<p><strong>ಶಿವಮೊಗ್ಗ: </strong>ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ನಾಯಕ ರಾಕೇಶ್ ಟಿಕಾಯತ್ ಮೇಲೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯನ್ನು ಜಿಲ್ಲೆಯ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಐಕ್ಯ ಹೋರಾಟ ಸಮಿತಿ ಮುಖಂಡರು ಖಂಡಿಸಿದ್ದಾರೆ.</p>.<p>‘ಇಂತಹ ಕೃತ್ಯಗಳು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತವೆ. ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ನಾಶವಾಗುತ್ತಿದೆ. ಬಿಜೆಪಿ ಮತ್ತು ಅದರ ಪರಿವಾರದ ಸಂಘಟನೆಗಳು ಜನಪರ ಚಳವಳಿಗಳ ನಾಯಕರನ್ನೇ ಗುರಿ ಮಾಡಿವೆ. ನಿರಂತರ ದಾಳಿ ನಡೆಸುವ, ಅಧಿಕಾರ ದುರುಪಯೋಗಪಡಿಸಿಕೊಂಡು ಸುಳ್ಳು ಕೇಸುಗಳನ್ನು ದಾಖಲಿಸುವ, ಜೈಲಿನಲ್ಲಿಡುವ ಕೆಲಸ ಮಾಡಲಾಗುತ್ತಿವೆ’ ಎಂದು ಮುಖಂಡರಾದ ಕೆ.ಟಿ. ಗಂಗಾಧರ್. ಎಚ್.ಆರ್. ಬಸವರಾಜಪ್ಪ, ಎಂ.ಶ್ರೀಕಾಂತ್, ಕೆ.ಎಲ್.ಅಶೋಕ್, ಕೆ.ಪಿ.ಶ್ರೀಪಾಲ, ಎಂ.ಗುರುಮೂರ್ತಿ, ಎನ್.ರಮೇಶ್, ಎಚ್.ಟಿ.ಹಾಲೇಶಪ್ಪ, ಎಚ್.ಸಿ.ಯೋಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ರಾಕೇಶ್ ಟಿಕಾಯತ್ ಅಂತಹ ಜನನಾಯಕರಿಗೆ ದೇಶದಲ್ಲಿ ಸಿಗುತ್ತಿರುವ ಜನಬೆಂಬಲ ಕಂಡು ಹತಾಶೆಯಿಂದ ಬಿಜೆಪಿ, ಎಬಿವಿಪಿ ಮುಖಂಡರು ಇಂತಹ ಕೃತ್ಯಗಳಲ್ಲಿ ತೊಡಗಿದ್ದಾರೆ. ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಶುಕ್ರವಾರ ರೈತ ಮಹಾ ಪಂಚಾಯತ್ ಮುಗಿಸಿ ಬರುವಾಗ ಎಬಿವಿಪಿ ಅಧ್ಯಕ್ಷ ಕುಲದೀಪ್ ಯಾದವ್ ಮತ್ತು ಆತನ ಸಹಚರರು ಟಿಕಾಯತ್ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದೊಂದು ಹೇಯ ಕೃತ್ಯ. ಹೇಡಿಗಳು ಈ ರೀತಿಯ ಕೆಲಸ ಮಾಡುತ್ತಾರೆ. ನೇರವಾಗಿ ಎದುರಿಸಲಾಗದ ಬಿಜೆಪಿ, ಸಂಘ ಪರಿವಾರ ಈ ರೀತಿಯ ಹೀನ ಕೃತ್ಯ ಎಸಗುತ್ತಿದೆ. ಕುಲದೀಪ್ ಯಾದವ್ನನ್ನು ತಕ್ಷಣ ಬಂಧಿಸಬೇಕು. ಆತ ಪ್ರತಿನಿಧಿಸುವ ಸಂಘಟನೆ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>‘ಕೇಂದ್ರ ಸರ್ಕಾರ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಈ ರೀತಿಯ ದಾಳಿಗಳ ಮೂಲಕ, ಸುಳ್ಳು ಪ್ರಕರಣಗಳನ್ನು ದಾಖಲಿಸುವ, ಜೈಲಿನಲ್ಲಿಡುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಭ್ರಮೆಯಿಂದ ಹೊರಬರಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಇನ್ನಷ್ಟು ತೀವ್ರಗೊಳಿಸುತ್ತೇವೆ’ ಎಂದು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ನಾಯಕ ರಾಕೇಶ್ ಟಿಕಾಯತ್ ಮೇಲೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯನ್ನು ಜಿಲ್ಲೆಯ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಐಕ್ಯ ಹೋರಾಟ ಸಮಿತಿ ಮುಖಂಡರು ಖಂಡಿಸಿದ್ದಾರೆ.