<p><strong>ಕೋಣಂದೂರು:</strong> ಈ ಭಾಗದ ಬಹುದಿನದ ನಿರೀಕ್ಷೆಯಾಗಿದ್ದ ಸಮುದಾಯ ಆರೋಗ್ಯ ಕೇಂದ್ರ ಉದ್ಘಾಟನೆಗೊಂಡು ಏಳು ತಿಂಗಳು ಕಳೆದರೂ ನಿಗದಿಯಷ್ಟು ವೈದ್ಯರು, ಸಿಬ್ಬಂದಿ ನೇಮಕವಾಗದೆ ಸಮುದಾಯ ಆರೋಗ್ಯ ಕೇಂದ್ರದ ಸೇವೆ ಜನರಿಗೆ ಸಿಗುತ್ತಿಲ್ಲ ಎಂಬುದು ಗ್ರಾಮಸ್ಥರ ಆರೋಪ.</p>.<p>₹9.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸಮುದಾಯ ಆರೋಗ್ಯ ಕೇಂದ್ರವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕಳೆದ ಮೇ 28ರಂದು ಉದ್ಘಾಟಿಸಿದ್ದರು. ಆದಷ್ಟು ಬೇಗ ವೈದ್ಯರು ಮತ್ತು ಸಿಬ್ಬಂದಿ ನೇಮಿಸುವುದಾಗಿ ಭರವಸೆ ಕೊಟ್ಟಿದ್ದರು. ಆದರೆ 7 ತಿಂಗಳು ಕಳೆದರೂ ನೇಮಕಾತಿ ಆಗದಿರುವುದು ಈ ಭಾಗದ ಜನರ ನಿರಾಸೆಗೆ ಕಾರಣವಾಗಿದೆ.</p>.<p>ಆಸ್ಪತ್ರೆಗೆ ನಿತ್ಯ 250ರಿಂದ 300 ಜನರು ಭೇಟಿ ನೀಡುತ್ತಿದ್ದಾರೆ. ಸದ್ಯ ತಲಾ ಒಬ್ಬ ವೈದ್ಯ, ನರ್ಸ್, ಫಾರ್ಮಾಸಿಸ್ಟ್ ಹಾಗೂ ಇಬ್ಬರು ಸಹಾಯಕರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ನೂತನ ಸಮುದಾಯ ಆರೋಗ್ಯ ಕೇಂದ್ರದಲ್ಲಿ 30 ಹಾಸಿಗೆಗಳ ವ್ಯವಸ್ಥೆ ಇದೆ. 6 ವೈದ್ಯರು ಸೇರಿದಂತೆ 33 ಆರೋಗ್ಯ ಸಿಬ್ಬಂದಿ ಕಾರ್ಯ ನಿರ್ವಹಿಸಬೇಕಿದೆ. ವೈದ್ಯರು, ನರ್ಸ್ ಸೇರಿದಂತೆ ಶಸ್ತ್ರಚಿಕಿತ್ಸೆ ಕೊಠಡಿ ನಿರ್ವಹಣೆಗೆ ಸಿಬ್ಬಂದಿ ಬೇಕಿದೆ. ಬಿ.ಪಿ., ಮಧುಮೇಹ ಪರೀಕ್ಷೆಗೆ ಪ್ರತ್ಯೇಕ ಸಿಬ್ಬಂದಿ ನಿಯೋಜನೆಯಾಗಬೇಕಿದೆ. </p>.<p>ಕೂಲಿ ಕಾರ್ಮಿಕರು, ರೈತರು ವಾಸಿಸುತ್ತಿರುವ ಸುತ್ತ ಮುತ್ತಲಿನ ಗ್ರಾಮಗಳಿಂದ ಬರುವ ರೋಗಿಗಳು ತಾಲ್ಲೂಕು ಕೇಂದ್ರ ತೀರ್ಥಹಳ್ಳಿಗೆ ಹೋಗಿ ಬರುವುದು ಕಷ್ಟ. ಹೀಗಾಗಿ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ, ಹೊಸ ಸಮುದಾಯ ಆರೋಗ್ಯ ಕೇಂದ್ರ ಆರಂಭಿಸಲಾಗಿದೆ. ಇಲ್ಲಿರುವ ಯಂತ್ರೋಪಕರಣ, ಆಸ್ಪತ್ರೆಯ ನಿರ್ವಹಣೆ ಈಗಿರುವ ಸಿಬ್ಬಂದಿಯಿಂದ ಸಾಧ್ಯವಾಗುತ್ತಿಲ್ಲ. ರಾತ್ರಿ ವೇಳೆ ನರ್ಸ್ ಹೊರತುಪಡಿಸಿದರೆ ವೈದ್ಯರ ಸೇವೆ ಲಭ್ಯವಿಲ್ಲ. ಹೊಸ ಕಟ್ಟಡವಾಗಿದ್ದರೂ, ರೋಗಿಗಳನ್ನು ದಾಖಲಿಸಿ ದಿನದ 24 ಗಂಟೆಯ ಸೇವೆ, ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯ ಗೆಳೆಯರ ಬಳಗದ ದೇವರಾಜ ಶೆಟ್ಟಿ ಹೇಳಿದ್ದಾರೆ. </p>.