<p><strong>ಹೊಸನಗರ: </strong>ತಾಲ್ಲೂಕಿನ ಮಾರುತೀಪುರ ಪ್ರೌಢಶಾಲೆಯಲ್ಲಿ ಶಾಲಾ ಮಕ್ಕಳಿಗೆ ವಿತರಿಸಲು ಸಂಗ್ರಹಿಸಿಟ್ಟಿದ್ದ ಸಮವಸ್ತ್ರ ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ.</p>.<p>ಸೋಮವಾರ ಬೆಳಿಗ್ಗೆ ಶಾಲಾ ಕೊಠಡಿ ತೆರೆದಾಗ ಸಮವಸ್ತ್ರದ ರಾಶಿಗೆ ಬೆಂಕಿ ಬಿದ್ದಿದ್ದು ಸುಟ್ಟು ಕರಕಲಾಗಿದ್ದವು. 2020– 21ನೇ ಸಾಲಿನ ಮಕ್ಕಳಿಗೆ ವಿತರಿಸಲು ಶಾಲಾಡಳಿತ ಕೊಠಡಿಯಲ್ಲಿ ಸಂಗ್ರಹಿಸಿಟ್ಟಿತ್ತು. ಶನಿವಾರ ಸಂಜೆಯವರೆಗೂ ಸುಸ್ಥಿತಿಯಲ್ಲಿದ್ದವು. ಕೊಠಡಿಯ ಒಂದು ಕಿಟಕಿಯ ಬಾಗಿಲು ಪೂರ್ಣವಾಗಿ ಮುಚ್ಚಲು ಬರುತ್ತಿರಲಿಲ್ಲ. ಇದನ್ನು ಬಳಸಿ ಕಿಡಿಗೇಡಿಗಳು ಹೊರಗಿನಿಂದ ಬಟ್ಟೆಗೆ ಬೆಂಕಿ ಹಚ್ಚಿದ್ದಾರೆ ಎಂದು ಶಾಲಾಡಳಿತ ಸಂಶಯ ವ್ಯಕ್ತಪಡಿಸಿದೆ.</p>.<p class="Subhead"><strong>ಅನುಮಾನಕ್ಕೆ ಎಡೆ:</strong> ಬಟ್ಟೆಯನ್ನು ಕೊಠಡಿಯ ಮಧ್ಯದಲ್ಲಿ ಟೇಬಲ್ ಮೇಲೆ ಜೋಡಿಸಿಡಲಾಗಿತ್ತು. ಇದರ ಸಮೀಪವೇ ಪುಸ್ತಕ, ಇತರೆ ಪೀಠೋಪಕರಣಗಳು ಸಹ ಇದ್ದವು. ಆದರೆ, ಸಮವಸ್ತ್ರ ಮಾತ್ರ ಸುಡಲಾಗಿದೆ. ಉಳಿದ ವಸ್ತುಗಳಿಗೆ ಹಾನಿಯಾಗಿಲ್ಲ. ಇದು ಚರ್ಚೆಗೆ ಗ್ರಾಸವಾಗಿದೆ.</p>.<p>ಶಾಸಕ ಎಚ್.ಹಾಲಪ್ಪ ಹರತಾಳು, ಕ್ಷೇತ್ರ ಶಿಕ್ಷಣಾಧಿಕಾರಿ ವೀರಭದ್ರಪ್ಪ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p class="Subhead">ಜಾಲತಾಣದಲ್ಲಿ ತೀವ್ರ ಆಕ್ರೋಶ: ಘಟನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ<br />ಆಕ್ರೋಶ, ಖಂಡನೆ ವ್ಯಕ್ತವಾಗಿದೆ. 