<p><strong>ಶಿವಮೊಗ್ಗ</strong>: ‘ಇಲ್ಲಿನ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿ ಜೆಡಿಎಸ್ ನಗರ ಘಟಕದಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.</p>.<p>‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇದುವರೆಗೂ ಸೂಡಾ ವ್ಯಾಪ್ತಿಯಲ್ಲಿ ನಡೆಸಿರುವ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸಬೇಕು. ಬಡವರಿಗೆ ಕಡಿಮೆ ದರದಲ್ಲಿ ನಿವೇಶನ ಕೊಡಬೇಕಾದ ಸೂಡಾ, ಸುಳ್ಳು ರಸೀದಿ, ಅವೈಜ್ಞಾನಿಕ ಕಾಮಗಾರಿಗಳ ಮೂಲಕ ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡುತ್ತಿದೆ. ಈ ಬಗ್ಗೆ ಇಬ್ಬರು ಗುತ್ತಿಗೆದಾರರು ದೂರು ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ’ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>ಊರಗಡೂರು ಬಡಾವಣೆ ಸೇರಿದಂತೆ ಸೂಡಾ ನಿರ್ಮಿಸುತ್ತಿರುವ ಬಡಾವಣೆಗಳ ಕಾಮಗಾರಿಯಲ್ಲೂ ಅಕ್ರಮ ನಡೆದಿದೆ. ಇದರಿಂದ ನಿವೇಶನ ಆಕಾಂಕ್ಷಿಗಳಿಗೆ ತೊಂದರೆಯಾಗಿದೆ. ಬಡಾವಣೆಗಳ ರಸ್ತೆ ನಿರ್ಮಾಣಕ್ಕೆ ನಿವೇಶನದ ಜಾಗದಿಂದಲೇ ಮಣ್ಣು ಬಗೆದು ಬಳಸಲಾಗಿದೆ. ಆ ನಿವೇಶನದ ಗುಂಡಿಗಳಿಗೆ ನಗರದ ಕಸ ತುಂಬಲಾಗಿದೆ ಎಂದು ಆರೋಪಿಸಿದರು.</p>.<p>ಆದ್ದರಿಂದ ಜಿಲ್ಲಾಡಳಿತ 91ಕ್ಕೂ ಹೆಚ್ಚು ಕಾಮಗಾರಿಗಳ ಬಗ್ಗೆ ತನಿಖೆ ನಡೆಸಬೇಕು. ದುರುಪಯೋಗವಾದ ಹಣ ತಪ್ಪಿತಸ್ಥರಿಂದ ಪ್ರಾಧಿಕಾರಕ್ಕೆ ಮರು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.</p>.<p>ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕಡಿದಾಳ್ ಗೋಪಾಲ್, ಮುಖಂಡರಾದ ದೀಪಕ್ ಸಿಂಗ್, ಗೀತಾ ಸತೀಶ್, ಸಂಜಯ್ ಸೇರಿದಂತೆ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ‘ಇಲ್ಲಿನ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿ ಜೆಡಿಎಸ್ ನಗರ ಘಟಕದಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.</p>.<p>‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇದುವರೆಗೂ ಸೂಡಾ ವ್ಯಾಪ್ತಿಯಲ್ಲಿ ನಡೆಸಿರುವ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸಬೇಕು. ಬಡವರಿಗೆ ಕಡಿಮೆ ದರದಲ್ಲಿ ನಿವೇಶನ ಕೊಡಬೇಕಾದ ಸೂಡಾ, ಸುಳ್ಳು ರಸೀದಿ, ಅವೈಜ್ಞಾನಿಕ ಕಾಮಗಾರಿಗಳ ಮೂಲಕ ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡುತ್ತಿದೆ. ಈ ಬಗ್ಗೆ ಇಬ್ಬರು ಗುತ್ತಿಗೆದಾರರು ದೂರು ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ’ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>ಊರಗಡೂರು ಬಡಾವಣೆ ಸೇರಿದಂತೆ ಸೂಡಾ ನಿರ್ಮಿಸುತ್ತಿರುವ ಬಡಾವಣೆಗಳ ಕಾಮಗಾರಿಯಲ್ಲೂ ಅಕ್ರಮ ನಡೆದಿದೆ. ಇದರಿಂದ ನಿವೇಶನ ಆಕಾಂಕ್ಷಿಗಳಿಗೆ ತೊಂದರೆಯಾಗಿದೆ. ಬಡಾವಣೆಗಳ ರಸ್ತೆ ನಿರ್ಮಾಣಕ್ಕೆ ನಿವೇಶನದ ಜಾಗದಿಂದಲೇ ಮಣ್ಣು ಬಗೆದು ಬಳಸಲಾಗಿದೆ. ಆ ನಿವೇಶನದ ಗುಂಡಿಗಳಿಗೆ ನಗರದ ಕಸ ತುಂಬಲಾಗಿದೆ ಎಂದು ಆರೋಪಿಸಿದರು.</p>.<p>ಆದ್ದರಿಂದ ಜಿಲ್ಲಾಡಳಿತ 91ಕ್ಕೂ ಹೆಚ್ಚು ಕಾಮಗಾರಿಗಳ ಬಗ್ಗೆ ತನಿಖೆ ನಡೆಸಬೇಕು. ದುರುಪಯೋಗವಾದ ಹಣ ತಪ್ಪಿತಸ್ಥರಿಂದ ಪ್ರಾಧಿಕಾರಕ್ಕೆ ಮರು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.</p>.<p>ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕಡಿದಾಳ್ ಗೋಪಾಲ್, ಮುಖಂಡರಾದ ದೀಪಕ್ ಸಿಂಗ್, ಗೀತಾ ಸತೀಶ್, ಸಂಜಯ್ ಸೇರಿದಂತೆ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>