<p>ಕೋಣಂದೂರಿನಲ್ಲಿ ಚತುಷ್ಪಥ ರಸ್ತೆ ನಿರ್ಮಾಣವಾದಾಗಿನಿಂದ ವಾಹನಗಳ ಸಂಚಾರ ಹೆಚ್ಚಿದ್ದು, ಅಪಘಾತಗಳೂ ಆಗಾಗ್ಗೆ ಸಂಭವಿಸುತ್ತಿವೆ. ಆದರೆ, ಗಾಯಾಳುಗಳನ್ನು ದಾಖಲಿಸಿಕೊಳ್ಳಲು ಅಕವಾಶ ಇಲ್ಲದಂತಾಗಿದೆ. ಆದ್ದರಿಂದ ತಕ್ಷಣವೇ ವೈದ್ಯರು ಮತ್ತು ಸಿಬ್ಬಂದಿ ನೇಮಿಸಲು ಅಧಿಕಾರಿಗಳು, ಜನಪ್ರತಿನಿಧಿಗಳು ಮುಂದಾಗಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.</p>.<div><blockquote>ನೂತನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆದಷ್ಟು ಶೀಘ್ರವೇ ವೈದ್ಯರು ಮತ್ತು ಸಿಬ್ಬಂದಿ ನೇಮಿಸಲಾಗುವುದು. ಅದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳು ಅಂತಿಮ ಹಂತದಲ್ಲಿವೆ </blockquote><span class="attribution">ಡಾ.ನಟರಾಜ್ ಡಿ.ಎಚ್.ಇ. ಶಿವಮೊಗ್ಗ</span></div>.<div><blockquote>ಅತಿಯಾದ ಚಳಿಯಿಂದ ಜ್ವರ ಕೆಮ್ಮು ಪೀಡಿತರ ಸಂಖ್ಯೆ ಜಾಸ್ತಿಯಾಗುತ್ತಿದೆ. ಈಗಿರುವ ವೈದ್ಯರು ಮತ್ತು ಸಿಬ್ಬಂದಿಯಿಂದ ಬರುವ ಎಲ್ಲಾ ರೋಗಿಗಳನ್ನು ನಿಭಾಯಿಸಲು ಆಗುತ್ತಿಲ್ಲ </blockquote><span class="attribution">ಪೂರ್ಣಿಮಾ ಶ್ರೀಕಾಂತ್ ಸ್ಥಳೀಯ ನಿವಾಸಿ ಕೋಣಂದೂರು</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಣಂದೂರು:</strong> ಈ ಭಾಗದ ಬಹುದಿನದ ನಿರೀಕ್ಷೆಯಾಗಿದ್ದ ಸಮುದಾಯ ಆರೋಗ್ಯ ಕೇಂದ್ರ ಉದ್ಘಾಟನೆಗೊಂಡು ಏಳು ತಿಂಗಳು ಕಳೆದರೂ ನಿಗದಿಯಷ್ಟು ವೈದ್ಯರು, ಸಿಬ್ಬಂದಿ ನೇಮಕವಾಗದೆ ಸಮುದಾಯ ಆರೋಗ್ಯ ಕೇಂದ್ರದ ಸೇವೆ ಜನರಿಗೆ ಸಿಗುತ್ತಿಲ್ಲ ಎಂಬುದು ಗ್ರಾಮಸ್ಥರ ಆರೋಪ.</p>.<p>₹9.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸಮುದಾಯ ಆರೋಗ್ಯ ಕೇಂದ್ರವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕಳೆದ ಮೇ 28ರಂದು ಉದ್ಘಾಟಿಸಿದ್ದರು. ಆದಷ್ಟು ಬೇಗ ವೈದ್ಯರು ಮತ್ತು ಸಿಬ್ಬಂದಿ ನೇಮಿಸುವುದಾಗಿ ಭರವಸೆ ಕೊಟ್ಟಿದ್ದರು. ಆದರೆ 7 ತಿಂಗಳು ಕಳೆದರೂ ನೇಮಕಾತಿ ಆಗದಿರುವುದು ಈ ಭಾಗದ ಜನರ ನಿರಾಸೆಗೆ ಕಾರಣವಾಗಿದೆ.</p>.<p>ಆಸ್ಪತ್ರೆಗೆ ನಿತ್ಯ 250ರಿಂದ 300 ಜನರು ಭೇಟಿ ನೀಡುತ್ತಿದ್ದಾರೆ. ಸದ್ಯ ತಲಾ ಒಬ್ಬ ವೈದ್ಯ, ನರ್ಸ್, ಫಾರ್ಮಾಸಿಸ್ಟ್ ಹಾಗೂ ಇಬ್ಬರು ಸಹಾಯಕರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ನೂತನ ಸಮುದಾಯ ಆರೋಗ್ಯ ಕೇಂದ್ರದಲ್ಲಿ 30 ಹಾಸಿಗೆಗಳ ವ್ಯವಸ್ಥೆ ಇದೆ. 