<p><strong>ಶಿವಮೊಗ್ಗ</strong>: ಹೈಕೋರ್ಟ್ ಆದೇಶದಂತೆ ಸಾಗರ ತಾಲ್ಲೂಕಿನ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲದ ಆಡಳಿತ ಮಂಡಳಿಯು ತನ್ನ ಸುಪರ್ದಿಯಲ್ಲಿದ್ದ ಕೆಲವು ಕಟ್ಟಡಗಳನ್ನು ತೆರವು ಮಾಡಿದೆ.</p>.<p>ಲಕ್ಷ್ಮೀನಾರಾಯಣ, ಗೋವರ್ಧನ್ ಹಾಗೂ ಶಿವರಾಜ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ದೇವಾಲಯ ಹೊರತಾದ ಒತ್ತುವರಿ ಜಾಗವನ್ನು ತೆರವು ಮಾಡುವಂತೆ ಆದೇಶ ನೀಡಿತ್ತು.</p>.<p>ನ್ಯಾಯಾಲಯದ ಸೂಚನೆ ಒಪ್ಪಿಕೊಂಡಿದ್ದ ದೇವಸ್ಥಾನ ಆಡಳಿತ ಮಂಡಳಿಯು ತನ್ನ ಸುಪರ್ದಿಯಲ್ಲಿದ್ದ ಒಟ್ಟು 12.16 ಎಕರೆ ಭೂಮಿಯಲ್ಲಿ 6 ಎಕರೆ 16 ಗುಂಟೆ ಭೂಮಿಯನ್ನು ಸ್ವಯಂ ಖುಲ್ಲಾ ಮಾಡಿಕೊಡಲು ಒಪ್ಪಿಕೊಂಡಿತ್ತು. ಈಗ ನ್ಯಾಯಾಲಯದ ಆದೇಶದಂತೆ ಸಿಗಂದೂರು ಚೌಡಮ್ಮ ದೇವಿ ಟ್ರಸ್ಟ್ ಆಡಳಿತ ಮಂಡಳಿಯು ದೇವಸ್ಥಾನದ ಮುಂಭಾಗದಲ್ಲಿದ್ದ 22 ಗೂಡಂಗಡಿ, ಕಾರ್ಮಿಕರ ವಾಸದ ಕಟ್ಟಡ ಎಲ್ಲವನ್ನೂ ತೆರವು ಮಾಡಿದೆ.</p>.<p>ಶನಿವಾರವೂ ತೆರವು ಕಾರ್ಯವನ್ನು ಮುಂದುವರಿಸಿದ್ದ ಆಡಳಿತ ಮಂಡಳಿಯು ಸುಳ್ಳಳ್ಳಿ ನಾಡಕಚೇರಿ ಉಪ ತಹಸೀಲ್ದಾರ್ ಮಾಲಿನಿ ಅವರ ಸಮ್ಮುಖದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ದೇವಾಲಯದ ಸಿಬ್ಬಂದಿಯೇ ಸರಕು, ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಕಟ್ಟಡವನ್ನು ತೆರವು ಮಾಡಿದರು.</p>.<p>ಸಾಗರ ಗ್ರಾಮಾಂತರ ಪೊಲೀಸರಿಂದ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಹೈಕೋರ್ಟ್ ಆದೇಶದಂತೆ ಸಾಗರ ತಾಲ್ಲೂಕಿನ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲದ ಆಡಳಿತ ಮಂಡಳಿಯು ತನ್ನ ಸುಪರ್ದಿಯಲ್ಲಿದ್ದ ಕೆಲವು ಕಟ್ಟಡಗಳನ್ನು ತೆರವು ಮಾಡಿದೆ.</p>.<p>ಲಕ್ಷ್ಮೀನಾರಾಯಣ, ಗೋವರ್ಧನ್ ಹಾಗೂ ಶಿವರಾಜ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ದೇವಾಲಯ ಹೊರತಾದ ಒತ್ತುವರಿ ಜಾಗವನ್ನು ತೆರವು ಮಾಡುವಂತೆ ಆದೇಶ ನೀಡಿತ್ತು.</p>.<p>ನ್ಯಾಯಾಲಯದ ಸೂಚನೆ ಒಪ್ಪಿಕೊಂಡಿದ್ದ ದೇವಸ್ಥಾನ ಆಡಳಿತ ಮಂಡಳಿಯು ತನ್ನ ಸುಪರ್ದಿಯಲ್ಲಿದ್ದ ಒಟ್ಟು 12.16 ಎಕರೆ ಭೂಮಿಯಲ್ಲಿ 6 ಎಕರೆ 16 ಗುಂಟೆ ಭೂಮಿಯನ್ನು ಸ್ವಯಂ ಖುಲ್ಲಾ ಮಾಡಿಕೊಡಲು ಒಪ್ಪಿಕೊಂಡಿತ್ತು. ಈಗ ನ್ಯಾಯಾಲಯದ ಆದೇಶದಂತೆ ಸಿಗಂದೂರು ಚೌಡಮ್ಮ ದೇವಿ ಟ್ರಸ್ಟ್ ಆಡಳಿತ ಮಂಡಳಿಯು ದೇವಸ್ಥಾನದ ಮುಂಭಾಗದಲ್ಲಿದ್ದ 22 ಗೂಡಂಗಡಿ, ಕಾರ್ಮಿಕರ ವಾಸದ ಕಟ್ಟಡ ಎಲ್ಲವನ್ನೂ ತೆರವು ಮಾಡಿದೆ.</p>.<p>ಶನಿವಾರವೂ ತೆರವು ಕಾರ್ಯವನ್ನು ಮುಂದುವರಿಸಿದ್ದ ಆಡಳಿತ ಮಂಡಳಿಯು ಸುಳ್ಳಳ್ಳಿ ನಾಡಕಚೇರಿ ಉಪ ತಹಸೀಲ್ದಾರ್ ಮಾಲಿನಿ ಅವರ ಸಮ್ಮುಖದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ದೇವಾಲಯದ ಸಿಬ್ಬಂದಿಯೇ ಸರಕು, ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಕಟ್ಟಡವನ್ನು ತೆರವು ಮಾಡಿದರು.</p>.<p>ಸಾಗರ ಗ್ರಾಮಾಂತರ ಪೊಲೀಸರಿಂದ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>