ಪಿಎಸ್ಐ ನೇಮಕಾತಿ ಅಕ್ರಮದ ಕಾರಣ ಇಡೀ ಆಯ್ಕೆ ಪಟ್ಟಿಯನ್ನೇ ರದ್ದುಪಡಿಸಿ, ಮರುಪರೀಕ್ಷೆಗೆ ಸರ್ಕಾರ ಆದೇಶ ಮಾಡಿರುವುದು ಸರಿಯಲ್ಲ. ಮರು ಪರೀಕ್ಷೆ ನೆಪದಲ್ಲಿ ಆಪಾದಿತರನ್ನು ರಕ್ಷಿಸಲು ಸರ್ಕಾರ ಮುಂದಾಗಿದೆ. ಪಿಎಸ್ಐ ಆಯ್ಕೆಗೆ ಪರೀಕ್ಷೆ ಬರೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆಯಾಗಿದೆ. ಹಲವು ಆಕಾಂಕ್ಷಿಗಳು ಅತ್ಯಂತ ಬಡತನದಿಂದ ಬಂದು, ಕಷ್ಟಪಟ್ಟು ಓದಿ ಪರೀಕ್ಷೆ ತೇರ್ಗಡೆಯಾಗಿದ್ದಾರೆ. ಈಗ ಮರು ಪರೀಕ್ಷೆ ಮಾಡಿದರೆ ಜಿಗುಪ್ಸೆಗೊಂಡು ಆತ್ಮಹತ್ಯೆಗೂ ಮುಂದಾಗಬಹುದು. ಹಾಗಾಗಿ, ತಾತ್ಕಾಲಿಕ ಪಟ್ಟಿಯನ್ನು ರದ್ದಪಡಿಸುವ ನಿರ್ಧಾರ ಮತ್ತೊಮ್ಮೆ ಪರಿಶೀಲಿಸಬೇಕು. ಸಿಐಡಿ ತನಿಖೆ ಪೂರ್ಣಗೊಳ್ಳುವ ಮುನ್ನವೇ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿರುವುದು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ’ ಎಂದರು.