<p><strong>ಶಿವಮೊಗ್ಗ:</strong> ತೀರ್ಥಹಳ್ಳಿ ತಾಲ್ಲೂಕಿನ ಹೊದಲ ಅರಳಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲಿಸರ ತಿರುವಿನ ವಡ್ಡಿನಬೈಲು ಬಳಿ ಧರೆ ಕುಸಿದಿದೆ. ರಸ್ತೆ ಸಂಪರ್ಕ ಕಡಿತವಾಗುವ ಭೀತಿ ಎದುರಾಗಿದೆ.</p>.<p>ಜುಲೈ 23, 24ರಂದು ಸುರಿದ ಭಾರಿ ಮಳೆಗೆ ಧರೆ ಕುಸಿದಿತ್ತು. ಈಗ ಪ್ರತಿದಿನ ಸ್ವಲ್ಪ ಸ್ವಲ್ಪವೇ ಕುಸಿಯುತ್ತಿದ್ದು, ಒಂದೆರಡು ಅಡಿ ಕುಸಿದರೆ ತೀರ್ಥಹಳ್ಳಿ–ಕೋಣಂದೂರು ಸಂಪರ್ಕದ ಮಾರ್ಗದಲ್ಲಿನ ಕೊಪ್ಪಲು, ಹೊದಲ ಅರಳಾಪುರ, ವಡ್ಡಿನಬೈಲು, ತುಪ್ಪದ ಮನೆ ಮತ್ತಿತರ ಗ್ರಾಮಗಳಿಗೆ ಸಂಪರ್ಕ ಕಡಿತಗೊಳ್ಳಲಿದೆ. ಕುಸಿತದ ಅಪಾಯದ ಮಧ್ಯೆಯೂ ಭಾರ ತುಂಬಿದ ವಾಹನಗಳು ಸಂಚರಿಸುತ್ತಿವೆ.</p>.<p class="Subhead">ತುಂತುರು ಮಳೆ: ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ ಕೆಲವೆಡೆ ತುಂತುರು ಮಳೆಯಾಗಿದೆ. ಹೊಸನಗರದಲ್ಲಿ 18.4 ಮಿ.ಮೀ., ಭದ್ರಾವತಿಯಲ್ಲಿ 1.2 ಮಿ.ಮೀ. ಮಳೆಯಾಗಿದ್ದು, ಉಳಿದೆಡೆ ಬಿಡುವು ನೀಡಿತ್ತು.</p>.<p class="Subhead">ಬಿರುಸಿನ ಮಳೆ: ಕೊಡಗು ಜಿಲ್ಲೆಯ ಮಡಿಕೇರಿ, ನಾಪೋಕ್ಲು, ಭಾಗಮಂಡಲ, ತಲಕಾವೇರಿ ಭಾಗದಲ್ಲಿ ಶನಿವಾರ ಬಿರುಸಿನ ಮಳೆಯಾಗಿದೆ. ಶುಕ್ರವಾರ ರಾತ್ರಿಯೂ ಧಾರಾಕಾರ ಮಳೆ ಸುರಿದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ತೀರ್ಥಹಳ್ಳಿ ತಾಲ್ಲೂಕಿನ ಹೊದಲ ಅರಳಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲಿಸರ ತಿರುವಿನ ವಡ್ಡಿನಬೈಲು ಬಳಿ ಧರೆ ಕುಸಿದಿದೆ. ರಸ್ತೆ ಸಂಪರ್ಕ ಕಡಿತವಾಗುವ ಭೀತಿ ಎದುರಾಗಿದೆ.</p>.<p>ಜುಲೈ 23, 24ರಂದು ಸುರಿದ ಭಾರಿ ಮಳೆಗೆ ಧರೆ ಕುಸಿದಿತ್ತು. ಈಗ ಪ್ರತಿದಿನ ಸ್ವಲ್ಪ ಸ್ವಲ್ಪವೇ ಕುಸಿಯುತ್ತಿದ್ದು, ಒಂದೆರಡು ಅಡಿ ಕುಸಿದರೆ ತೀರ್ಥಹಳ್ಳಿ–ಕೋಣಂದೂರು ಸಂಪರ್ಕದ ಮಾರ್ಗದಲ್ಲಿನ ಕೊಪ್ಪಲು, ಹೊದಲ ಅರಳಾಪುರ, ವಡ್ಡಿನಬೈಲು, ತುಪ್ಪದ ಮನೆ ಮತ್ತಿತರ ಗ್ರಾಮಗಳಿಗೆ ಸಂಪರ್ಕ ಕಡಿತಗೊಳ್ಳಲಿದೆ. ಕುಸಿತದ ಅಪಾಯದ ಮಧ್ಯೆಯೂ ಭಾರ ತುಂಬಿದ ವಾಹನಗಳು ಸಂಚರಿಸುತ್ತಿವೆ.</p>.<p class="Subhead">ತುಂತುರು ಮಳೆ: ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ ಕೆಲವೆಡೆ ತುಂತುರು ಮಳೆಯಾಗಿದೆ. ಹೊಸನಗರದಲ್ಲಿ 18.4 ಮಿ.ಮೀ., ಭದ್ರಾವತಿಯಲ್ಲಿ 1.2 ಮಿ.ಮೀ. ಮಳೆಯಾಗಿದ್ದು, ಉಳಿದೆಡೆ ಬಿಡುವು ನೀಡಿತ್ತು.</p>.<p class="Subhead">ಬಿರುಸಿನ ಮಳೆ: ಕೊಡಗು ಜಿಲ್ಲೆಯ ಮಡಿಕೇರಿ, ನಾಪೋಕ್ಲು, ಭಾಗಮಂಡಲ, ತಲಕಾವೇರಿ ಭಾಗದಲ್ಲಿ ಶನಿವಾರ ಬಿರುಸಿನ ಮಳೆಯಾಗಿದೆ. ಶುಕ್ರವಾರ ರಾತ್ರಿಯೂ ಧಾರಾಕಾರ ಮಳೆ ಸುರಿದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>