<p>ಶಿಕಾರಿಪುರ: ಅಕ್ಷರ ಜ್ಞಾನ ಹಾಗೂ ಮೆರಿಟ್ ಯಾವುದೇ ಒಂದು ಜಾತಿಗೆ ಮೀಸಲಾಗಿಲ್ಲ. ಎಲ್ಲ ಜಾತಿಯವರು ಅಕ್ಷರ ಜ್ಞಾನ ಪಡೆಯಬಹುದು ಎಂದು ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷವೀರೇಶಾನಂದ ಸರಸ್ವತೀ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕ ಆಶ್ರಯದಲ್ಲಿ ನಡೆದ ಹಾನಗಲ್ ಕುಮಾರಸ್ವಾಮಿಗಳ 154ನೇ ಜಯಂತ್ಯುತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.</p>.<p>‘ನಾವು ಗಳಿಸುವ ಹಣಕ್ಕಿಂತ ನಾವು ಪಡೆಯುವ ಶಿಕ್ಷಣ ಸಮಾಜದಲ್ಲಿ ಪ್ರಮುಖ ಸ್ಥಾನ ನೀಡುತ್ತದೆ.ನಾವು ಕಲಿತ ಅಕ್ಷರ ಜ್ಞಾನ ಮತ್ತೊಬ್ಬರಿಗೆ ಮೋಸ ಮಾಡಲು ದುರ್ಬಳಕೆಯಾಗಬಾರದು’ ಎಂದು ಸಲಹೆ ನೀಡಿದರು.</p>.<p>ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ‘ಹಾನಗಲ್ ಕುಮಾರಸ್ವಾಮಿಗಳು ಸಮಾಜದಲ್ಲಿದ್ದ ಮೌಢ್ಯ ಹಾಗೂ ಅಸಮಾನತೆ ತೊಲಗಿಸಲು ಶ್ರಮಿಸಿದ್ದರು. ಅವರ ತತ್ವ ಆದರ್ಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಸಂಸದ ಬಿ.ವೈ. ರಾಘವೇಂದ್ರ, ‘ಆಧ್ಯಾತ್ಮಿಕ ಕ್ಷೇತ್ರದಲ್ಲಿ ಜಗತ್ತಿನಲ್ಲಿಯೇ ಭಾರತಕ್ಕೆ ಅಗ್ರ ಸ್ಥಾನ ಇದೆ. ಹಾನಗಲ್ ಕುಮಾರಸ್ವಾಮಿಗಳು ಶಿವಯೋಗ ಮಂದಿರ ಸ್ಥಾಪಿಸುವ ಮೂಲಕ ಸಮಾಜದ ಜನರ ಅಭಿವೃದ್ಧಿಗೆ ಶ್ರಮಿಸಿದ್ದರು’ ಎಂದು ಶ್ಲಾಘಿಸಿದರು.</p>.<p>ಕಾಲೇಜು ಶಿಕ್ಷಣ ಇಲಾಖೆ ವಿಶೇಷ ಅಧಿಕಾರಿ ಬಿ.ಎಂ. ಮಂಜುನಾಥ್ ಮಾತನಾಡಿದರು. ತೊಗರ್ಸಿ ಪಂಚವಣ್ಣಿಗೆ ಮಠದ ಪೀಠಾಧ್ಯಕ್ಷ ಚನ್ನವೀರ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು.ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕ ಅಧ್ಯಕ್ಷ ಎನ್.ವಿ. ಈರೇಶ್ ಅಧ್ಯಕ್ಷತೆ ವಹಿಸಿದ್ದರು.</p>.<p>ಅತ್ಯುತ್ತಮ ಶಾಸಕ ಪ್ರಶಸ್ತಿ ಪುರಸ್ಕೃತರಾದ ಯಡಿಯೂರಪ್ಪ ಅವರನ್ನು ಸನ್ಮಾನಿಸಲಾಯಿತು. ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಘಟಕ ಸದಸ್ಯ ಬಿ.