<p><strong>ಹೊಳೆಹೊನ್ನೂರು:</strong> ಸಮೀಪದ ಅರಬಿಳಚಿ ಕ್ಯಾಂಪ್ನಲ್ಲಿ ಶನಿವಾರ ಸಂಜೆ ಗಣಪತಿ ಪ್ರತಿಷ್ಠಾಪನೆ ಸಮಯದಲ್ಲಿ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ.</p>.<p>ಗಲಾಟೆಯನ್ನು ಬಿಡಿಸಲು ಹೋದ ಪೋಲೀಸರ ಮೇಲೆಯೂ ಹಲ್ಲೆ ನಡೆದಿದ್ದು, ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಯುವಕನೊಬ್ಬನಿಗೂ ಏಟು ಬಿದ್ದಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಎಎಸ್ಪಿ ಎ.ಜೆ.ಕಾರಿಯಪ್ಪ, ಹೊಳೆಹೊನ್ನೂರು ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಆರ್.ಎಲ್.ಲಕ್ಷ್ಮೀಪತಿ ಹಾಗೂ ಪೊಲೀಸ್ ಅಧಿಕಾರಿಗಳು ಗಲಭೆಯನ್ನು ಹತೋಟಿಗೆ ತಂದರು.</p>.<p>ಘರ್ಷಣೆ ಸಂಬಂಧ 3 ಕೇಸುಗಳು ದಾಖಲಾಗಿದ್ದು, 22 ಜನರನ್ನು ರಾತ್ರಿಯೇ ಬಂಧಿಸಲಾಗಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯ ಚುರುಕುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಶನಿವಾರವೇ ಗಣಪತಿಗಳ ವಿಸರ್ಜನೆ: ಶನಿವಾರ ರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಹಲವರಿಗೆ ಗಾಯಗಳಾದ ಕಾರಣ ಎಎಸ್ಪಿ ನೇತೃತ್ವದಲ್ಲಿ ಗ್ರಾಮದ ಎಲ್ಲಾ ಗಣಪತಿ ಮೂರ್ತಿಗಳನ್ನು ಶನಿವಾರ ರಾತ್ರಿಯೇ ವಿಸರ್ಜಿಸಲಾಯಿತು.</p>.<p>ಸಿಆರ್ಪಿಎಫ್ ತುಕಡಿ ನಿಯೋಜನೆ: ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಆರ್ಪಿಎಫ್ ತುಕಡಿಯನ್ನು ರಾತ್ರಿಯಿಡೀ ನಿಯೋಜಿಸಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆಹೊನ್ನೂರು:</strong> ಸಮೀಪದ ಅರಬಿಳಚಿ ಕ್ಯಾಂಪ್ನಲ್ಲಿ ಶನಿವಾರ ಸಂಜೆ ಗಣಪತಿ ಪ್ರತಿಷ್ಠಾಪನೆ ಸಮಯದಲ್ಲಿ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ.</p>.<p>ಗಲಾಟೆಯನ್ನು ಬಿಡಿಸಲು ಹೋದ ಪೋಲೀಸರ ಮೇಲೆಯೂ ಹಲ್ಲೆ ನಡೆದಿದ್ದು, ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಯುವಕನೊಬ್ಬನಿಗೂ ಏಟು ಬಿದ್ದಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಎಎಸ್ಪಿ ಎ.ಜೆ.ಕಾರಿಯಪ್ಪ, ಹೊಳೆಹೊನ್ನೂರು ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಆರ್.ಎಲ್.ಲಕ್ಷ್ಮೀಪತಿ ಹಾಗೂ ಪೊಲೀಸ್ ಅಧಿಕಾರಿಗಳು ಗಲಭೆಯನ್ನು ಹತೋಟಿಗೆ ತಂದರು.</p>.<p>ಘರ್ಷಣೆ ಸಂಬಂಧ 3 ಕೇಸುಗಳು ದಾಖಲಾಗಿದ್ದು, 22 ಜನರನ್ನು ರಾತ್ರಿಯೇ ಬಂಧಿಸಲಾಗಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯ ಚುರುಕುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಶನಿವಾರವೇ ಗಣಪತಿಗಳ ವಿಸರ್ಜನೆ: ಶನಿವಾರ ರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಹಲವರಿಗೆ ಗಾಯಗಳಾದ ಕಾರಣ ಎಎಸ್ಪಿ ನೇತೃತ್ವದಲ್ಲಿ ಗ್ರಾಮದ ಎಲ್ಲಾ ಗಣಪತಿ ಮೂರ್ತಿಗಳನ್ನು ಶನಿವಾರ ರಾತ್ರಿಯೇ ವಿಸರ್ಜಿಸಲಾಯಿತು.</p>.<p>ಸಿಆರ್ಪಿಎಫ್ ತುಕಡಿ ನಿಯೋಜನೆ: ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಆರ್ಪಿಎಫ್ ತುಕಡಿಯನ್ನು ರಾತ್ರಿಯಿಡೀ ನಿಯೋಜಿಸಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>