ಲಾಕ್ಡೌನ್ನಿಂದ ಎಲ್ಲ ವಲಯ, ವರ್ಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಸಂಕಷ್ಟ ತಗ್ಗಿಸಲು ಕೇಂದ್ರ ಸರ್ಕಾರ ₹ 20 ಲಕ್ಷ ಕೋಟಿ ಘೋಷಿಸಿದೆ. ಈ ವಿಶೇಷಪ್ಯಾಕೇಜ್ ಜನರ ಮೂಗಿಗೆ ತುಪ್ಪ ಸವರುವ ನಡೆ ಅಷ್ಟೆ. ದೊಡ್ಡದೊಡ್ಡ ಕೈಗಾರಿಕೆಗಳಿಗೆ, ಉದ್ಯಮಿಗಳಿಗೆ ಅನುಕೂಲ ಮಾಡಿಕೊಡುತ್ತದೆ. ಬಡವರು, ಶ್ರಮಿಕ ವರ್ಗ, ರೈತರು, ನಿರುದ್ಯೋಗಿಗಳಿಗೆ ಯಾವುದೇ ಪ್ರಯೋಜನವಿಲ್ಲ. ಹಾಗಾಗಿ, ಇಂತಹ ವರ್ಗಗಳಿಗೇ ವಿಶೇಷ ಪ್ಯಾಕೇಜ್ ಘೋಷಿಸಬೇಕು.ರೈತರು ಮಾಡಿದ ಎಲ್ಲ ಬ್ಯಾಂಕ್ಗಳಲ್ಲಿನ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಮಿಕ ವರ್ಗದವರಿಗೆಎರಡುತಿಂಗಳಿಗಾಗುವಷ್ಟು ಆಹಾರ ಧಾನ್ಯ ವಿತರಿಸಬೇಕು ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.