ತೀರ್ಥಹಳ್ಳಿ: ಗಂಟಲಿನಲ್ಲಿ ಅಡಿಕೆ ಸಿಲುಕಿ ಮಗು ಸಾವು
ತೀರ್ಥಹಳ್ಳಿ: ತಾಲ್ಲೂಕಿನ ಹೆದ್ದೂರಿನಲ್ಲಿ ಶನಿವಾರ ಗಂಟಲಿನಲ್ಲಿ ಅಡಿಕೆ ಸಿಲುಕಿದ ಪರಿಣಾಮ ಒಂದೂವರೆ ವರ್ಷದ ಮಗು ಮೃತಪಟ್ಟಿದೆ.
ಸಂದೇಶ–ಅರ್ಚನಾ ದಂಪತಿಯ ಮಗು ಶ್ರಿಯಾಂಶ (18 ತಿಂಗಳು) ಮೃತಪಟ್ಟಿರುವ ಮಗು. ಮನೆಯ ಮುಂಭಾಗ ಅಂಗಳದಲ್ಲಿ ಒಣಗಿಸಿಟ್ಟ ಅಡಿಕೆಯನ್ನು ಮಗು ಬಾಯಿಗೆ ಹಾಕಿಕೊಂಡಿತ್ತು. ಅದು ಗಂಟಲಿನಲ್ಲಿ ಸಿಲುಕಿ ಉಸಿರುಗಟ್ಟಿ ಮಗು ತೀವ್ರವಾಗಿ ಅಸ್ವಸ್ಥಗೊಂಡಿತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.