ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿವೃಷ್ಟಿ ಕಡಿಮೆಯಾಗಿ ಸಮೃದ್ಧ ಬೆಳೆ ದೊರಕಲಿ: ಬಿ.ಎಸ್.ಯಡಿಯೂರಪ್ಪ

Last Updated 18 ಅಕ್ಟೋಬರ್ 2020, 10:20 IST
ಅಕ್ಷರ ಗಾತ್ರ

ಶಿವಮೊಗ್ಗ: ಉತ್ತರ ಕರ್ನಾಟಕದಲ್ಲಿ ದೇವರ ದಯೆಯಿಂದ ಅತಿವೃಷ್ಟಿ ಕಡಿಮೆಯಾಗಿ ಸಮೃದ್ಧ ಬೆಳೆ ದೊರಕಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಾರ್ಥಿಸಿದರು.

ಶಿಕಾರಿಪುರದಲ್ಲಿ ಭಾನುವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಕರ್ನಾಟಕಕ್ಕೆ ಹೆಚ್ಚಿನ ನೆರವು ನೀಡುವ ಭರವಸೆ ನೀಡಿದ್ದಾರೆ. ಅಲ್ಲಿನ ಜನರ ಜತೆ ರಾಜ್ಯ ಸರ್ಕಾರ ಇರುತ್ತದೆ ಎಂದರು.

ಶಿರಾ ಹಾಗೂ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಶಿರಾದಲ್ಲಿ ಮೊದಲು ಗೆಲುವಿನ ನಂಬಿಕೆ ಇರಲಿಲ್ಲ. ಪುತ್ರ ವಿಜಯೇಂದ್ರ ಅಲ್ಲೇ ಠಿಕಾಣಿ ಹೂಡಿದ್ದಾರೆ. ಅವರ ಮುಂದಾಳತ್ವದಲ್ಲಿ ಚುನಾವಣೆ ನಡೆಯುತ್ತಿದೆ. ಭಾರಿ ಮತಗಳ ಅಂತರದಿಂದ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT