, ಜಗನ್ನಾಥ್ ಸಾಗರ್, ಸಂಘದ ಉಪಾಧ್ಯಕ್ಷ ವಸಂತ್ ಹೋಬಳಿದಾರ್, ನಿರ್ದೇಶಕರಾದ ಸುಧಾಕರ್, ರವಿ, ಲೋಕೇಶ್, ಹನುಮಂತಪ್ಪ, ವೆಂಕಟೇಶ್, ರಮೇಶ್ , ಶ್ರೀನಿವಾಸ್, ಶಾಂತಮ್ಮ, ಅರ್ಚನಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ‘ಬಲಹೀನರಿಗೆ ಆರ್ಥಿಕ ಶಕ್ತಿ ನೀಡುವ ಸಂಸ್ಕೃತಿ ಭಾರತದ್ದು. ಅನಾದಿಕಾಲದಿಂದಲೂ ನಮ್ಮಲ್ಲಿ ಆರ್ಥಿಕ ಸಹಕಾರವನ್ನು ನೀಡುವಂತಹ ಪದ್ಧತಿ ಇದೆ. ಅದರ ಮುಂದುವರಿದ ಭಾಗವೇ ಸಹಕಾರ ಸಂಘಗಳು’ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಕುವೆಂಪು ರಂಗಮಂದಿರದಲ್ಲಿ ಶುಕ್ರವಾರ ಭಗೀರಥ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಲೋಗೋ ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>ಪ್ರತಿಭಾ ಪುರಸ್ಕಾರ ನೆರವೇರಿಸಿದ ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ‘ಸಮುದಾಯ ಮುಂದೆ ಬರಬೇಕಾದರೆ ಅಥವಾ ಉನ್ನತಿಯನ್ನು ಕಾಣಬೇಕಾದರೆ ಆ ಸಮಾಜದಲ್ಲಿ ವಿದ್ಯಾವಂತರು ಹೆಚ್ಚಾಗಬೇಕು. ಇಂದು ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿದ್ದು, ಒಳ್ಳೆಯ ಬೆಳವಣಿಗೆ. ಮುಂದಿನ ದಿನಗಳಲ್ಲಿ ಸಮಾಜದ ಮಕ್ಕಳು ಇನ್ನೂ ಹೆಚ್ಚಿನ ಸಾಧನೆ ಮಾಡಲಿ’ ಎಂದು ಆಶಿಸಿದರು.</p>.<p>‘ಸಹಕಾರ ಸಂಘಗಳು ರಾಷ್ಟ್ರದ ಆರ್ಥಿಕ ವ್ಯವಸ್ಥೆ ಬಲಗೊಳಿಸುತ್ತವೆ. 119 ವರ್ಷಗಳ ಹಿಂದೆಯೇ ಸಹಕಾರ ತತ್ವದ ನೆಲೆಯಲ್ಲಿ ಗದಗ ಜಿಲ್ಲೆಯಲ್ಲಿ ಸಂಘ ಆರಂಭಗೊಂಡಿತು. ಅಂದಿನ ಹಿರಿಯರು ಬಡವರ ಮೇಲಿನ ಸಾಲದ ಹೊರೆ ತಗ್ಗಿಸಲು ಮತ್ತು ಸಾಹುಕಾರರ ಕಪಿಮುಷ್ಠಿಯಿಂದ ತಪ್ಪಿಸಿಕೊಳ್ಳುವಂತೆ ಮಾಡಲು ಈ ಸಂಘ ಸ್ಥಾಪಿಸಲಾಯಿತು. ಆದರೆ ಇಂದು ದೇಶದಲ್ಲಿಯೇ ಸಹಕಾರ ತತ್ವ ಆರ್ಥಿಕ ಬದ್ಧತೆ ಒದಗಿಸಿದೆ‘ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹೇಳಿದರು.</p>.<p>700ಕ್ಕೂ ಅಧಿಕ ಸದಸ್ಯರನ್ನು ₹ 15 ಲಕ್ಷ ಬಂಡವಾಳ ಹೊಂದುವ ಮೂಲಕ ಸಹಕಾರ ಸಂಘ ಸ್ಥಾಪಿಸುವುದು ಸುಲಭದ ಮಾತಲ್ಲ. ಸಮಾಜದಲ್ಲಿನ ಬಡವರನ್ನು ಆರ್ಥಿಕವಾಗಿ ಸಬಲರಾಗಿಸುವ ಉದ್ದೇಶದಿಂದ ಸಂಘ ಮುಂದಿನ ದಿನಗಳಲ್ಲಿ ಯಶಸ್ಸಿನ ಹಾದಿ ತುಳಿಯಲಿ ಎಂದು ಆಶಿಸಿದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀಭಗೀರಥ ಸಹಕಾರ ಸಂಘದ ಅಧ್ಯಕ್ಷ ಎನ್.ಮಂಜುನಾಥ್, ‘ಸಂಘಟನೆ ಮಾಡುವುದು ಎಷ್ಟೊಂದು ಕಷ್ಟ ಎಂದು ಅರ್ಥವಾಗುತ್ತಿದೆ. ಸಮಾಜದ ಜನರ ಬಹುದಿನದ ಕನಸಾದ ಈ ಸಂಘ ಇಂದು ನನಸಾಗಿದೆ’ ಎಂದರು.<br /><br />ಜಿಲ್ಲೆಯಲ್ಲಿ 48 ಹಳ್ಳಿಗಳಿಂದ ಷೇರುದಾರರನ್ನು ಸಹಕಾರ ಸಂಘ ಹೊಂದಿದೆ. ಅನೇಕ ಕುಟುಂಬಗಳು ಆರ್ಥಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಈ ಕುಟುಂಬಗಳಿಗೆ ಆರ್ಥಿಕ ಬಲ ತುಂಬುವ ಸಲುವಾಗಿ ಈ ಸಂಘ ಸ್ಥಾಪಿಸಲಾಗಿದೆ ಎಂದು ಹೇಳಿದರು.</p>.<p>50 ವರ್ಷಗಳ ಕಾಲ ವೈವಾಹಿಕ ಜೀವನ ನಡೆಸಿದ ದಂಪತಿಗೆ ಹಾಗೂ ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್, ನಿವೃತ್ತ ನ್ಯಾಯಾಧೀಶ ಬಿಲ್ಲಪ್ಪ, ಜಗನ್ನಾಥ್ ಸಾಗರ್, ಸಂಘದ ಉಪಾಧ್ಯಕ್ಷ ವಸಂತ್ ಹೋಬಳಿದಾರ್, ನಿರ್ದೇಶಕರಾದ ಸುಧಾಕರ್, ರವಿ, ಲೋಕೇಶ್, ಹನುಮಂತಪ್ಪ, ವೆಂಕಟೇಶ್, ರಮೇಶ್ , ಶ್ರೀನಿವಾಸ್, ಶಾಂತಮ್ಮ, ಅರ್ಚನಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>