</p>.<p>‘ಇಂತಹ ಕೃತ್ಯಗಳು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತವೆ. ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ನಾಶವಾಗುತ್ತಿದೆ. ಬಿಜೆಪಿ ಮತ್ತು ಅದರ ಪರಿವಾರದ ಸಂಘಟನೆಗಳು ಜನಪರ ಚಳವಳಿಗಳ ನಾಯಕರನ್ನೇ ಗುರಿ ಮಾಡಿವೆ. ನಿರಂತರ ದಾಳಿ ನಡೆಸುವ, ಅಧಿಕಾರ ದುರುಪಯೋಗಪಡಿಸಿಕೊಂಡು ಸುಳ್ಳು ಕೇಸುಗಳನ್ನು ದಾಖಲಿಸುವ, ಜೈಲಿನಲ್ಲಿಡುವ ಕೆಲಸ ಮಾಡಲಾಗುತ್ತಿವೆ’ ಎಂದು ಮುಖಂಡರಾದ ಕೆ.ಟಿ. ಗಂಗಾಧರ್. ಎಚ್.ಆರ್. ಬಸವರಾಜಪ್ಪ, ಎಂ.ಶ್ರೀಕಾಂತ್, ಕೆ.ಎಲ್.ಅಶೋಕ್, ಕೆ.ಪಿ.ಶ್ರೀಪಾಲ, ಎಂ.ಗುರುಮೂರ್ತಿ, ಎನ್.ರಮೇಶ್, ಎಚ್.ಟಿ.ಹಾಲೇಶಪ್ಪ, ಎಚ್.ಸಿ.ಯೋಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ರಾಕೇಶ್ ಟಿಕಾಯತ್ ಅಂತಹ ಜನನಾಯಕರಿಗೆ ದೇಶದಲ್ಲಿ ಸಿಗುತ್ತಿರುವ ಜನಬೆಂಬಲ ಕಂಡು ಹತಾಶೆಯಿಂದ ಬಿಜೆಪಿ, ಎಬಿವಿಪಿ ಮುಖಂಡರು ಇಂತಹ ಕೃತ್ಯಗಳಲ್ಲಿ ತೊಡಗಿದ್ದಾರೆ. ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಶುಕ್ರವಾರ ರೈತ ಮಹಾ ಪಂಚಾಯತ್ ಮುಗಿಸಿ ಬರುವಾಗ ಎಬಿವಿಪಿ ಅಧ್ಯಕ್ಷ ಕುಲದೀಪ್ ಯಾದವ್ ಮತ್ತು ಆತನ ಸಹಚರರು ಟಿಕಾಯತ್ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದೊಂದು ಹೇಯ ಕೃತ್ಯ. ಹೇಡಿಗಳು ಈ ರೀತಿಯ ಕೆಲಸ ಮಾಡುತ್ತಾರೆ. ನೇರವಾಗಿ ಎದುರಿಸಲಾಗದ ಬಿಜೆಪಿ, ಸಂಘ ಪರಿವಾರ ಈ ರೀತಿಯ ಹೀನ ಕೃತ್ಯ ಎಸಗುತ್ತಿದೆ. ಕುಲದೀಪ್ ಯಾದವ್ನನ್ನು ತಕ್ಷಣ ಬಂಧಿಸಬೇಕು. ಆತ ಪ್ರತಿನಿಧಿಸುವ ಸಂಘಟನೆ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>‘ಕೇಂದ್ರ ಸರ್ಕಾರ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಈ ರೀತಿಯ ದಾಳಿಗಳ ಮೂಲಕ, ಸುಳ್ಳು ಪ್ರಕರಣಗಳನ್ನು ದಾಖಲಿಸುವ, ಜೈಲಿನಲ್ಲಿಡುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಭ್ರಮೆಯಿಂದ ಹೊರಬರಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಇನ್ನಷ್ಟು ತೀವ್ರಗೊಳಿಸುತ್ತೇವೆ’ ಎಂದು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>