<p><strong>ಸಾಗರ: </strong>ತಾಲ್ಲೂಕಿನ ಆನಂದಪುರ ಮಾರಿಕಾಂಬಾ ದೇವಸ್ಥಾನದ ಆವರಣದಲ್ಲಿ ಹೋಬಳಿಯ ನಾಗರಿಕರು ಮಾರ್ಚ್ 15 ರಂದು ಸಂಜೆ 4ಕ್ಕೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ನಾಗರಿಕ ಸನ್ಮಾನ ನೀಡಲಿದ್ದಾರೆ.</p>.<p>ರಾಜಕಾರಣದಲ್ಲಿ ದೀರ್ಘಕಾಲ ಕಾಗೋಡು ತಿಮ್ಮಪ್ಪ ಅವರು ಸಲ್ಲಿಸಿದ ಸೇವೆ, ಒಂದೇ ದಿನ ಕುವೆಂಪು ಹಾಗೂ ಇರುವಕ್ಕಿ ಕೃಷಿ ತೋಟಗಾರಿಕೆ ವಿವಿಯಿಂದ ಡಾಕ್ಟರೇಟ್ ಪದವಿ ಪಡೆದ ಹಿನ್ನಲೆಯಲ್ಲಿ ಅವರಿಗೆ ಈ ಸನ್ಮಾನ ಏರ್ಪಡಿಸಲಾಗಿದೆ ಎಂದು ಸನ್ಮಾನ ಸಮಿತಿ ಕಾರ್ಯಾಧ್ಯಕ್ಷ ಸೋಮಶೇಖರ ಲ್ಯಾವಿಗೆರೆ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಚಿವರಾದ ಮಧು ಬಂಗಾರಪ್ಪ, ಸಂತೋಷ್ ಲಾಡ್, ಶಾಸಕ ಗೋಪಾಲಕೃಷ್ಣ ಬೇಳೂರು, ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ, ಪ್ರಮುಖರಾದ ಬಿ.ಆರ್.ಜಯಂತ್, ಸುಧೀರ್ ಕುಮಾರ್ ಮುರೊಳ್ಳಿ ಮೊದಲಾದವರು ಪಾಲ್ಗೊಳ್ಳುತ್ತಿದ್ದು, ಹಿರಿಯರಾದ ಬಿ.ಟಾಕಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.</p>.<p>ಅಂದು ಸಂಜೆ 6 ಕ್ಕೆ ಗಾಯಕಿ ಸಾಧ್ವಿನಿ ಕೊಪ್ಪ ಮತ್ತು ಸಂಗಡಿಗರಿಂದ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು. ಪ್ರಮುಖರಾದ ಬಿ.ಟಾಕಪ್ಪ, ಚೇತನ್ ರಾಜ್ ಕಣ್ಣೂರು, ಉಮೇಶ್ ಎನ್. ಗಜೇಂದ್ರ, ಕಿರಣ್ ದೊಡ್ಮನೆ, ಈಶ್ವರ, ಅಶ್ವಿನಿಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ತಾಲ್ಲೂಕಿನ ಆನಂದಪುರ ಮಾರಿಕಾಂಬಾ ದೇವಸ್ಥಾನದ ಆವರಣದಲ್ಲಿ ಹೋಬಳಿಯ ನಾಗರಿಕರು ಮಾರ್ಚ್ 15 ರಂದು ಸಂಜೆ 4ಕ್ಕೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ನಾಗರಿಕ ಸನ್ಮಾನ ನೀಡಲಿದ್ದಾರೆ.</p>.<p>ರಾಜಕಾರಣದಲ್ಲಿ ದೀರ್ಘಕಾಲ ಕಾಗೋಡು ತಿಮ್ಮಪ್ಪ ಅವರು ಸಲ್ಲಿಸಿದ ಸೇವೆ, ಒಂದೇ ದಿನ ಕುವೆಂಪು ಹಾಗೂ ಇರುವಕ್ಕಿ ಕೃಷಿ ತೋಟಗಾರಿಕೆ ವಿವಿಯಿಂದ ಡಾಕ್ಟರೇಟ್ ಪದವಿ ಪಡೆದ ಹಿನ್ನಲೆಯಲ್ಲಿ ಅವರಿಗೆ ಈ ಸನ್ಮಾನ ಏರ್ಪಡಿಸಲಾಗಿದೆ ಎಂದು ಸನ್ಮಾನ ಸಮಿತಿ ಕಾರ್ಯಾಧ್ಯಕ್ಷ ಸೋಮಶೇಖರ ಲ್ಯಾವಿಗೆರೆ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಚಿವರಾದ ಮಧು ಬಂಗಾರಪ್ಪ, ಸಂತೋಷ್ ಲಾಡ್, ಶಾಸಕ ಗೋಪಾಲಕೃಷ್ಣ ಬೇಳೂರು, ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ, ಪ್ರಮುಖರಾದ ಬಿ.ಆರ್.ಜಯಂತ್, ಸುಧೀರ್ ಕುಮಾರ್ ಮುರೊಳ್ಳಿ ಮೊದಲಾದವರು ಪಾಲ್ಗೊಳ್ಳುತ್ತಿದ್ದು, ಹಿರಿಯರಾದ ಬಿ.ಟಾಕಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.</p>.<p>ಅಂದು ಸಂಜೆ 6 ಕ್ಕೆ ಗಾಯಕಿ ಸಾಧ್ವಿನಿ ಕೊಪ್ಪ ಮತ್ತು ಸಂಗಡಿಗರಿಂದ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು. ಪ್ರಮುಖರಾದ ಬಿ.ಟಾಕಪ್ಪ, ಚೇತನ್ ರಾಜ್ ಕಣ್ಣೂರು, ಉಮೇಶ್ ಎನ್. ಗಜೇಂದ್ರ, ಕಿರಣ್ ದೊಡ್ಮನೆ, ಈಶ್ವರ, ಅಶ್ವಿನಿಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>