<p><strong>ಸಾಗರ: ತಾಲ್ಲೂಕಿನ ಹೆಗ್ಗೋಡಿನ ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘಕ್ಕೆ ಕೇಂದ್ರ ಸರ್ಕಾರದ ಜವಳಿ ಇಲಾಖೆ ನೀಡುವ ‘ಅತ್ಯುತ್ತಮ ರಾಷ್ಟ್ರೀಯ ಬ್ರ್ಯಾಂಡ್ ನಿರ್ಮಾಣ’ ಪುರಸ್ಕಾರ ಲಭ್ಯವಾಗಿದೆ. </strong></p>.<p><strong>ನವದೆಹಲಿಯಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಜವಳಿ ಖಾತೆ ಸಚಿವ ಗಿರಿರಾಜ್ ಸಿಂಗ್ ಅವರು ಚರಕ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಟೆರೆನ್ಸ್ ಪೀಟರ್ ಅವರಿಗೆ ಈ ಪುರಸ್ಕಾರ ಪ್ರದಾನ ಮಾಡಿದ್ದಾರೆ. </strong></p>.<p><strong>ಕೈಮಗ್ಗ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದ ಬ್ರ್ಯಾಂಡ್ ನಿರ್ಮಾಣ, ಮಾರುಕಟ್ಟೆ ವಿಸ್ತರಣೆ, ನೇಕಾರರ ಸಬಲೀಕರಣದಲ್ಲಿ ಉತ್ತಮ ಸಾಧನೆ ಮಾಡಿದ ಸಂಸ್ಥೆಗಳಿಗೆ ಈ ಪುರಸ್ಕಾರ ನೀಡಲಾಗುತ್ತದೆ. ಚರಕ ಸಂಸ್ಥೆಯು ಮಹಿಳಾ ನೇಕಾರರನ್ನು ಸಂಘಟಿಸಿ ಕೈಮಗ್ಗದ ಉತ್ಪನ್ನಗಳಿಗೆ ದೇಶ ವಿದೇಶಗಳಲ್ಲಿ ಗುರುತು ತಂದುಕೊಟ್ಟಿರುವುದು, ನೈಸರ್ಗಿಕ ಬಣ್ಣ ಬಳಕೆ, ಸುಸ್ಥಿರ ಉತ್ಪಾದನೆ, ಮಾರುಕಟ್ಟೆ ವಿಸ್ತರಣೆಯಲ್ಲಿ ಮಾಡಿದ ಸಾಧನೆಗಳ ಹಿನ್ನೆಲೆಯಲ್ಲಿ ಈ ಗೌರವ ದೊರೆತಿದೆ. </strong></p>.<p><strong>‘ಕೇಂದ್ರ ಸರ್ಕಾರ ಚರಕ ಸಂಸ್ಥೆಯನ್ನು ಗುರುತಿಸಿ ಗೌರವ ಪುರಸ್ಕಾರ ನೀಡಿರುವುದು ಮಲೆನಾಡಿನ ಗ್ರಾಮೀಣ ಮಹಿಳಾ ಉದ್ಯಮಕ್ಕೆ ಹೆಮ್ಮೆ ತರುವ ಸಂಗತಿಯಾಗಿದೆ’ ಎಂದು ಚರಕ ಸಂಸ್ಥೆಯ ಟೆರೆನ್ಸ್ ಪೀಟರ್ ಪ್ರತಿಕ್ರಿಯಿಸಿದ್ದಾರೆ. </strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: ತಾಲ್ಲೂಕಿನ ಹೆಗ್ಗೋಡಿನ ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘಕ್ಕೆ ಕೇಂದ್ರ ಸರ್ಕಾರದ ಜವಳಿ ಇಲಾಖೆ ನೀಡುವ ‘ಅತ್ಯುತ್ತಮ ರಾಷ್ಟ್ರೀಯ ಬ್ರ್ಯಾಂಡ್ ನಿರ್ಮಾಣ’ ಪುರಸ್ಕಾರ ಲಭ್ಯವಾಗಿದೆ. </strong></p>.<p><strong>ನವದೆಹಲಿಯಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಜವಳಿ ಖಾತೆ ಸಚಿವ ಗಿರಿರಾಜ್ ಸಿಂಗ್ ಅವರು ಚರಕ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಟೆರೆನ್ಸ್ ಪೀಟರ್ ಅವರಿಗೆ ಈ ಪುರಸ್ಕಾರ ಪ್ರದಾನ ಮಾಡಿದ್ದಾರೆ. </strong></p>.<p><strong>ಕೈಮಗ್ಗ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದ ಬ್ರ್ಯಾಂಡ್ ನಿರ್ಮಾಣ, ಮಾರುಕಟ್ಟೆ ವಿಸ್ತರಣೆ, ನೇಕಾರರ ಸಬಲೀಕರಣದಲ್ಲಿ ಉತ್ತಮ ಸಾಧನೆ ಮಾಡಿದ ಸಂಸ್ಥೆಗಳಿಗೆ ಈ ಪುರಸ್ಕಾರ ನೀಡಲಾಗುತ್ತದೆ. ಚರಕ ಸಂಸ್ಥೆಯು ಮಹಿಳಾ ನೇಕಾರರನ್ನು ಸಂಘಟಿಸಿ ಕೈಮಗ್ಗದ ಉತ್ಪನ್ನಗಳಿಗೆ ದೇಶ ವಿದೇಶಗಳಲ್ಲಿ ಗುರುತು ತಂದುಕೊಟ್ಟಿರುವುದು, ನೈಸರ್ಗಿಕ ಬಣ್ಣ ಬಳಕೆ, ಸುಸ್ಥಿರ ಉತ್ಪಾದನೆ, ಮಾರುಕಟ್ಟೆ ವಿಸ್ತರಣೆಯಲ್ಲಿ ಮಾಡಿದ ಸಾಧನೆಗಳ ಹಿನ್ನೆಲೆಯಲ್ಲಿ ಈ ಗೌರವ ದೊರೆತಿದೆ. </strong></p>.<p><strong>‘ಕೇಂದ್ರ ಸರ್ಕಾರ ಚರಕ ಸಂಸ್ಥೆಯನ್ನು ಗುರುತಿಸಿ ಗೌರವ ಪುರಸ್ಕಾರ ನೀಡಿರುವುದು ಮಲೆನಾಡಿನ ಗ್ರಾಮೀಣ ಮಹಿಳಾ ಉದ್ಯಮಕ್ಕೆ ಹೆಮ್ಮೆ ತರುವ ಸಂಗತಿಯಾಗಿದೆ’ ಎಂದು ಚರಕ ಸಂಸ್ಥೆಯ ಟೆರೆನ್ಸ್ ಪೀಟರ್ ಪ್ರತಿಕ್ರಿಯಿಸಿದ್ದಾರೆ. </strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>