ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವಿಗೆ ಸಂಭ್ರಮಾಚರಣೆ

Last Updated 3 ನವೆಂಬರ್ 2021, 4:33 IST
ಅಕ್ಷರ ಗಾತ್ರ

ಆನವಟ್ಟಿ: ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರ ಗೆಲುವಿಗೆ ಆನವಟ್ಟಿ ಬ್ಲಾಕ್ ಅಧ್ಯಕ್ಷ ಆರ್.ಸಿ. ಪಾಟೀಲ್ ಸಂತಸವ್ಯಕ್ತಪಡಿಸಿದರು.

ಮಾಜಿ ಶಾಸಕ ಮಧು ಬಂಗಾರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ, ಎಚ್.ಕೆ. ಪಾಟೀಲ್ ಸೇರಿ ಹಲವು ನಾಯಕರ ಶ್ರಮದಿಂದಾಗಿ ಈ ಗೆಲುವು ಸಾಧ್ಯವಾಗಿದೆ. ಬಿಜೆಪಿ ಹಣದ ಹೊಳೆಯನ್ನೇ ಹರಿಸಿದರೂ, ಕಾಂಗ್ರೆಸ್‌ ಕಡೆಗೆ ಜನರ ಒಲವು ದಿನದಿಂದದಿನಕ್ಕೆ ಹೆಚ್ಚಾಗುತ್ತಿದೆ ಎಂದು ಹೇಳಿದರು.

ಅಗತ್ಯ ಬೆಲೆಗಳ ಏರಿಕೆಯಿಂದಾಗಿ ಮೋದಿ ಸರ್ಕಾರ ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಬಿಜೆಪಿ ಜನರ ನಿರೀಕ್ಷೆಯನ್ನು ಹುಸಿ ಮಾಡಿದೆ ಎಂದರು.

ಪಟಾಕಿ ಸಿಡಿಸಿ, ಸಿಹಿ ಹಂಚಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ಮಧುಕೇಶ್ವರ ಪಾಟೀಲ್, ಖಲಂದರ್ ಸಾಬ್, ಹಬೀಬ್‌ ಉಲ್ಲಾ ಹವಾಲ್ದಾರ್, ಸಂಜೀವ ತರಕಾರಿ, ವಿಜಯ ಶಕುನವಳ್ಳಿ, ಕೃಷ್ಣಪ್ಪ ತಲ್ಲೂರು, ದರ್ಶನ ಶಾಂತಿನಗರ ಅವರೂ ಈ ಸಂದರ್ಭದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT