ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗರ್ಭಿಣಿ ಶುಶ್ರೂಷಕಿಗೆ ಸಿಎಂ ಅಭಿನಂದನೆ

Last Updated 10 ಮೇ 2020, 19:30 IST
ಅಕ್ಷರ ಗಾತ್ರ

ಶಿವಮೊಗ್ಗ: 9 ತಿಂಗಳ ಗರ್ಭಿಣಿಯಾಗಿದ್ದರೂ ಕರ್ತವ್ಯಕ್ಕೆ ನಿತ್ಯವೂ ಹಾಜರಾಗುತ್ತಿದ್ದತೀರ್ಥಹಳ್ಳಿ ಜಯಚಾಮರಾಜೇಂದ್ರ ಸಾರ್ವಜನಿಕ ಆಸ್ಪತ್ರೆಯ ಶುಶ್ರೂಷಕಿ ರೂಪಾ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೂರವಾಣಿ ಮೂಲಕ ಅಭಿನಂಧನೆ ಸಲ್ಲಿಸಿದ್ದಾರೆ.

ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ರೂಪಾ ಅವರು ರಜೆ ತೆಗೆದುಕೊಳ್ಳದೇ ನಿತ್ಯವೂ 50 ಕಿ.ಮೀ.ದೂರದ ಗಾಜನೂರಿನಿಂದ ಬಸ್‌ನಲ್ಲಿ ಸಂಚರಿಸುತ್ತಾ ಕೊರೊನಾ ವಾರಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ, ‘ನಮ್ಮ ಜಿಲ್ಲೆಯವರಾಗಿ ನಿಮ್ಮ ಸೇವೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ತಕ್ಷಣವೇ ರಜೆ ತೆಗೆದುಕೊಳ್ಳಿ. ಮುಂದೆ ನೋಡೋಣ’ ಎಂದು ಪ್ರೋತ್ಸಾಹದ ಮಾತುಗಳನ್ನು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT