<p><strong>ಶಿವಮೊಗ್ಗ</strong>: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ಮಾಡಿರುವುದನ್ನು ಖಂಡಿಸಿ ಜನಪರ ಹೋರಾಟ ಸಮಿತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.</p>.<p>ಮಂಜುನಾಥ ಗೌಡರ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿರುವ ಕ್ರಮ ರಾಜಕೀಯ ಪ್ರೇರಿತ. ಗೌಡ ಅವರು ಕಾಂಗ್ರೆಸ್ ಮುಖಂಡರಾಗಿದ್ದು, ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ದಾಳಿ ಖಂಡನೀಯ ಎಂದು ಸಮಿತಿಯ ಸದಸ್ಯರು ತಿಳಿಸಿದರು.</p>.<p>‘ಮಂಜುನಾಥ ಗೌಡರು ಆರು ಬಾರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಡಿಸಿಸಿ ಬ್ಯಾಂಕಿನಲ್ಲಿ ಈ ಹಿಂದೆ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅವರನ್ನು ಆರೋಪಿಯನ್ನಾಗಿಸಲಾಗಿತ್ತು. ಸಿಐಡಿ ತನಿಖೆ ಕೂಡ ಮಾಡಲಾಗಿತ್ತು. ಆದರೆ ತನಿಖೆಯಲ್ಲಿ ಅವರ ಪಾತ್ರ ಇಲ್ಲ ಎಂದು ಹೇಳಲಾಗಿದೆ. ಅವರು ಮತ್ತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಇವರ ಏಳಿಗೆ ಸಹಿಸದ ಕೆಲವರು ರಾಜಕೀಯ ಪ್ರೇರಿತವಾಗಿ ಈ ದಾಳಿ ನಡೆಸಲು ಕುಮ್ಮಕ್ಕು ನೀಡಿದ್ದಾರೆ’ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.</p>.<p>ನಾಗರಾಜ್ ಕಂಕಾರಿ, ಎಚ್.ಪಾಲಾಕ್ಷಿ, ಎನ್.ಎಸ್.ಮಹೇಶ್, ಗಾಡಿಕೊಪ್ಪ ರಾಜಣ್ಣ, ಅನಿಲ್ಕುಮಾರ್, ಆನಂದ್, ಉಮೇಶ್, ಭಾಸ್ಕರ್. ಶಾಮು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ಮಾಡಿರುವುದನ್ನು ಖಂಡಿಸಿ ಜನಪರ ಹೋರಾಟ ಸಮಿತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.</p>.<p>ಮಂಜುನಾಥ ಗೌಡರ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿರುವ ಕ್ರಮ ರಾಜಕೀಯ ಪ್ರೇರಿತ. ಗೌಡ ಅವರು ಕಾಂಗ್ರೆಸ್ ಮುಖಂಡರಾಗಿದ್ದು, ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ದಾಳಿ ಖಂಡನೀಯ ಎಂದು ಸಮಿತಿಯ ಸದಸ್ಯರು ತಿಳಿಸಿದರು.</p>.<p>‘ಮಂಜುನಾಥ ಗೌಡರು ಆರು ಬಾರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಡಿಸಿಸಿ ಬ್ಯಾಂಕಿನಲ್ಲಿ ಈ ಹಿಂದೆ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅವರನ್ನು ಆರೋಪಿಯನ್ನಾಗಿಸಲಾಗಿತ್ತು. ಸಿಐಡಿ ತನಿಖೆ ಕೂಡ ಮಾಡಲಾಗಿತ್ತು. ಆದರೆ ತನಿಖೆಯಲ್ಲಿ ಅವರ ಪಾತ್ರ ಇಲ್ಲ ಎಂದು ಹೇಳಲಾಗಿದೆ. ಅವರು ಮತ್ತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಇವರ ಏಳಿಗೆ ಸಹಿಸದ ಕೆಲವರು ರಾಜಕೀಯ ಪ್ರೇರಿತವಾಗಿ ಈ ದಾಳಿ ನಡೆಸಲು ಕುಮ್ಮಕ್ಕು ನೀಡಿದ್ದಾರೆ’ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.</p>.<p>ನಾಗರಾಜ್ ಕಂಕಾರಿ, ಎಚ್.ಪಾಲಾಕ್ಷಿ, ಎನ್.ಎಸ್.ಮಹೇಶ್, ಗಾಡಿಕೊಪ್ಪ ರಾಜಣ್ಣ, ಅನಿಲ್ಕುಮಾರ್, ಆನಂದ್, ಉಮೇಶ್, ಭಾಸ್ಕರ್. ಶಾಮು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>