ಡಿ. ಭೂಕಾಂತ್, ಕೊಟ್ರೇಶಪ್ಪ, ಕುಮಾರಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಕಾರಿಪುರ: ಅಕ್ಷರ ಜ್ಞಾನ ಹಾಗೂ ಮೆರಿಟ್ ಯಾವುದೇ ಒಂದು ಜಾತಿಗೆ ಮೀಸಲಾಗಿಲ್ಲ. ಎಲ್ಲ ಜಾತಿಯವರು ಅಕ್ಷರ ಜ್ಞಾನ ಪಡೆಯಬಹುದು ಎಂದು ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷವೀರೇಶಾನಂದ ಸರಸ್ವತೀ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕ ಆಶ್ರಯದಲ್ಲಿ ನಡೆದ ಹಾನಗಲ್ ಕುಮಾರಸ್ವಾಮಿಗಳ 154ನೇ ಜಯಂತ್ಯುತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.</p>.<p>‘ನಾವು ಗಳಿಸುವ ಹಣಕ್ಕಿಂತ ನಾವು ಪಡೆಯುವ ಶಿಕ್ಷಣ ಸಮಾಜದಲ್ಲಿ ಪ್ರಮುಖ ಸ್ಥಾನ ನೀಡುತ್ತದೆ.ನಾವು ಕಲಿತ ಅಕ್ಷರ ಜ್ಞಾನ ಮತ್ತೊಬ್ಬರಿಗೆ ಮೋಸ ಮಾಡಲು ದುರ್ಬಳಕೆಯಾಗಬಾರದು’ ಎಂದು ಸಲಹೆ ನೀಡಿದರು.</p>.<p>ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ‘ಹಾನಗಲ್ ಕುಮಾರಸ್ವಾಮಿಗಳು ಸಮಾಜದಲ್ಲಿದ್ದ ಮೌಢ್ಯ ಹಾಗೂ ಅಸಮಾನತೆ ತೊಲಗಿಸಲು ಶ್ರಮಿಸಿದ್ದರು. ಅವರ ತತ್ವ ಆದರ್ಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಸಂಸದ ಬಿ.ವೈ. ರಾಘವೇಂದ್ರ, ‘ಆಧ್ಯಾತ್ಮಿಕ ಕ್ಷೇತ್ರದಲ್ಲಿ ಜಗತ್ತಿನಲ್ಲಿಯೇ ಭಾರತಕ್ಕೆ ಅಗ್ರ ಸ್ಥಾನ ಇದೆ. ಹಾನಗಲ್ ಕುಮಾರಸ್ವಾಮಿಗಳು ಶಿವಯೋಗ ಮಂದಿರ ಸ್ಥಾಪಿಸುವ ಮೂಲಕ ಸಮಾಜದ ಜನರ ಅಭಿವೃದ್ಧಿಗೆ ಶ್ರಮಿಸಿದ್ದರು’ ಎಂದು ಶ್ಲಾಘಿಸಿದರು.</p>.<p>ಕಾಲೇಜು ಶಿಕ್ಷಣ ಇಲಾಖೆ ವಿಶೇಷ ಅಧಿಕಾರಿ ಬಿ.ಎಂ. ಮಂಜುನಾಥ್ ಮಾತನಾಡಿದರು. ತೊಗರ್ಸಿ ಪಂಚವಣ್ಣಿಗೆ ಮಠದ ಪೀಠಾಧ್ಯಕ್ಷ ಚನ್ನವೀರ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು.ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕ ಅಧ್ಯಕ್ಷ ಎನ್.ವಿ. ಈರೇಶ್ ಅಧ್ಯಕ್ಷತೆ ವಹಿಸಿದ್ದರು.</p>.<p>ಅತ್ಯುತ್ತಮ ಶಾಸಕ ಪ್ರಶಸ್ತಿ ಪುರಸ್ಕೃತರಾದ ಯಡಿಯೂರಪ್ಪ ಅವರನ್ನು ಸನ್ಮಾನಿಸಲಾಯಿತು. ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಘಟಕ ಸದಸ್ಯ ಬಿ.ಡಿ. ಭೂಕಾಂತ್, ಕೊಟ್ರೇಶಪ್ಪ, ಕುಮಾರಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>