ಜಿಲ್ಲೆಯಲ್ಲಿ ಮಾರ್ಚ್ 31ರಂದು ಸಂಪೂರ್ಣ ಬಂದ್ ಇದೆ. ಯಾರೂ ಮನೆಯಿಂದ ಹೊರಗೆ ಬರಬಾರದು ಎಂದು ಧ್ವನಿ ಸಂದೇಶ ಮುದ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಇದು ಸತ್ಯವಿಲ್ಲದ ಸಂದೇಶ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಸ್ಪಷ್ಟಪಡಿಸಿದ್ದಾರೆ. ಇಂತಹ ಸುಳ್ಳು ವದಂತಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.