'ಶಾಲೆಯೊಂದು ದೇಗುಲ ಎಂದು ಪರಿಭಾವಿಸುವಲ್ಲಿ ಬೆಂಕಿ ಇಡುವಂತಹ ಮನಸ್ಥಿತಿ ಇರುವ ಆರೋಪಿಗಳನ್ನು ಹುಡುಕಿ ಅವರಿಗೆ ತಕ್ಕ ಶಿಕ್ಷೆ ನೀಡಬೇಕು' ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ: </strong>ತಾಲ್ಲೂಕಿನ ಮಾರುತೀಪುರ ಪ್ರೌಢಶಾಲೆಯಲ್ಲಿ ಶಾಲಾ ಮಕ್ಕಳಿಗೆ ವಿತರಿಸಲು ಸಂಗ್ರಹಿಸಿಟ್ಟಿದ್ದ ಸಮವಸ್ತ್ರ ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ.</p>.<p>ಸೋಮವಾರ ಬೆಳಿಗ್ಗೆ ಶಾಲಾ ಕೊಠಡಿ ತೆರೆದಾಗ ಸಮವಸ್ತ್ರದ ರಾಶಿಗೆ ಬೆಂಕಿ ಬಿದ್ದಿದ್ದು ಸುಟ್ಟು ಕರಕಲಾಗಿದ್ದವು. 2020– 21ನೇ ಸಾಲಿನ ಮಕ್ಕಳಿಗೆ ವಿತರಿಸಲು ಶಾಲಾಡಳಿತ ಕೊಠಡಿಯಲ್ಲಿ ಸಂಗ್ರಹಿಸಿಟ್ಟಿತ್ತು. ಶನಿವಾರ ಸಂಜೆಯವರೆಗೂ ಸುಸ್ಥಿತಿಯಲ್ಲಿದ್ದವು. ಕೊಠಡಿಯ ಒಂದು ಕಿಟಕಿಯ ಬಾಗಿಲು ಪೂರ್ಣವಾಗಿ ಮುಚ್ಚಲು ಬರುತ್ತಿರಲಿಲ್ಲ. ಇದನ್ನು ಬಳಸಿ ಕಿಡಿಗೇಡಿಗಳು ಹೊರಗಿನಿಂದ ಬಟ್ಟೆಗೆ ಬೆಂಕಿ ಹಚ್ಚಿದ್ದಾರೆ ಎಂದು ಶಾಲಾಡಳಿತ ಸಂಶಯ ವ್ಯಕ್ತಪಡಿಸಿದೆ.</p>.<p class="Subhead"><strong>ಅನುಮಾನಕ್ಕೆ ಎಡೆ:</strong> ಬಟ್ಟೆಯನ್ನು ಕೊಠಡಿಯ ಮಧ್ಯದಲ್ಲಿ ಟೇಬಲ್ ಮೇಲೆ ಜೋಡಿಸಿಡಲಾಗಿತ್ತು. ಇದರ ಸಮೀಪವೇ ಪುಸ್ತಕ, ಇತರೆ ಪೀಠೋಪಕರಣಗಳು ಸಹ ಇದ್ದವು. ಆದರೆ, ಸಮವಸ್ತ್ರ ಮಾತ್ರ ಸುಡಲಾಗಿದೆ. ಉಳಿದ ವಸ್ತುಗಳಿಗೆ ಹಾನಿಯಾಗಿಲ್ಲ. ಇದು ಚರ್ಚೆಗೆ ಗ್ರಾಸವಾಗಿದೆ.</p>.<p>ಶಾಸಕ ಎಚ್.ಹಾಲಪ್ಪ ಹರತಾಳು, ಕ್ಷೇತ್ರ ಶಿಕ್ಷಣಾಧಿಕಾರಿ ವೀರಭದ್ರಪ್ಪ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p class="Subhead">ಜಾಲತಾಣದಲ್ಲಿ ತೀವ್ರ ಆಕ್ರೋಶ: ಘಟನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ<br />ಆಕ್ರೋಶ, ಖಂಡನೆ ವ್ಯಕ್ತವಾಗಿದೆ. 'ಶಾಲೆಯೊಂದು ದೇಗುಲ ಎಂದು ಪರಿಭಾವಿಸುವಲ್ಲಿ ಬೆಂಕಿ ಇಡುವಂತಹ ಮನಸ್ಥಿತಿ ಇರುವ ಆರೋಪಿಗಳನ್ನು ಹುಡುಕಿ ಅವರಿಗೆ ತಕ್ಕ ಶಿಕ್ಷೆ ನೀಡಬೇಕು' ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>