<p><strong>ಭದ್ರಾವತಿ:</strong> ಹಳೇನಗರದ ಪುರಾಣ ಪ್ರಸಿದ್ಧ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಗೋಪುರಗಳ ಮೇಲೆ ಎಲ್ಲೆಂದರಲ್ಲಿ ಯಥೇಚ್ಛವಾಗಿ ಬೆಳೆದು ಬೇರು ಬಿಟ್ಟಿದ್ದ ಅರಳಿ ಗಿಡಗಳನ್ನು ಭಾನುವಾರ ಪುರಾತತ್ವ ಇಲಾಖೆಯ ಸಿಬ್ಬಂದಿ ಕಿತ್ತು ಹಾಕಿದರು.</p>.<p>ಮುಜರಾಯಿ ಇಲಾಖೆಯವರು ಗಿಡಗಳನ್ನು ಕೀಳಿಸದೆ ದೇವಾಲಯದ ಸಂರಕ್ಷಣೆಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಪುರಾತತ್ವ ಇಲಾಖೆಯ ಸಿಬ್ಬಂದಿ ಬಂದು ಗಿಡಗಳನ್ನು ಕಿತ್ತು ಹಾಕಿ ಸ್ವಚ್ಛಗೊಳಿಸಿದರು.</p>.<p>ಕೈಜೋಡಿಸಿದ ಸಾರ್ವಜನಿಕರು: ದೇವಾಲಯದ ಮೇಲೆ ಬೆಳೆದಿದ್ದ ಅರಳಿ ಗಿಡಗಳನ್ನು ಕೀಳುವ ಕಾರ್ಯದಲ್ಲಿ ಇಲಾಖೆಯ ಸಿಬ್ಬಂದಿ ರಾಂಪ್ರಕಾಶ್, ನಾರಾಯಣಪ್ಪ ಅವರೊಂದಿಗೆ ಸಾರ್ವಜನಿಕರು ಕೈಜೋಡಿಸಿದರು.</p>.<p>ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಮಾರುತಿ, ಮಾಜಿ ಸದಸ್ಯ ವಿಶ್ವನಾಥ್, ಸ್ಥಳೀಯರಾದ ನರಸೇಗೌಡ, ಸುಬ್ರಹ್ಮಣ್ಯ , ವೈಶಾಖ್, ನಿಖಿಲ್, ಹರ್ಷ, ಪ್ರವೀಣ್ ಅವರು ಗಿಡಗಳನ್ನು ಕಿತ್ತು ಬೇರಿಗೆ ರಾಸಾಯನಿಕ ಔಷಧಿ ಸಿಂಪಡಿಸುವ ಕಾರ್ಯ ಸಹಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ:</strong> ಹಳೇನಗರದ ಪುರಾಣ ಪ್ರಸಿದ್ಧ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಗೋಪುರಗಳ ಮೇಲೆ ಎಲ್ಲೆಂದರಲ್ಲಿ ಯಥೇಚ್ಛವಾಗಿ ಬೆಳೆದು ಬೇರು ಬಿಟ್ಟಿದ್ದ ಅರಳಿ ಗಿಡಗಳನ್ನು ಭಾನುವಾರ ಪುರಾತತ್ವ ಇಲಾಖೆಯ ಸಿಬ್ಬಂದಿ ಕಿತ್ತು ಹಾಕಿದರು.</p>.<p>ಮುಜರಾಯಿ ಇಲಾಖೆಯವರು ಗಿಡಗಳನ್ನು ಕೀಳಿಸದೆ ದೇವಾಲಯದ ಸಂರಕ್ಷಣೆಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಪುರಾತತ್ವ ಇಲಾಖೆಯ ಸಿಬ್ಬಂದಿ ಬಂದು ಗಿಡಗಳನ್ನು ಕಿತ್ತು ಹಾಕಿ ಸ್ವಚ್ಛಗೊಳಿಸಿದರು.</p>.<p>ಕೈಜೋಡಿಸಿದ ಸಾರ್ವಜನಿಕರು: ದೇವಾಲಯದ ಮೇಲೆ ಬೆಳೆದಿದ್ದ ಅರಳಿ ಗಿಡಗಳನ್ನು ಕೀಳುವ ಕಾರ್ಯದಲ್ಲಿ ಇಲಾಖೆಯ ಸಿಬ್ಬಂದಿ ರಾಂಪ್ರಕಾಶ್, ನಾರಾಯಣಪ್ಪ ಅವರೊಂದಿಗೆ ಸಾರ್ವಜನಿಕರು ಕೈಜೋಡಿಸಿದರು.</p>.<p>ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಮಾರುತಿ, ಮಾಜಿ ಸದಸ್ಯ ವಿಶ್ವನಾಥ್, ಸ್ಥಳೀಯರಾದ ನರಸೇಗೌಡ, ಸುಬ್ರಹ್ಮಣ್ಯ , ವೈಶಾಖ್, ನಿಖಿಲ್, ಹರ್ಷ, ಪ್ರವೀಣ್ ಅವರು ಗಿಡಗಳನ್ನು ಕಿತ್ತು ಬೇರಿಗೆ ರಾಸಾಯನಿಕ ಔಷಧಿ ಸಿಂಪಡಿಸುವ ಕಾರ್ಯ ಸಹಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>