<p><strong>ಶಿವಮೊಗ್ಗ:</strong> ‘ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಕ್ರೈಸ್ತ ಮಿಷನರಿಗಳ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ’ ಎಂದು ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ಅಧ್ಯಕ್ಷ ಡಿ. ರಾಜಶೇಖರ್ ಖಂಡಿಸಿದರು.</p>.<p>‘ಮತಾಂತರ ವಿಷಯವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದಾರೆ. ಮತಾಂತರ ತಡೆಯಲು ಹೋದವರಮೇಲೆ ಜಾತಿನಿಂದನೆ ಮತ್ತು ಅತ್ಯಾಚಾರದ ಪ್ರಕರಣ ದಾಖಲಿಸಲಾಗುತ್ತಿದೆ ಎಂಬ ಸುಳ್ಳು ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಅಂತಹ ಒಂದು ಪ್ರಕರಣವೂ ದಾಖಲಾಗಿಲ್ಲ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಸಮುದಾಯವನ್ನು ಗುರಿಯಾಗಿರಿಸಿಕೊಂಡು ಅವಮಾನಿಸಲಾಗಿದೆ. ಘಟನೆಯನ್ನು ರಾಜ್ಯದ ಎಲ್ಲಾ ಕ್ರೈಸ್ತ ಸಮುದಾಯಗಳು ಒಕ್ಕೊರಲಿನಿಂದ ಖಂಡಿಸುತ್ತವೆ. ಸಭಾಪತಿ, ಗೃಹ ಸಚಿವರು ಸಹ ರಾಜ್ಯದಲ್ಲಿ ಮತಾಂತರ ವಿರೋಧಿ ಕಾನೂನು ಜಾರಿಗೆ ತರುವುದಾಗಿ ಹೇಳಿದ್ದಾರೆ. ಸರ್ಕಾರ ಈ ವಿಷಯ ಕುರಿತು ಸವಿಸ್ತಾರವಾಗಿ ಚರ್ಚಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಕೆಲವು ಸಂಘಟನೆಗಳು ಪ್ರಾರ್ಥಾನಾಲಯಗಳ ಮೇಲೆ ದಾಳಿ ಮಾಡಿವೆ. ಗುರುಗಳನ್ನು ಎಲ್ಲರ ಎದುರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈಬಲ್ ಗ್ರಂಥ ಸುಟ್ಟುಹಾಕಿದ್ದಾರೆ. ಆದರೆ, ಈವರೆಗೂ ಆಸೆ, ಆಮಿಷವೊಡ್ಡಿ ಒತ್ತಾಯದ ಮತಾಂತರ ಮಾಡಿರುವ ಯಾವ ಪ್ರಕರಣಗಳೂ ಸಾಬೀತಾಗಿಲ್ಲ’ ಎಂದರು.</p>.<p>‘ಪ್ರಾರ್ಥನೆಗಳಲ್ಲಿ ಭಾಗವಹಿಸುವ ಭಕ್ತರ ಧಾರ್ಮಿಕ ಸ್ವಾತಂತ್ರ್ಯ ಕಿತ್ತುಕೊಳ್ಳುವ ಕಾಯ್ದೆ ಜಾರಿಗೆ ತಂದು ಕ್ರೈಸ್ತರ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಹುನ್ನಾರ ಸ್ಪಷ್ಟವಾಗಿ ಕಾಣುತ್ತಿದೆ. ನಿರಂತರ ದೌರ್ಜನ್ಯ, ದಬ್ಬಾಳಿಕೆಗಳು ಮುಂದುವರಿದರೆ ಕಾನೂನು ಬದ್ಧ ಹೋರಾಟ ಮಾಡುತ್ತೇವೆ’ ಎಂದು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಜೆ. ಭಾಸ್ಕರ್ ಬಾಬು, ಎಂ.