<p><strong>ಸಾಗರ: ‘ಕೈಮಗ್ಗ ನೇಕಾರಿಕೆ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಚರಕ ಸಂಸ್ಥೆಯು 2024-25ನೇ ಸಾಲಿನಲ್ಲಿ ₹ 8.15 ಕೋಟಿ ವಹಿವಾಟು ನಡೆಸಿದೆ’ ಎಂದು ಚರಕ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ಕಾರ್ಯದರ್ಶಿ ರಮೇಶ್ ಎನ್. ತಿಳಿಸಿದ್ದಾರೆ. </strong></p>.<p><strong>ಸಮೀಪದ ಹೊನ್ನೇಸರ ಗ್ರಾಮದ ಶ್ರಮಜೀವಿ ಆಶ್ರಮದಲ್ಲಿ ಬುಧವಾರ ಚರಕ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿ, ‘ಕಳೆದ ಸಾಲಿಗಿಂತ ₹40 ಲಕ್ಷದಷ್ಟು ಹೆಚ್ಚಿನ ವಹಿವಾಟು ನಡೆಸಲಾಗಿದೆ’ ಎಂದರು. </strong></p>.<p><strong>‘ಲಾಭ ಗಳಿಕೆಗಿಂತ ಕೈಮಗ್ಗ ನೇಕಾರರ ಶ್ರೇಯೋಭಿವೃದ್ಧಿಗೆ ನಮ್ಮ ಸಂಸ್ಥೆ ಹೆಚ್ಚಿನ ಒತ್ತು ನೀಡುತ್ತಿದೆ. ನೇಕಾರರಿಗೆ ಸಂಬಳದ ಜೊತೆಗೆ ಬೋನಸ್, ಪಿಎಫ್, ಇಎಸ್ಐ ಮೊದಲಾದ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ’ ಎಂದು ತಿಳಿಸಿದರು. </strong></p>.<p><strong>ಸಂಸ್ಥೆಯ ಆಡಳಿತ ನಿರ್ವಹಣಾಧಿಕಾರಿ ಟೆರೆನ್ಸ್ ಪೀಟರ್, ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಜಿ.ಕೃಷ್ಣ, ಪ್ರಮುಖರಾದ ಮಹಾಲಕ್ಷ್ಮಿ, ಪದ್ಮಶ್ರೀ, ಗಿರಿಜಾ, ಎಂ.ನಾಗರತ್ನ, ಕೆ.ಎಸ್.ಲಕ್ಷ್ಮಿನಾರಾಯಣ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: ‘ಕೈಮಗ್ಗ ನೇಕಾರಿಕೆ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಚರಕ ಸಂಸ್ಥೆಯು 2024-25ನೇ ಸಾಲಿನಲ್ಲಿ ₹ 8.15 ಕೋಟಿ ವಹಿವಾಟು ನಡೆಸಿದೆ’ ಎಂದು ಚರಕ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ಕಾರ್ಯದರ್ಶಿ ರಮೇಶ್ ಎನ್. ತಿಳಿಸಿದ್ದಾರೆ. </strong></p>.<p><strong>ಸಮೀಪದ ಹೊನ್ನೇಸರ ಗ್ರಾಮದ ಶ್ರಮಜೀವಿ ಆಶ್ರಮದಲ್ಲಿ ಬುಧವಾರ ಚರಕ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿ, ‘ಕಳೆದ ಸಾಲಿಗಿಂತ ₹40 ಲಕ್ಷದಷ್ಟು ಹೆಚ್ಚಿನ ವಹಿವಾಟು ನಡೆಸಲಾಗಿದೆ’ ಎಂದರು. </strong></p>.<p><strong>‘ಲಾಭ ಗಳಿಕೆಗಿಂತ ಕೈಮಗ್ಗ ನೇಕಾರರ ಶ್ರೇಯೋಭಿವೃದ್ಧಿಗೆ ನಮ್ಮ ಸಂಸ್ಥೆ ಹೆಚ್ಚಿನ ಒತ್ತು ನೀಡುತ್ತಿದೆ. ನೇಕಾರರಿಗೆ ಸಂಬಳದ ಜೊತೆಗೆ ಬೋನಸ್, ಪಿಎಫ್, ಇಎಸ್ಐ ಮೊದಲಾದ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ’ ಎಂದು ತಿಳಿಸಿದರು. </strong></p>.<p><strong>ಸಂಸ್ಥೆಯ ಆಡಳಿತ ನಿರ್ವಹಣಾಧಿಕಾರಿ ಟೆರೆನ್ಸ್ ಪೀಟರ್, ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಜಿ.ಕೃಷ್ಣ, ಪ್ರಮುಖರಾದ ಮಹಾಲಕ್ಷ್ಮಿ, ಪದ್ಮಶ್ರೀ, ಗಿರಿಜಾ, ಎಂ.ನಾಗರತ್ನ, ಕೆ.ಎಸ್.ಲಕ್ಷ್ಮಿನಾರಾಯಣ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>