6 ವೈದ್ಯರು ಸೇರಿದಂತೆ 33 ಆರೋಗ್ಯ ಸಿಬ್ಬಂದಿ ಕಾರ್ಯ ನಿರ್ವಹಿಸಬೇಕಿದೆ. ವೈದ್ಯರು, ನರ್ಸ್ ಸೇರಿದಂತೆ ಶಸ್ತ್ರಚಿಕಿತ್ಸೆ ಕೊಠಡಿ ನಿರ್ವಹಣೆಗೆ ಸಿಬ್ಬಂದಿ ಬೇಕಿದೆ. ಬಿ.ಪಿ., ಮಧುಮೇಹ ಪರೀಕ್ಷೆಗೆ ಪ್ರತ್ಯೇಕ ಸಿಬ್ಬಂದಿ ನಿಯೋಜನೆಯಾಗಬೇಕಿದೆ. </p>.<p>ಕೂಲಿ ಕಾರ್ಮಿಕರು, ರೈತರು ವಾಸಿಸುತ್ತಿರುವ ಸುತ್ತ ಮುತ್ತಲಿನ ಗ್ರಾಮಗಳಿಂದ ಬರುವ ರೋಗಿಗಳು ತಾಲ್ಲೂಕು ಕೇಂದ್ರ ತೀರ್ಥಹಳ್ಳಿಗೆ ಹೋಗಿ ಬರುವುದು ಕಷ್ಟ. ಹೀಗಾಗಿ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ, ಹೊಸ ಸಮುದಾಯ ಆರೋಗ್ಯ ಕೇಂದ್ರ ಆರಂಭಿಸಲಾಗಿದೆ. ಇಲ್ಲಿರುವ ಯಂತ್ರೋಪಕರಣ, ಆಸ್ಪತ್ರೆಯ ನಿರ್ವಹಣೆ ಈಗಿರುವ ಸಿಬ್ಬಂದಿಯಿಂದ ಸಾಧ್ಯವಾಗುತ್ತಿಲ್ಲ. ರಾತ್ರಿ ವೇಳೆ ನರ್ಸ್ ಹೊರತುಪಡಿಸಿದರೆ ವೈದ್ಯರ ಸೇವೆ ಲಭ್ಯವಿಲ್ಲ. ಹೊಸ ಕಟ್ಟಡವಾಗಿದ್ದರೂ, ರೋಗಿಗಳನ್ನು ದಾಖಲಿಸಿ ದಿನದ 24 ಗಂಟೆಯ ಸೇವೆ, ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯ ಗೆಳೆಯರ ಬಳಗದ ದೇವರಾಜ ಶೆಟ್ಟಿ ಹೇಳಿದ್ದಾರೆ. </p>.<p>ಕೋಣಂದೂರಿನಲ್ಲಿ ಚತುಷ್ಪಥ ರಸ್ತೆ ನಿರ್ಮಾಣವಾದಾಗಿನಿಂದ ವಾಹನಗಳ ಸಂಚಾರ ಹೆಚ್ಚಿದ್ದು, ಅಪಘಾತಗಳೂ ಆಗಾಗ್ಗೆ ಸಂಭವಿಸುತ್ತಿವೆ. ಆದರೆ, ಗಾಯಾಳುಗಳನ್ನು ದಾಖಲಿಸಿಕೊಳ್ಳಲು ಅಕವಾಶ ಇಲ್ಲದಂತಾಗಿದೆ. ಆದ್ದರಿಂದ ತಕ್ಷಣವೇ ವೈದ್ಯರು ಮತ್ತು ಸಿಬ್ಬಂದಿ ನೇಮಿಸಲು ಅಧಿಕಾರಿಗಳು, ಜನಪ್ರತಿನಿಧಿಗಳು ಮುಂದಾಗಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.</p>.<div><blockquote>ನೂತನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆದಷ್ಟು ಶೀಘ್ರವೇ ವೈದ್ಯರು ಮತ್ತು ಸಿಬ್ಬಂದಿ ನೇಮಿಸಲಾಗುವುದು. ಅದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳು ಅಂತಿಮ ಹಂತದಲ್ಲಿವೆ </blockquote><span class="attribution">ಡಾ.ನಟರಾಜ್ ಡಿ.ಎಚ್.ಇ. ಶಿವಮೊಗ್ಗ</span></div>.<div><blockquote>ಅತಿಯಾದ ಚಳಿಯಿಂದ ಜ್ವರ ಕೆಮ್ಮು ಪೀಡಿತರ ಸಂಖ್ಯೆ ಜಾಸ್ತಿಯಾಗುತ್ತಿದೆ. ಈಗಿರುವ ವೈದ್ಯರು ಮತ್ತು ಸಿಬ್ಬಂದಿಯಿಂದ ಬರುವ ಎಲ್ಲಾ ರೋಗಿಗಳನ್ನು ನಿಭಾಯಿಸಲು ಆಗುತ್ತಿಲ್ಲ </blockquote><span class="attribution">ಪೂರ್ಣಿಮಾ ಶ್ರೀಕಾಂತ್ ಸ್ಥಳೀಯ ನಿವಾಸಿ ಕೋಣಂದೂರು</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>