ಎಸ್. ಸ್ಯಾಮ್ಯುಯೆಲ್, ಹರೀಶ್, ಶಿವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಕ್ರೈಸ್ತ ಮಿಷನರಿಗಳ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ’ ಎಂದು ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ಅಧ್ಯಕ್ಷ ಡಿ. ರಾಜಶೇಖರ್ ಖಂಡಿಸಿದರು.</p>.<p>‘ಮತಾಂತರ ವಿಷಯವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದಾರೆ. ಮತಾಂತರ ತಡೆಯಲು ಹೋದವರಮೇಲೆ ಜಾತಿನಿಂದನೆ ಮತ್ತು ಅತ್ಯಾಚಾರದ ಪ್ರಕರಣ ದಾಖಲಿಸಲಾಗುತ್ತಿದೆ ಎಂಬ ಸುಳ್ಳು ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಅಂತಹ ಒಂದು ಪ್ರಕರಣವೂ ದಾಖಲಾಗಿಲ್ಲ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಸಮುದಾಯವನ್ನು ಗುರಿಯಾಗಿರಿಸಿಕೊಂಡು ಅವಮಾನಿಸಲಾಗಿದೆ. ಘಟನೆಯನ್ನು ರಾಜ್ಯದ ಎಲ್ಲಾ ಕ್ರೈಸ್ತ ಸಮುದಾಯಗಳು ಒಕ್ಕೊರಲಿನಿಂದ ಖಂಡಿಸುತ್ತವೆ. ಸಭಾಪತಿ, ಗೃಹ ಸಚಿವರು ಸಹ ರಾಜ್ಯದಲ್ಲಿ ಮತಾಂತರ ವಿರೋಧಿ ಕಾನೂನು ಜಾರಿಗೆ ತರುವುದಾಗಿ ಹೇಳಿದ್ದಾರೆ. ಸರ್ಕಾರ ಈ ವಿಷಯ ಕುರಿತು ಸವಿಸ್ತಾರವಾಗಿ ಚರ್ಚಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಕೆಲವು ಸಂಘಟನೆಗಳು ಪ್ರಾರ್ಥಾನಾಲಯಗಳ ಮೇಲೆ ದಾಳಿ ಮಾಡಿವೆ. ಗುರುಗಳನ್ನು ಎಲ್ಲರ ಎದುರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈಬಲ್ ಗ್ರಂಥ ಸುಟ್ಟುಹಾಕಿದ್ದಾರೆ. ಆದರೆ, ಈವರೆಗೂ ಆಸೆ, ಆಮಿಷವೊಡ್ಡಿ ಒತ್ತಾಯದ ಮತಾಂತರ ಮಾಡಿರುವ ಯಾವ ಪ್ರಕರಣಗಳೂ ಸಾಬೀತಾಗಿಲ್ಲ’ ಎಂದರು.</p>.<p>‘ಪ್ರಾರ್ಥನೆಗಳಲ್ಲಿ ಭಾಗವಹಿಸುವ ಭಕ್ತರ ಧಾರ್ಮಿಕ ಸ್ವಾತಂತ್ರ್ಯ ಕಿತ್ತುಕೊಳ್ಳುವ ಕಾಯ್ದೆ ಜಾರಿಗೆ ತಂದು ಕ್ರೈಸ್ತರ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಹುನ್ನಾರ ಸ್ಪಷ್ಟವಾಗಿ ಕಾಣುತ್ತಿದೆ. ನಿರಂತರ ದೌರ್ಜನ್ಯ, ದಬ್ಬಾಳಿಕೆಗಳು ಮುಂದುವರಿದರೆ ಕಾನೂನು ಬದ್ಧ ಹೋರಾಟ ಮಾಡುತ್ತೇವೆ’ ಎಂದು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಜೆ. ಭಾಸ್ಕರ್ ಬಾಬು, ಎಂ.ಎಸ್. ಸ್ಯಾಮ್ಯುಯೆಲ್, ಹರೀಶ್, ಶಿವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>