<p><strong>ಶಿವಮೊಗ್ಗ:</strong> ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವಾಗ ಹಣೆಗೆ ಸಿಂಧೂರವನ್ನಿಟ್ಟುಕೊಂಡರೋ ಆಗಲೇ ಅವರಿಗಿದ್ದ ಹುಚ್ಚು ಬಿಟ್ಟಿದೆ. ಹಾಗಾಗಿ ಸಿದ್ದರಾಮಯ್ಯ ಬುದ್ಧಿ ಭ್ರಮಣೆಯಿಂದ ಗುಣವಾಗಿದ್ದಾರೆ’ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.</p>.<p>‘ಕಾಂಗ್ರೆಸ್ನಲ್ಲಿ ಮೂರು ರೀತಿಯ ಹುಚ್ಚರಿದ್ದಾರೆ. ಕೆಲವರು ಅರೆ ಹುಚ್ಚರು, ಕೆಲವರು ಪೂರ್ಣ ಹುಚ್ಚರು, ಮತ್ತೆ ಕೆಲವರಿಗೆ ಹುಚ್ಚು ಬಿಟ್ಟಿದೆ. ಹೀಗೆ ಹುಚ್ಚುಬಿಟ್ಟವರ ಪಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇರುವುದು ಸಂತೋಷದ ಸಂಗತಿ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಛೇಡಿಸಿದರು.</p>.<p>‘ಇತ್ತೀಚಿನ ಆಪರೇಷನ್ ಸಿಂಧೂರ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು, ಮನಸ್ಸಿಗೆ ಬಂದಂತೆ ಹುಚ್ಚಾಟದ ರೀತಿ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ದೇಶಪ್ರೇಮವೇ ಮರೆತು ಹೋಗಿದೆ. ಈ ನಾಯಕರಿಗೆ ಬುದ್ಧಿ ಭ್ರಮಣೆಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ನ್ಯಾಯಾಲಯದ ಆದೇಶದಂತೆ ನಗರದ ಹೃದಯಭಾಗದಲ್ಲಿರುವ ಖಾಸಗಿ ಬಸ್ ನಿಲ್ದಾಣದ ಎದುರಿನ ಜಾಗವು ಮಹಾನಗರ ಪಾಲಿಕೆಗೆ ಸೇರಿದೆ. ಈ ಜಾಗದಲ್ಲಿ ನಗರ ಸಾರಿಗೆ ಬಸ್ ನಿಲ್ದಾಣ ನಿರ್ಮಿಸಬೇಕು’ ಎಂದು ಈಶ್ವರಪ್ಪ ಆಗ್ರಹಿಸಿದರು.</p>.<p>ಪ್ರಮುಖರಾದ ಕೆ.ಈ. ಕಾಂತೇಶ್, ಮಹಾಲಿಂಗ ಶಾಸ್ತ್ರಿ, ಈ. ವಿಶ್ವಾಸ್, ಎಂ. ಶಂಕರ್, ಬಾಲು, ರಮೇಶ್, ವಾಗೀಶ್, ಉಮೇಶ್ ಆರಾಧ್ಯ, ಜಾದವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವಾಗ ಹಣೆಗೆ ಸಿಂಧೂರವನ್ನಿಟ್ಟುಕೊಂಡರೋ ಆಗಲೇ ಅವರಿಗಿದ್ದ ಹುಚ್ಚು ಬಿಟ್ಟಿದೆ. ಹಾಗಾಗಿ ಸಿದ್ದರಾಮಯ್ಯ ಬುದ್ಧಿ ಭ್ರಮಣೆಯಿಂದ ಗುಣವಾಗಿದ್ದಾರೆ’ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.</p>.<p>‘ಕಾಂಗ್ರೆಸ್ನಲ್ಲಿ ಮೂರು ರೀತಿಯ ಹುಚ್ಚರಿದ್ದಾರೆ. ಕೆಲವರು ಅರೆ ಹುಚ್ಚರು, ಕೆಲವರು ಪೂರ್ಣ ಹುಚ್ಚರು, ಮತ್ತೆ ಕೆಲವರಿಗೆ ಹುಚ್ಚು ಬಿಟ್ಟಿದೆ. ಹೀಗೆ ಹುಚ್ಚುಬಿಟ್ಟವರ ಪಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇರುವುದು ಸಂತೋಷದ ಸಂಗತಿ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಛೇಡಿಸಿದರು.</p>.<p>‘ಇತ್ತೀಚಿನ ಆಪರೇಷನ್ ಸಿಂಧೂರ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು, ಮನಸ್ಸಿಗೆ ಬಂದಂತೆ ಹುಚ್ಚಾಟದ ರೀತಿ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ದೇಶಪ್ರೇಮವೇ ಮರೆತು ಹೋಗಿದೆ. ಈ ನಾಯಕರಿಗೆ ಬುದ್ಧಿ ಭ್ರಮಣೆಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ನ್ಯಾಯಾಲಯದ ಆದೇಶದಂತೆ ನಗರದ ಹೃದಯಭಾಗದಲ್ಲಿರುವ ಖಾಸಗಿ ಬಸ್ ನಿಲ್ದಾಣದ ಎದುರಿನ ಜಾಗವು ಮಹಾನಗರ ಪಾಲಿಕೆಗೆ ಸೇರಿದೆ. ಈ ಜಾಗದಲ್ಲಿ ನಗರ ಸಾರಿಗೆ ಬಸ್ ನಿಲ್ದಾಣ ನಿರ್ಮಿಸಬೇಕು’ ಎಂದು ಈಶ್ವರಪ್ಪ ಆಗ್ರಹಿಸಿದರು.</p>.<p>ಪ್ರಮುಖರಾದ ಕೆ.ಈ. ಕಾಂತೇಶ್, ಮಹಾಲಿಂಗ ಶಾಸ್ತ್ರಿ, ಈ. ವಿಶ್ವಾಸ್, ಎಂ. ಶಂಕರ್, ಬಾಲು, ರಮೇಶ್, ವಾಗೀಶ್, ಉಮೇಶ್ ಆರಾಧ್ಯ, ಜಾದವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>