<p><strong>ಶಿವಮೊಗ್ಗ</strong>: ಪೋಷಕರು ಬಾಲ್ಯದಲ್ಲಿಯೇ ಮಕ್ಕಳಿಗೆ ಸಂಸ್ಕಾರ ಮತ್ತು ಸಂಸ್ಕೃತಿ ಕಲಿಸುವುದು ಅವಶ್ಯ ಎಂದು ವಕೀಲರಾದ ಉಜ್ವಲ ಹೇಳಿದರು.</p>.<p>ಸೋಗಾನೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿಹಮ್ಮಿಕೊಂಡಿದ್ದ ‘ಆಜಾದಿ ಕಾ ಅಮೃತ್ ಮಹೋತ್ಸವ್’ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಂಸ್ಕಾರ ಮತ್ತು ಸಂಸ್ಕೃತಿಯಿಂದ ಮನುಷ್ಯನಲ್ಲಿ ಸನ್ನಡತೆ ಮೂಡುವುದು. ಈ ಸನ್ನಡತೆಯೇ ವ್ಯಕ್ತಿಯ ವ್ಯಕ್ತಿತ್ವದ ಮಾನದಂಡ, ಧರ್ಮ, ಸಂಸ್ಕಾರ, ವ್ಯಕ್ತಿತ್ವಗಳನ್ನು ಇನ್ನಷ್ಟು ಉನ್ನತೀಕರಣಗೊಳಿಸುತ್ತದೆ ಎಂದು ಹೇಳಿದರು.</p>.<p>ಈಚೆಗೆ ಕಾನೂನುಗಳು ಸಾಕಷ್ಟು ಕಠಿಣವಾದರೂ ಬಾಲ್ಯವಿವಾಹಗಳು ಸದ್ದಿಲ್ಲದೇ ನಡೆಯುತ್ತಿವೆ. ಇದನ್ನು ತಡೆಗಟ್ಟಲು ಪ್ರತಿಯೊಬ್ಬರೂ ಶ್ರಮಿಸಬೇಕು. ಮಕ್ಕಳಿಗೆ ಮುಂದೆ ಆಗಬಹುದಾದ ತೊಂದರೆಗಳ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಸಲಹೆ ನೀಡಿದರು.</p>.<p>‘ಮನೆಯ ಅಕ್ಕಪಕ್ಕದಲ್ಲಿ ದುರಂತಗಳು ಸಂಭವಿಸುವ ಮುನ್ನವೇ ಎಲ್ಲರೂ ಜಾಗರೂಕರಾಗುವುದು ಅತ್ಯಗತ್ಯ. ಪಕ್ಕದ ಮನೆಯಲ್ಲಿಯೇ ದುರ್ಘಟನೆ ನಡೆದರೂ ನಮಗೇಕೆ ಎಂಬ ಮನೋಭಾವ ಇದೆ. ಇಂತಹ ಮನಃಸ್ಥಿತಿಯಿಂದ ಎಲ್ಲರೂ ಹೊರಬಂದು ಅಪರಾಧ ನಡೆದಾಗ ಸಂಬಂಧಪಟ್ಟವರಿಗೆ ಮಾಹಿತಿ ನೀಡಬೇಕು’ ಎಂದು ತಿಳಿಸಿದರು.</p>.<p>ವಕೀಲ ಪ್ರದೀಪ್ ಕುಮಾರ್ ಮಾತನಾಡಿ, ‘ಕಾನೂನಿನ ಅರಿವು ಇಲ್ಲದಿರುವುದು ಅಪರಾಧ. ಕಾನೂನಿನ ಅರಿವು ಇಲ್ಲದೇ ಹೋದರೆ ಸಮಾಜದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಕಾನೂನಿನ ಅರಿವು ಹೊಂದುವುದು ಅತ್ಯಗತ್ಯ’ ಎಂದು ಹೇಳಿದರು.</p>.<p>ಸೋಗಾನೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಅನಿಲ್ ಕುಮಾರ್ ಮಾತನಾಡಿ, ‘ಗ್ರಾಮೀಣ ಮಟ್ಟದಲ್ಲಿ ಅನೇಕರಿಗೆ ಕಾನೂನಿನ ಅರಿವಿನ ಕೊರತೆ ಇರುವ ಕಾರಣದಿಂದ ನಾನಾ ರೀತಿಯ ಸಮಸ್ಯೆ ಎದುರಿಸುವಂತಾಗಿದೆ. ಅವಶ್ಯವಿದ್ದಾಗ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಸಲಹೆ ಪಡೆದುಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಸಮಾಜ ಕಲ್ಯಾಣ ಇಲಾಖೆಯ ನಿಲಯ ಮೇಲ್ವಿಚಾರಕಿ ಮೀನಾ, ‘ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟರ ಸರ್ವತೋಮುಖ ಬೆಳವಣಿಗೆಗಾಗಿ ಶ್ರಮಿಸುತ್ತಿದೆ. ಇಲಾಖೆಯ ಪ್ರಯೋಜನ ಪಡೆದುಕೊಳ್ಳುವ ಮೂಲಕ ಪರಿಶಿಷ್ಟರು ಸ್ವಾವಲಂಬಿಗಳಾಗಬೇಕು’ ಎಂದು ಸಲಹೆ ನೀಡಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯರಾದ ಶೋಭಾ ಮೂರ್ತಿ, ರಾಜಶೇಖರಪ್ಪ, ಸಮಿತ್ರ, ಪಿಡಿಒ ದಿವಾಕರ್, ಪ್ರಮುಖರಾದ ಮುರುಗೇಶ್, ರವಿ, ಸುನಿತಾ, ಹಾಲೇಶ್, ನವೀನ್, ಕೀರ್ತಿ, ಪರಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಪೋಷಕರು ಬಾಲ್ಯದಲ್ಲಿಯೇ ಮಕ್ಕಳಿಗೆ ಸಂಸ್ಕಾರ ಮತ್ತು ಸಂಸ್ಕೃತಿ ಕಲಿಸುವುದು ಅವಶ್ಯ ಎಂದು ವಕೀಲರಾದ ಉಜ್ವಲ ಹೇಳಿದರು.</p>.<p>ಸೋಗಾನೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿಹಮ್ಮಿಕೊಂಡಿದ್ದ ‘ಆಜಾದಿ ಕಾ ಅಮೃತ್ ಮಹೋತ್ಸವ್’ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಂಸ್ಕಾರ ಮತ್ತು ಸಂಸ್ಕೃತಿಯಿಂದ ಮನುಷ್ಯನಲ್ಲಿ ಸನ್ನಡತೆ ಮೂಡುವುದು. ಈ ಸನ್ನಡತೆಯೇ ವ್ಯಕ್ತಿಯ ವ್ಯಕ್ತಿತ್ವದ ಮಾನದಂಡ, ಧರ್ಮ, ಸಂಸ್ಕಾರ, ವ್ಯಕ್ತಿತ್ವಗಳನ್ನು ಇನ್ನಷ್ಟು ಉನ್ನತೀಕರಣಗೊಳಿಸುತ್ತದೆ ಎಂದು ಹೇಳಿದರು.</p>.<p>ಈಚೆಗೆ ಕಾನೂನುಗಳು ಸಾಕಷ್ಟು ಕಠಿಣವಾದರೂ ಬಾಲ್ಯವಿವಾಹಗಳು ಸದ್ದಿಲ್ಲದೇ ನಡೆಯುತ್ತಿವೆ. ಇದನ್ನು ತಡೆಗಟ್ಟಲು ಪ್ರತಿಯೊಬ್ಬರೂ ಶ್ರಮಿಸಬೇಕು. ಮಕ್ಕಳಿಗೆ ಮುಂದೆ ಆಗಬಹುದಾದ ತೊಂದರೆಗಳ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಸಲಹೆ ನೀಡಿದರು.</p>.<p>‘ಮನೆಯ ಅಕ್ಕಪಕ್ಕದಲ್ಲಿ ದುರಂತಗಳು ಸಂಭವಿಸುವ ಮುನ್ನವೇ ಎಲ್ಲರೂ ಜಾಗರೂಕರಾಗುವುದು ಅತ್ಯಗತ್ಯ. ಪಕ್ಕದ ಮನೆಯಲ್ಲಿಯೇ ದುರ್ಘಟನೆ ನಡೆದರೂ ನಮಗೇಕೆ ಎಂಬ ಮನೋಭಾವ ಇದೆ. ಇಂತಹ ಮನಃಸ್ಥಿತಿಯಿಂದ ಎಲ್ಲರೂ ಹೊರಬಂದು ಅಪರಾಧ ನಡೆದಾಗ ಸಂಬಂಧಪಟ್ಟವರಿಗೆ ಮಾಹಿತಿ ನೀಡಬೇಕು’ ಎಂದು ತಿಳಿಸಿದರು.</p>.<p>ವಕೀಲ ಪ್ರದೀಪ್ ಕುಮಾರ್ ಮಾತನಾಡಿ, ‘ಕಾನೂನಿನ ಅರಿವು ಇಲ್ಲದಿರುವುದು ಅಪರಾಧ. ಕಾನೂನಿನ ಅರಿವು ಇಲ್ಲದೇ ಹೋದರೆ ಸಮಾಜದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಕಾನೂನಿನ ಅರಿವು ಹೊಂದುವುದು ಅತ್ಯಗತ್ಯ’ ಎಂದು ಹೇಳಿದರು.</p>.<p>ಸೋಗಾನೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಅನಿಲ್ ಕುಮಾರ್ ಮಾತನಾಡಿ, ‘ಗ್ರಾಮೀಣ ಮಟ್ಟದಲ್ಲಿ ಅನೇಕರಿಗೆ ಕಾನೂನಿನ ಅರಿವಿನ ಕೊರತೆ ಇರುವ ಕಾರಣದಿಂದ ನಾನಾ ರೀತಿಯ ಸಮಸ್ಯೆ ಎದುರಿಸುವಂತಾಗಿದೆ. ಅವಶ್ಯವಿದ್ದಾಗ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಸಲಹೆ ಪಡೆದುಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಸಮಾಜ ಕಲ್ಯಾಣ ಇಲಾಖೆಯ ನಿಲಯ ಮೇಲ್ವಿಚಾರಕಿ ಮೀನಾ, ‘ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟರ ಸರ್ವತೋಮುಖ ಬೆಳವಣಿಗೆಗಾಗಿ ಶ್ರಮಿಸುತ್ತಿದೆ. ಇಲಾಖೆಯ ಪ್ರಯೋಜನ ಪಡೆದುಕೊಳ್ಳುವ ಮೂಲಕ ಪರಿಶಿಷ್ಟರು ಸ್ವಾವಲಂಬಿಗಳಾಗಬೇಕು’ ಎಂದು ಸಲಹೆ ನೀಡಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯರಾದ ಶೋಭಾ ಮೂರ್ತಿ, ರಾಜಶೇಖರಪ್ಪ, ಸಮಿತ್ರ, ಪಿಡಿಒ ದಿವಾಕರ್, ಪ್ರಮುಖರಾದ ಮುರುಗೇಶ್, ರವಿ, ಸುನಿತಾ, ಹಾಲೇಶ್, ನವೀನ್, ಕೀರ್ತಿ, ಪರಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>